ರಾಜ್ಯದಲ್ಲಿ ಪ್ರಗತಿ ಕಾಣದ “ಉನ್ನತಿ’ ಯೋಜನೆ

ಜಾರಿಯಾಗಿರುವ 29 ಜಿಲ್ಲೆಗಳ ಪೈಕಿ 7ರಲ್ಲಿ ಮಾತ್ರ ಸಾಧ® ; ಶೇ.8-10 ಮಂದಿಗೆ ತರಬೇತಿ

Team Udayavani, Nov 11, 2021, 5:20 AM IST

ರಾಜ್ಯದಲ್ಲಿ ಪ್ರಗತಿ ಕಾಣದ “ಉನ್ನತಿ’ ಯೋಜನೆ

ಬೆಂಗಳೂರು: ಕೇಂದ್ರದ ಮಹತ್ವಾಕಾಂಕ್ಷಿ “ಉನ್ನತಿ ಯೋಜನೆ’ಗೆ ರಾಜ್ಯದಿಂದ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉದ್ದೇಶಿತ ಈ ಯೋಜನೆ ಪ್ರಗತಿಯಲ್ಲಿ 20 ಜಿಲ್ಲೆಗಳು ಶೂನ್ಯ ಸಂಪಾದನೆ ಮಾಡಿವೆ!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನೂರು ದಿನಗಳನ್ನು ಪೂರೈಸಿರುವವರ ಪ್ರತಿ ಕುಟುಂಬದಿಂದ ತಲಾ ಒಬ್ಬರನ್ನು ಆಯ್ಕೆ ಮಾಡಿ, ಅವರಿಗೆ ಕೌಶಲ ಅಭಿವೃದ್ಧಿ ಇಲಾಖೆಯಿಂದ ಕೌಶಲ ತರಬೇತಿ ನೀಡಲಾಗುವುದು. ಆ ಮೂಲಕ ಇದುವರೆಗೆ ಕೂಲಿ ಮಾಡಿಕೊಂಡು ಬಂದ ಕುಟುಂಬಗಳಿಗೆ ನಿರಂತರ ಉದ್ಯೋಗ ಮತ್ತು ಆದಾಯ ಕಲ್ಪಿಸುವ ಅರ್ಥಪೂರ್ಣ ಕಾರ್ಯಕ್ರಮವೇ “ಉನ್ನತಿ’. ಆದರೆ, ಎರಡು ವರ್ಷಗಳಿಂದ ಈ ಯೋಜನೆ ರಾಜ್ಯದಲ್ಲಿ ನೇಪಥ್ಯಕ್ಕೆ ಸರಿದಿದೆ. ಬಹುತೇಕ ಜಿಲ್ಲೆಗಳು ಶೂನ್ಯ ಸಂಪಾದನೆ ಮಾಡಿದ್ದರೆ, ಕೆಲವು ಜಿಲ್ಲೆಗಳು ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ತರಬೇತಿ ನೀಡಿ ಕೈತೊಳೆದುಕೊಂಡಿವೆ.

2021-22ನೇ ಸಾಲಿನಲ್ಲಿ (ನವೆಂಬರ್‌ವರೆಗೆ) ಕನಿಷ್ಠ ಎರಡೂವರೆ ಸಾವಿರ ಜನರಿಗೆ ಕೌಶಲ ತರಬೇತಿ ನೀಡುವ ಗುರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನೀಡಿತ್ತು. ಈ ಪೈಕಿ ರಾಜ್ಯದಲ್ಲಿ ಒಟ್ಟಾರೆ ಕೇವಲ ಶೇ. 8-10ರಷ್ಟು ಅಂದರೆ ಸುಮಾರು 200 ಜನರಿಗೆ ಮಾತ್ರ ತರಬೇತಿ ನೀಡಲಾಗಿದೆ. 2020-21ರಲ್ಲಿ ಕನಿಷ್ಠ 900 ಜನರಿಗೆ ತರಬೇತಿ ನೀಡಲು ಗುರಿ ವಿಧಿಸ ಲಾಗಿತ್ತು. ಆದರೆ, 355 ಜನರಿಗೆ ಅಂದರೆ ಶೇ.39ರಷ್ಟು ಪ್ರಗತಿ ಸಾಧಿ ಸಲಾಗಿದೆ. ಹೀಗೆ ತರಬೇತಿ ಪಡೆದ ಅನೇಕರಿಗೆ ತಾಂತ್ರಿಕ ಕಾರಣಗಳ ನೆಪದಲ್ಲಿ ಗೌರವಧನ ಕೂಡ ಒದಗಿಸಿಲ್ಲ ಎಂದು ಇಲಾಖೆ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಶೂನ್ಯ ಸಾಧನೆ
ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ, ಯಾದಗಿರಿ, ಬೆಳಗಾವಿ, ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕಲಬುರಗಿ, ಕೊಡಗು, ಕೋಲಾರ, ಮೈಸೂರು, ರಾಮನಗರ. ಉಳಿ ದಂತೆ ಬೆಂಗಳೂರು ಗ್ರಾಮಾಂತ ರ ದಲ್ಲಿ 23, ಬಳ್ಳಾರಿ 32, ಗದಗ 20, ಮಂಡ್ಯ 17, ಕೊಪ್ಪಳ 18, ಹಾವೇರಿ 6, ದಾವಣಗೆರೆ 5, ರಾಯಚೂರು 67, ಶಿವಮೊಗ್ಗದಲ್ಲಿ 22 ಮಂದಿಗೆ ತರ ಬೇತಿ ನೀಡಲಾಗಿದೆ.

ಮುಖ್ಯಾಂಶಗಳು
ಜಾಬ್‌ ಕಾರ್ಡ್‌ ಇರುವವರ ಸಂಖ್ಯೆ – 60 ಲಕ್ಷ
ಸಕ್ರಿಯರಾಗಿರುವ ವರ ಸಂಖ್ಯೆ – 35-40 ಲಕ್ಷ
ನೂರು ದಿನ ಪೂರೈಸಿದವರು – 1-2 ಲಕ್ಷ
ಹಾಲಿ ವರ್ಷದಲ್ಲಿ ನೂರು ದಿನ ಪೂರೈಸಿದವರು – 25-30 ಸಾವಿರ

1. ತರಬೇತಿ ವಿಷಯ
ಹೈನುಗಾರಿಕೆ, ಕುರಿ ಸಾಕಣೆ, ಎರೆಹುಳು ಗೊಬ್ಬರ ತಯಾರಿಕೆ, ಇತರ.
2. ತರಬೇತಿ ಕೇಂದ್ರ
RSETI ಅಥವಾ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)
3. ತರಬೇತಿ ಅವಧಿ
ಸಾಮಾನ್ಯವಾಗಿ 7ರಿಂದ 10ದಿನ
4. ಗೌರವ ಧನ ವಿವರ
ನಿತ್ಯ 200 ರೂ.ಗಳಂತೆ ಗೌರವಧನ
5. ಯೋಜನೆ ಹಿನ್ನಡೆಗೆ ಕಾರಣ
ಜಿ.ಪಂ. ಕಾರ್ಯನಿರ್ವಹಣಾ ಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗುರಿ ಸಾಧ್ಯವಾಗಿಲ್ಲ ಎಂಬುದು ಕೆಲವು ಅಧಿಕಾರಿಗಳ ಮಾತು.

“ಉನ್ನತಿ’ ಯೋಜನೆಯಡಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಬಗ್ಗೆ ಈಗಾಗಲೇ ಪರಿಶೀಲಿಸಿ, ಎಲ್ಲ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಯಾ ಗ್ರಾಮ ಮಟ್ಟದಲ್ಲೇ ತರಬೇತಿ ನೀಡಲು ಸಾಧ್ಯತೆಗಳ ಕುರಿತು ಗಮನಹರಿಸಿ, ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.
– ಎಲ್‌.ಕೆ. ಅತೀಕ್‌, ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ

-ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.