Madikeri: 6 ತಾಸಿನಲ್ಲೇ ಕಳವು ಆರೋಪಿ ಬಂಧನ
Team Udayavani, Aug 23, 2024, 9:12 PM IST
ಮಡಿಕೇರಿ: ಹಾಡಹಗಲೇ ಚೇರಂಬಾಣೆ ಗ್ರಾಮದ ಮನೆಗೆ ನುಗ್ಗಿ ಮಹಿಳೆಯೊಬ್ಬರನ್ನು ಬೆದರಿಸಿ ಚಿನ್ನಾಭರಣಗಳನ್ನು ದರೋಡೆ ಮಾಡಿದ ಆರೋಪಿಯನ್ನು ಘಟನೆ ನಡೆದ ಕೇವಲ 6 ಗಂಟೆಗಳಲ್ಲಿ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ, ಭಾಗಮಂಡಲ ಮತ್ತು ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಚೇರಂಬಾಣೆ ನಿವಾಸಿ ಸುದರ್ಶನ್ (24) ಬಂಧಿತ ಆರೋಪಿ.
ಸಣ್ಣಪಲಿಕೋಟು ಬಸ್ ನಿಲ್ದಾಣದ ಬಳಿ ಈತನನ್ನು ಪೊಲೀಸರು ಬಂಧಿಸಿದ್ದು, ಕಳವು ಮಾಡಿದ್ದ 60.530 ಗ್ರಾಂ ಚಿನ್ನಾಭರಣ, 620 ರೂ. ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.
ಆ.22ರಂದು ಭಾಗಮಂಡಲ ಪೊಲೀಸ್ ಠಾಣೆ ವ್ಯಾಪ್ತಿಯ ಚೇರಂಬಾಣೆ ಗ್ರಾಮದ ನಿವಾಸಿ ಗೋಪಾಲಕೃಷ್ಣ ಕೆ.ಕೆ. ಅವರ ತಾಯಿ ಮನೆಯಲ್ಲಿ ಒಬ್ಬರೇ ಇದ್ದಾಗ ಬೆಳಗ್ಗೆ ಸುಮಾರು 11.30 ಗಂಟೆಗೆ ಆರೋಪಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.