![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
ISRO: “ಶಿವಶಕ್ತಿ ಹೆಸರಲ್ಲಿ ತಪ್ಪೇನಿಲ್ಲ”- ಇಸ್ರೋ ಮುಖ್ಯಸ್ಥ ಸೋಮನಾಥ್ ಪ್ರತಿಪಾದನೆ
Team Udayavani, Aug 28, 2023, 12:35 AM IST
![SOMANATH](https://www.udayavani.com/wp-content/uploads/2023/08/SOMANATH-620x372.jpg)
ಹೊಸದಿಲ್ಲಿ: ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಳಿದಿರುವ ಜಾಗವನ್ನು “ಶಿವಶಕ್ತಿ’ ಎಂದು ಹೆಸರಿಸಿರುವುದಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ರವಿವಾರ ಸ್ಪಷ್ಟಪಡಿಸಿದ್ದಾರೆ.
ಕೇರಳದ ತಿರುವನಂತಪುರದ ಭದ್ರಕಾಳಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ದರು. ಈ ವೇಳೆ “ವಿಕ್ರಮ್ ಲ್ಯಾಂಡರ್ ಇಳಿದಿರುವ ಜಾಗವನ್ನು ಪ್ರಧಾನಿ ಮೋದಿ ಅವರು ಶಿವಶಕ್ತಿ ಎಂದು ಹೆಸರಿಸಿ, ನಮ್ಮೆಲ್ಲರಿಗೂ ಅನ್ವಯವಾಗುವಂತೆ ಇಡೀ ದೇಶಕ್ಕೆ ಅರ್ಥವಾಗುವಂತೆ ಅದನ್ನು ವಿವರಿ ಸಿದ್ದಾರೆ. ದೇಶದ ಪ್ರಧಾನಿಯಾಗಿ ಚಂದ್ರ ಯಾನ-3ರ ಲ್ಯಾಂಡಿಂಗ್ ಪಾಯಿಂಟ್ಗೆ ಹೆಸರನ್ನು ಇಡುವ ಹಕ್ಕು ಅವರಿಗಿದೆ. ಹಾಗಾಗಿ ಶಿವಶಕ್ತಿ ಹೆಸರಿನಲ್ಲಿ ತಪ್ಪೇನಿಲ್ಲ. ಅದಷ್ಟೇ ಅಲ್ಲದೇ ಚಂದ್ರಯಾನ-2ರ ಲ್ಯಾಂಡಿಂಗ್ ಪಾಯಿಂಟ್ಗೂ ತಿರಂಗಾ ಪಾಯಿಂಟ್ ಎಂದು ಹೆಸರನ್ನು ಸೂಚಿ ಸಿದ್ದು ಈ ಎರಡು ಭಾರತೀಯ ಹೆಸರು ಗಳು ಸಮಂಜಸವಾಗಿವೆ’ ಎಂದಿದ್ದಾರೆ.
ವಿಜ್ಞಾನ -ಅಧ್ಯಾತ್ಮ ಎರಡೂ ನನ್ನ ಪರಿಧಿ: ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ದೇವಸ್ಥಾನ ಭೇಟಿ ಬಗ್ಗೆ ಮಾತನಾಡಿದ ಅವರು ನಂಬಿಕೆ ಮತ್ತು ವಿಜ್ಞಾನ ಎರಡೂ ವಿಭಿನ್ನ. ಅವುಗಳನ್ನು ಬೆರೆಸುವ ಅಗತ್ಯ ವಿಲ್ಲ. ಅಲ್ಲದೇ ನಾನೊಬ್ಬ ಅನ್ವೇಷಕ! ನಾನು ಚಂದ್ರನನ್ನು ಅನ್ವೇಷಿಸುತ್ತೇನೆ, ಅದೇ ರೀತಿ ನನ್ನ ಅಂತರಾಳವನ್ನೂ ಅನ್ವೇಷಿಸುತ್ತೇನೆ. ವಿಜ್ಞಾನ ಮತ್ತು ಅಧ್ಯಾತ್ಮ ಎರಡೂ ನನ್ನ ಜೀವನದ ಪರಿಧಿಯ ಭಾಗ. ದೇವಸ್ಥಾನಗಳಿಗೆ ಹೋಗುತ್ತೇನೆ, ಗ್ರಂಥಗಳನ್ನು ಓದುತ್ತೇನೆ, ಬ್ರಹ್ಮಾಂಡದಲ್ಲಿ ನನ್ನ ಅಸ್ತಿತ್ವ ಮತ್ತು ಅದರ ಅರ್ಥವನ್ನು ಅನ್ವೇಷಿಸಲು ಪ್ರಯತ್ನಿಸುತ್ತೇನೆ. ಹೊರಗಿನ ಪ್ರಪಂಚಕ್ಕಾಗಿ ಅಲ್ಲಿನ ನನ್ನ ಅಸ್ತಿತ್ವಕ್ಕಾಗಿ ವಿಜ್ಞಾನವನ್ನು ಆಧರಿಸುವಂತೆಯೇ, ಅಂತರಾತ್ಮಕ್ಕಾಗಿ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
![NIA](https://www.udayavani.com/wp-content/uploads/2024/07/NIA-150x100.jpg)
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.