Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

ಯುಟ್ಯೂಬ್‌ನಲ್ಲಿದೆ ಸಮಾಜಸೇವೆಯ ಹಲವು ವೀಡಿಯೋ

Team Udayavani, Apr 23, 2024, 6:45 AM IST

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

ಕೋಟ: ಕೇರಳದಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಮಹಮ್ಮದ್‌ ಇರ್ಫಾನ್‌ನನ್ನು ಬ್ರಹ್ಮಾವರ ತಾಲೂಕು ಕೋಟ ಮೂರ್ಕೈಯಲ್ಲಿ ಶ‌ನಿವಾರ ರಾತ್ರಿ ಕೋಟ ಪೊಲೀಸರು ಬಂಧಿಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದರು.

ಇದೀಗ ಈತನ ವಿರುದ್ಧ 13 ರಾಜ್ಯಗಳಲ್ಲಿ ಹಲವಾರು ಕಳ್ಳತನ ಆರೋಪಗಳಿವೆ ಎನ್ನುವುದರ ಜತೆಗೆ ಹಲವಾರು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ.

ಈತ ಈಗಾಗಲೇ ಹಲವು ಬಾರಿ ಪೊಲೀಸರ ಅತಿಥಿಯಾಗಿದ್ದ. ಸಿನೆಮಾ ನಟರು, ರಾಜಕಾರಣಿಗಳು, ಗುತ್ತಿಗೆದಾರರ ಸೇರಿದಂತೆ ಅತ್ಯಂತ ಶ್ರೀಮಂತರ ಮನೆಗಳನ್ನೇ ಹೊಂಚುಹಾಕಿ ಕಳ್ಳತನ ಮಾಡುತ್ತಿದ್ದ, ಒಮ್ಮೆ ಕಣ್ಣಿಟ್ಟರೆ ಎಷ್ಟೇ ದಿನವಾದರು ಕಾದು ತನ್ನ ಕೈಚಳಕ ತೋರುತ್ತಿದ್ದ, ಹೆಚ್ಚಿನ ಬಾರಿ ಓರ್ವನೇ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಪ್ರತಿ ಬಾರಿಯೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನೇ ಲಪಟಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.

ಕುತೂಹಲಕಾರಿ ಹಿನ್ನೆಲೆ
ಈತನ ಹಿನ್ನೆಲೆ ಅತ್ಯಂತ ಕೌತುಕವಾಗಿದೆ. ತನ್ನ 22ನೇ ವಯಸ್ಸಿನಲ್ಲೇ ಕಳ್ಳತನ ಆರಂಭಿಸಿದ ಈತ ಪ್ರಥಮವಾಗಿ ತನ್ನ ತಂಗಿಯ ಮದುವೆಯ ಖರ್ಚಿಗೆಂದು ಕಳ್ಳತನ ಮಾಡಿದ್ದನಂತೆ. ಅನಂತರ ಪ್ರತೀ ಬಾರಿ ಲಪಟಾಯಿಸಿದ ಹಣದಲ್ಲಿ ತನಗೆ ಸ್ವಲ್ಪವನ್ನೇ ಇರಿಸಿಕೊಂಡು ಹೆಚ್ಚಿನ ಮೊತ್ತವನ್ನು ಊರಿನವರ ಮದುವೆ, ಆರೋಗ್ಯದ ಸಮಸ್ಯೆ ಮತ್ತು ರಸ್ತೆ ಮುಂತಾದ ಊರಿನ ಅಭಿವೃದ್ಧಿಗೆ ಹಂಚುತ್ತಿದ್ದನಂತೆ. ಹೀಗಾಗಿ ಊರಿನವರು ಈತನನ್ನು ಖ್ಯಾತ ಸಮಾಜ ಸೇವಕ ರೋಬಿನ್‌ಹುಡ್‌ ಹೆಸರಲ್ಲಿ ಗುರುತಿಸುತ್ತಿದ್ದರಂತೆ.

ಊರಿನವರಿಗೆ ಈತನ ಮೇಲೆ ಸಾಕಷ್ಟು ಪ್ರೀತಿ ಇರುವುದರಿಂದ ಈತನ ಪತ್ನಿ ಜಿ.ಪಂ. ಸದಸ್ಯೆಯಾಗಿ ಕೂಡ ಆಯ್ಕೆಯಾಗಿದ್ದಳು ಹಾಗೂ ಈತ ಎಷ್ಟೇ ಬಾರಿ ಪೊಲೀಸರ ಅತಿಥಿಯಾದರು ಊರಿನವರೇ ಮುಂದೆ ನಿಂತು ಜೈಲ್‌ನಿಂದ ಹೊರತರುತ್ತಿದ್ದರು ಎನ್ನುವುದು ಕುತೂಹಲದ ವಿಷಯವಾಗಿದೆ. ಕರ್ನಾಟಕ, ಕೇರಳ, ಗೋವಾ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳೇ ಈತನ ಗುರಿ ಆಗಿದ್ದವು. ಯಾಕೆಂದರೆ ಇಲ್ಲಿನ ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಬಳಸುತ್ತಾರೆ ಎಂದಿದ್ದಾನೆ.

ಪೊಲೀಸರೇ ಶಾಕ್‌ !
ಪೊಲೀಸರು ಈತನ ವಿಚಾರಣೆ ಗಿಳಿದಾಗ ನನ್ನ ಬಗ್ಗೆ ಮಾಹಿತಿ ಬೇಕಾದರೆ ಯೂಟ್ಯೂಬ್‌ನಲ್ಲಿ ಮಹಮ್ಮದ್‌ ಇರ್ಫಾನ್‌ರೋಬಿನ್‌ಹುಡ್‌ ಎಂದು ಸರ್ಚ್‌ ಮಾಡಿ ಎಂದಿದ್ದನಂತೆ. ಯೂಟ್ಯೂಬ್‌ನಲ್ಲಿ ಸರ್ಚ್‌ ಮಾಡಿದಾಗ ಈತನ ಬಗ್ಗೆ ಇರುವ ಹತ್ತಾರು ವೀಡಿಯೋಗಳಿದ್ದು ಅದರಲ್ಲಿ ಕಳ್ಳತನ ಹಾಗೂ ಕೋಟ್ಯಂತರ ರೂ. ಮೊತ್ತವನ್ನು ಜನರಿಗೆ ಹಂಚುವ ಕುರಿತು ವಿಚಾರಗಳಿವೆ. ಅವೆಲ್ಲವನ್ನು ನೋಡಿದ ಪೊಲೀಸರಿಗೆ ಆಶ್ಚರ್ಯವಾಗಿದೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.