![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 12, 2024, 7:33 PM IST
ಸಾಗರ: ಊಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ತಾಲೂಕಿನ ವಕೀಲರೊಬ್ಬರ ಮೇಲೆ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ನ್ಯಾಯಾಲಯದ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಮೂರು ವರ್ಷದ ಬಳಿಕ ಅಂದಿನ ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಸೇರಿ ಮೂವರು ಪೊಲೀಸರ ವಿರುದ್ಧ ದೂರು ದಾಖಲಾಗಿದೆ.
ನಗರದ ವಕೀಲ ಎಸ್.ಬಿ. ರಾಜೇಶ್ಯವರು 2019 ರ ಫೆ. 28 ರಂದು ಖಾಸಗಿ ಹೋಟೆಲ್ಗೆ ಊಟಕ್ಕೆ ಹೋಗಿದ್ದ ಸಮಯದಲ್ಲಿ ಗ್ರಾಮಾಂತರ ಸಿಪಿಐ ಮಂಜುನಾಥ, ಗೃಹ ರಕ್ಷಕ ದಳದ ಸಿಬ್ಬಂದಿ ಕೃಷ್ಣಪ್ಪ ಹಾಗೂ ಪೇದೆ ಸೈನು ನದಾಫ್ ವಕೀಲ ರಾಜೇಶ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.
ಈ ಸಂಬಂಧ ವಿನಾಕಾರಣ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಲು ಹೋದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ವಕೀಲ ರಾಜೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಮೂರು ವರ್ಷದ ಬಳಿಕ ನ್ಯಾಯಾಲಯದ ಸೂಚನೆಯಂತೆ ಪೇಟೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೧೯೩, ೩೨೩, ೩೩೭, ೩೪೧, ೩೪೨, ೩೫೨, ೩೫೫, ೩೫೭, ೫೦೪, ೫೦೬ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಕೀಲ ರಾಜೇಶ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಂದಿನ ಗ್ರಾಮಾಂತರ ಠಾಣೆಯ ಸಿಪಿಐ ಮಂಜುನಾಥರನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ. ಉಳಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಕೃಷ್ಣಪ್ಪ ಮತ್ತು ಪೇದೆ ಸೈನು ನದಾಫ್ರ ಹೆಸರುಗಳಿವೆ.
ಈ ಹಲ್ಲೆಗೆ ಕಾರಣರಾದ ಪೊಲೀಸರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಾರ್ ಕೌನ್ಸಿಲ್ ನೇತೃತ್ವದಲ್ಲಿ ಜಿಲ್ಲಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಸಾಗರ ತಾಲೂಕು ವಕೀಲರ ಸಂಘವೂ ಹೋರಾಟ ನಡೆಸಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.