Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ
Team Udayavani, Oct 18, 2024, 12:45 AM IST
ಕೋಟ: ಸಾಲಿಗ್ರಾಮ ಸಮೀಪದ ಪಾರಂಪಳ್ಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಸುಪಾಸಿನಲ್ಲಿ ರಾತ್ರಿ ವೇಳೆ ಕಳ್ಳರ ಸಂಚಾರದ ಕುರಿತು ಸ್ಥಳೀಯರಲ್ಲಿ ಅನುಮಾನ ವ್ಯಕ್ತವಾಗಿದೆ.
ವಾರದ ಹಿಂದೆ ಸ್ಥಳೀಯ ಮನೆಯೊಂದರ ಸಮೀಪ ರಾತ್ರಿ ಆಗುಂತಕ ವ್ಯಕ್ತಿಯೋರ್ವ ಅನುಮಾನಸ್ಪದ ರೀತಿಯಲ್ಲಿ ಓಡಾಟ ನಡೆಸುತ್ತಿದ್ದ. ಅನಂತರ ಸಿಸಿ ಟಿ.ವಿ. ಪರಿಶೀಲಿಸಿದಾಗ ಅಪರಿಚಿತ ವ್ಯಕ್ತಿಯೋರ್ವ ಕಾಂಪೌಂಡ್ ಬಳಿ ಓಡಾಡುವ ದೃಶ್ಯ ಕಂಡುಬಂದಿತ್ತು. ಈ ಬಗ್ಗೆ ಪೊಲೀಸರಿಗೆ ಮೌಖೀಕವಾಗಿ ತಿಳಿಸಿದ್ದು, ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಾರದ ಅನಂತರ ಘಟನೆಯ ಸಿಸಿ ಟಿ.ವಿ.ಯ ದೃಶ್ಯ ಮೊಬೈಲ್ನಲ್ಲಿ ಹರಿದಾಡಿದ್ದು, ಆತಂಕ ಮೂಡಿಸಿದೆ. ಕಳೆದ ತಿಂಗಳು ಹಂಗಾರಕಟ್ಟೆ ಭಾಗದಲ್ಲೂ ಇದೇ ರೀತಿ ಆಗಂತುಕ ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ಸಂಚಾರ ನಡೆಸುತ್ತಿದ್ದರು. ಕೆಲವು ಮನೆಗಳ ಬಾಗಿಲು ಬಡಿಯುತ್ತಿದ್ದರು ಎನ್ನುವ ಬಗ್ಗೆಯೂ ದೂರು ಕೇಳಿ ಬಂದಿತ್ತು. ಪೊಲೀಸರು ರಾತ್ರಿ ಗಸ್ತು ಹೆಚ್ಚಿಸುವ ಮೂಲಕ ಇಂತಹ ಕೃತ್ಯಗಳನ್ನು ತಡೆಯಬೇಕು ಎನ್ನುವ ಆಗ್ರಹ ಸಾರ್ವಜನಿಕರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.