ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ; ಕರ್ನಾಟಕ ಅರಣ್ಯ ಸಿಬಂದಿ ಮೇಲೆ ಆರೋಪ

ತಮಿಳುನಾಡಿನ ವ್ಯಕ್ತಿ ಕರ್ನಾಟಕ ಅರಣ್ಯ ಸಿಬಂದಿಯ ಗುಂಡಿಗೆ ಬಲಿ ?

Team Udayavani, Feb 17, 2023, 9:24 PM IST

police crime

ಈರೋಡ್: ತಮಿಳುನಾಡು ಮತ್ತು ಕರ್ನಾಟಕದ ಅಂತಾರಾಜ್ಯ ಗಡಿಯಲ್ಲಿ ದಿನಗಳ ಹಿಂದೆ ನಾಪತ್ತೆಯಾಗಿದ್ದ 40 ವರ್ಷದ ವ್ಯಕ್ತಿಯ ಶವ ಶುಕ್ರವಾರ ಈರೋಡ್ ಜಿಲ್ಲೆಯ ಪಾಲಾರ್ ನದಿಯಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ಅರಣ್ಯ ಸಿಬಂದಿ ಗುಂಡಿಗೆ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದಂತೆ, ನೆರೆಯ ರಾಜ್ಯದ ಕೊಳತ್ತೂರು ಸೇರಿದಂತೆ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ತಮಿಳುನಾಡು ಮತ್ತು ಕರ್ನಾಟಕ ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸರನ್ನು ನಿಯೋಜಿಸಿದ್ದಾರೆ. ವಾಹನ ಸಂಚಾರಕ್ಕೂ ಕೆಲಕಾಲ ತೊಂದರೆಯಾಗಿದೆ.

ಮೃತ ವ್ಯಕ್ತಿಯನ್ನು ಎಂ. ಕರವಡಿಯಾನ್ ಅಲಿಯಾಸ್ ರಾಜಾ ಎಂದು ಗುರುತಿಸಲಾಗಿದ್ದು, ಆತ ಸೇಲಂ ಜಿಲ್ಲೆಯ ಕೊಳತ್ತೂರಿನ ಗೋವಿಂದಪಾಡಿ ಗ್ರಾಮದವನಾಗಿದ್ದು, ಆತನನ್ನು ಕರ್ನಾಟಕ ಅರಣ್ಯ ಸಿಬಂದಿ ಗುಂಡಿಕ್ಕಿ ಕೊಂದಿರುವುದಾಗಿ ಆತನ ಸಂಬಂಧಿಕರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 14 ರಂದು ತಮಿಳುನಾಡು-ಕರ್ನಾಟಕ ಅಂತಾರಾಜ್ಯ ಗಡಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿದ್ದ 4 ಜನರ ಗುಂಪಿನಲ್ಲಿ ರಾಜಾ ಇದ್ದ ಮತ್ತು ಅವರು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು.

ಸ್ಥಳೀಯ ಜನರ ಪ್ರಕಾರ, ಕರ್ನಾಟಕದ ಸಿಬಂದಿಗಳು ಮಾಡಿರುವ ಆರೋಪವೆಂದರೆ ಈ ಗುಂಪು ಕಾಡಿನಲ್ಲಿ ಬೇಟೆಯಾಡಲು ಪ್ರಯತ್ನಿಸಿದೆ. ಗುಂಡು ತಗುಲಿ ಆತ ಮೃತಪಟ್ಟರೆ, ಇತರರು ಗಾಯಗೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಾ ಅವರ ಅನುಮಾನಾಸ್ಪದ ಸಾವಿನ ಕುರಿತು ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಈರೋಡ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಟ್ರಕ್ ಡ್ರೈವರ್ ಆಗಿರುವ ರಾಜಾ ತಮಿಳುನಾಡಿನ ಬರ್ಗೂರು ಮತ್ತು ಮೆಟ್ಟೂರು ಮತ್ತು ನೆರೆಯ ಕರ್ನಾಟಕದ ಗಡಿಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪವನ್ನು ಎದುರಿಸಿದ್ದು, ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳಬೇಟೆಗೆ ಸಂಬಂಧಿಸಿದಂತೆ ಪ್ರಕರಣವನ್ನು ಎದುರಿಸಿದ್ದರು. ಆತನ ವಿರುದ್ಧ ಕೊಳತ್ತೂರಿನಲ್ಲಿ (ಸೇಲಂ ಜಿಲ್ಲೆ) ಜೂಜಾಟದ ಪ್ರಕರಣವೊಂದು ಬಾಕಿ ಉಳಿದಿತ್ತು.

ಫೆಬ್ರವರಿ 14 ರಂದು ರಾಜಾ ಬೇಟೆಗೆಂದು ತಮಿಳುನಾಡಿನ ಗಡಿಭಾಗದ ಚಾಮರಾಜನಗರಕ್ಕೆ ಬಂದಿದ್ದರು. ಆತ ‘ಆಕಸ್ಮಿಕವಾಗಿ ಮುಳುಗಿ’ ಅಥವಾ ‘ಬೇರೆ ಕಾರಣಕ್ಕಾಗಿ’ ನದಿಗೆ ಹಾರಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 14 ಮತ್ತು 17 ರ ನಡುವೆ ಪಾಲಾರು ನದಿಯ ಸೇತುವೆಯ ಬಳಿ ಮೆಟ್ಟೂರಿನ ಮಲೆ ಮಹದೇಶ್ವರ ಬೆಟ್ಟದ ರಸ್ತೆಯ ಹತ್ತಿರ ಇದು ಸಂಭವಿಸಿರಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.