![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 6, 2023, 9:00 PM IST
ಪಾಟ್ನಾ: ವಿಪಕ್ಷಗಳ ಒಕ್ಕೂಟದಲ್ಲಿ ಬಿರುಕು ಮೂಡಿದೆ, ಅದೇ ಕಾರಣಕ್ಕಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಒಕ್ಕೂಟದ ಸಭೆಯಲ್ಲಿ ಭಾಗಿಯಾಗಲು ನಿರಾಕರಿಸಿದ್ದಾರೆ ಎನ್ನುವ ಸುದ್ದಿ ಕೇವಲ ವದಂತಿ ಮಾತ್ರ ಎಂದು ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಪಂಚರಾಜ್ಯ ಚುನಾವಣೆಗಳ ಫಲಿತಾಂಶದ ಬೆನ್ನಲ್ಲೇ ಬುಧವಾರ ವಿಪಕ್ಷಗಳ ಒಕ್ಕೂಟವಾದ ಇಂಡಿಯಾದ ಸಭೆ ನಡೆಸಲು ಯೋಜಿಸಲಾಗಿತ್ತು. ಆದರೆ, ಒಕ್ಕೂಟದ ಹಲವು ನಾಯಕರು ಭಾಗಿಯಾಗದ ಕಾರಣ ಸಭೆಯನ್ನು ಡಿ.17ಕ್ಕೆ ಮುಂದೂಡಲಾಗಿದೆ.
ಒಕ್ಕೂಟದ ನಾಯಕರ ನಡುವೆ ವೈಮನಸ್ಸಿರುವ ಕಾರಣಕ್ಕಾಗಿಯೇ ನಿತೀಶ್ ಸಭೆ ನಿರಾಕರಿಸಿದ್ದಾರೆ ಎಂಬ ಮಾತೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಿತೀಶ್ ಸ್ಪಷ್ಟನೆ ನೀಡಿದ್ದು, ನನಗೆ ಜ್ವರ ಬಂದಿದ್ದ ಕಾರಣ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದೆ. ಅದರ ಹೊರತಾಗಿ ಮತ್ತೆಲ್ಲವೂ ಕೇವಲ ವದಂತಿ ಮಾತ್ರ. ಇದೇ ತಿಂಗಳ 3ನೇ ವಾರಕ್ಕೆ ಸಭೆ ಮುಂದೂಡಲಾಗಿದೆ ಆಗ ನಾನು ಖಂಡಿತವಾಗಿಯೂ ಭಾಗಿಯಾಗುತ್ತೇನೆ ಎಂದಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.