
Tipper ಢಿಕ್ಕಿ: ಎಂಬಿಬಿಎಸ್ ವಿದ್ಯಾರ್ಥಿ ಸಾವು
Team Udayavani, Sep 19, 2024, 8:11 PM IST

ಕುಂಬಳೆ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸೆ. 18ರಂದು ರಾತ್ರಿ ಟಿಪ್ಪರ್ ಢಿಕ್ಕಿ ಹೊಡೆದು ಎಂ.ಬಿ.ಬಿ.ಎಸ್. ವಿದ್ಯಾರ್ಥಿ, ಕಟ್ಟತ್ತಡ್ಕ ಎ.ಕೆ.ಜಿ. ನಗರದ ಮೊಗ್ರಾಲ್ ಕೊಪ್ಪಳ ನಿವಾಸಿ ಅಹಮ್ಮದ್ ಅವರ ಪುತ್ರ ಎಂ.ಕೆ. ಮೊಹಮ್ಮದ್ ರಾಶಿದ್ (21) ಸಾವಿಗೀಡಾದರು.
ಎಂ.ಬಿ.ಬಿ.ಎಸ್. ದ್ವಿತೀಯ ವರ್ಷ ವಿದ್ಯಾರ್ಥಿಯಾಗಿರುವ ರಾಶಿದ್ ಬುಧವಾರ ರಾತ್ರಿ ಬೈಕ್ ರಸ್ತೆ ಬದಿ ನಿಲ್ಲಿಸಿ ಮತ್ತೂಂದು ಬದಿಯಲ್ಲಿರುವ ಹೊಟೇಲ್ನಿಂದ ಆಹಾರ ಖರೀದಿಸಿ ರಸ್ತೆ ದಾಟುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ರಜೆಯಲ್ಲಿ ಊರಿಗೆ ಬಂದಿದ್ದ ರಾಶಿದ್ ಒಂದು ವಾರದ ಹಿಂದೆ ಕೊಯಮುತ್ತೂರಿಗೆ ಮರಳಿದ್ದರು. ವಿಷಯ ತಿಳಿದು ಕೊಲ್ಲಿಯಲ್ಲಿರುವ ತಂದೆ ಅಹಮ್ಮದ್ ಊರಿಗೆ ಬಂದಿದ್ದಾರೆ. ರಾಶಿದ್ ಅವರ ತಾಯಿ ಸೌದಾ ಅವರ ತಂದೆ ಇಬ್ರಾಹಿಂ ಹಾಜಿ 12 ದಿನಗಳ ಹಿಂದೆ ನಿಧನ ಹೊಂದಿದ್ದರು.
ಈ ಸಂಬಂಧ ನಡೆದ ಕಾರ್ಯಕ್ರಮದಲ್ಲೂ ಮೊಹಮ್ಮದ್ ರಾಶಿದ್ ಭಾಗವಹಿಸಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.