ರೆಡಿಯಾಯ್ತು ಟೀಂ

ಇಂದು ಬೆಳಗ್ಗೆ 10.30ಕ್ಕೆ ಬಿಎಸ್‌ವೈ ಸಚಿವ ಸಂಪುಟ ವಿಸ್ತರಣೆ; ಹೈಕಮಾಂಡ್‌ನಿಂದ ಸೋಮವಾರ ರಾತ್ರಿ ಸಿಎಂಗೆ ಪಟ್ಟಿ ರವಾನೆ

Team Udayavani, Aug 20, 2019, 6:15 AM IST

vidhana-soudha-750

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಗೆ ಮಂಗಳವಾರ ಬೆಳಗ್ಗೆ 10.30ರಿಂದ 11.30ರವರೆಗೆ ಮುಹೂರ್ತ ನಿಗದಿಯಾಗಿದ್ದು, ಬಹುತೇಕ 17 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸೋಮವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕರೆ ಮಾಡಿ ನೂತನ ಸಚಿವರ ಪಟ್ಟಿ ನೀಡಿದ್ದು, ಅದರಂತೆ 17 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವರಾಗಲಿರುವ ಶಾಸಕರಿಗೆ ಸೋಮವಾರ ರಾತ್ರಿಯೇ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ 26 ದಿನ ಕಳೆದ ಬಳಿಕ ಮಂಗಳವಾರ ಸಂಪುಟ ವಿಸ್ತರಣೆಯಾಗುತ್ತಿದೆ. ರಾಜ್ಯದ ಬಹಳಷ್ಟು ಜಿಲ್ಲೆಗಳಲ್ಲಿ ತೀವ್ರ ಪ್ರವಾಹ, ಭೂಕುಸಿತದಿಂದ ಲಕ್ಷಾಂತರ ಜನ ಸಂಕಷ್ಟಕ್ಕೆ ಸಿಲುಕಿದ್ದು, ಸಂಪುಟ ವಿಸ್ತರಣೆಯಾಗದಿರುವ ಬಗ್ಗೆ ಪ್ರತಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿದೆ.

ಯಾರೆಲ್ಲಾ ಸಚಿವರು?: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಎರಡನೇ ಬಾರಿ ದೆಹಲಿ ಪ್ರವಾಸದಲ್ಲಿ ಕಳೆದ ಶನಿವಾರ ಕೇಂದ್ರ ಗೃಹ ಸಚಿವರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ಚರ್ಚಿಸಿದ ಬಳಿಕ ಮಂಗಳವಾರ ಸಂಪುಟ ವಿಸ್ತರಣೆ ನಿಗದಿಯಾಯಿತು. ಆದರೆ ಮೊದಲ ಹಂತದಲ್ಲಿ ಸಚಿವರಾಗಲಿರುವವರ ಹೆಸರನ್ನು ಬಳಿಕ ರವಾನಿಸುವುದಾಗಿ ಅಮಿತ್‌ ಶಾ ಸೂಚಿಸಿದ್ದರು. ಅದರಂತೆ ಸೋಮವಾರ ಸಂಜೆವರೆಗೂ ಸಚಿವರ ಪಟ್ಟಿ ರವಾನೆಯಾಗಿರಲಿಲ್ಲ. ರಾತ್ರಿ ನಂತರ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರೇ ಬಿಎಸ್‌ವೈ ಅವರಿಗೆ ಕರೆ ಮಾಡಿ ಸಚಿವರಾಗುವವರ ಪಟ್ಟಿ ನೀಡಿದ್ದಾರೆ.

ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಹಲವು ನಾಯಕರು ಸೋಮವಾರ ಬೆಳಗ್ಗೆ ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಉಮೇಶ್‌ ಕತ್ತಿ, ಶಾಸಕರಾದ ಸುನಿಲ್ ಕುಮಾರ್‌, ಪ್ರಭು ಚೌಹಾಣ್‌, ಅಶ್ವತ್ಥ ನಾರಾಯಣ ಇತರರು ಭೇಟಿ ನೀಡಿ ಕೆಲಹೊತ್ತು ಚರ್ಚೆ ನಡೆಸಿದರು.

ಇನ್ನೊಂದೆಡೆ, ಬಿಜೆಪಿ ಸರ್ಕಾರ ರಚನೆಗೆ ಪರೋಕ್ಷವಾಗಿ ಕಾರಣವಾಗಿರುವ ಅನರ್ಹತೆಗೊಂಡ ಶಾಸಕರ ಪೈಕಿ ಮುಂದೆ ಯಾರಿಗೆಲ್ಲಾ ಸಚಿವ ಸ್ಥಾನ ನೀಡಬೇಕು. ಅಲ್ಲಿಯವರೆಗೆ ಆ ಖಾತೆಗಳ ನಿರ್ವಹಣೆ ಜವಾಬ್ದಾರಿಯನ್ನು ಯಾರಿಗೆ ವಹಿಸಬೇಕು ಎಂಬ ಬಗ್ಗೆಯೂ ಹಿರಿಯ ನಾಯಕರ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅನರ್ಹತೆಗೊಂಡ ಶಾಸಕರಿಗೆ ಕಾಯ್ದಿರುವ ಸಂಖ್ಯೆ ಹೊರತುಪಡಿಸಿ ಉಳಿದ ಸ್ಥಾನಗಳಿಗೆ ಪೈಪೋಟಿ ನಡೆಸಬೇಕಿದ್ದರಿಂದ ಆಕಾಂಕ್ಷಿಗಳಲ್ಲೂ ಸ್ಪಷ್ಟತೆ ಇಲ್ಲದಂತಾಗಿತ್ತು.

ಯಡಿಯೂರಪ್ಪ ಅವರು ಸಂಭಾವ್ಯ 17 ಸಚಿವರ ಪಟ್ಟಿಯನ್ನು ವರಿಷ್ಠರಿಗೆ ಸಲ್ಲಿಸಿದ್ದರು. ವರಿಷ್ಠರು ಆ ಪಟ್ಟಿಯೊಂದಿಗೆ ತಮ್ಮದೇ ಮೂಲಗಳಿಂದಲೂ ಪಡೆದ ಮಾಹಿತಿ ಆಧರಿಸಿದ ಸಂಭಾವ್ಯರ ಪಟ್ಟಿಯೊಂದಿಗೆ ತಾಳೆ ಹಾಕಿ ಪರಿಶೀಲಿಸಿರುವ ಸಾಧ್ಯತೆ ಇದೆ. ಎರಡೂ ಪಟ್ಟಿಯಲ್ಲಿ ಸಾಮಾನ್ಯವಾಗಿರುವ ಶಾಸಕರಿಗೆ ಸಚಿವ ಸ್ಥಾನ ಖಚಿತ ಮಾಡಿರಬಹುದು ಎಂದು ಮೂಲಗಳು ಹೇಳಿವೆ.

17 ಮಂದಿಗೆ ಸಚಿವ ಸ್ಥಾನ
ಜಗದೀಶ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್‌. ಅಶೋಕ್‌, ಸಿ.ಟಿ.ರವಿ, ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ವಿ.ಸೋಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ , ಸುರೇಶ್ ಕುಮಾರ್ , ಬಸವರಾಜು ಬೊಮ್ಮಾಯಿ , ಪ್ರಭು ಚವ್ಹಾಣ್‌ ,  ಶಶಿಕಲಾ ಜೊಲ್ಲೆ, ಎಚ್. ನಾಗೇಶ್‌. ಸಿ .ಸಿ ಪಾಟೀಲ್ ,ಜೆ.ಸಿ ಮಾಧು ಸ್ವಾಮಿ

ಅತೃಪ್ತಿ ತಡೆ ತಂತ್ರ
ಮೊದಲ ಹಂತದಲ್ಲಿ 17 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಬಿಜೆಪಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ 60ಕ್ಕೂ ಹೆಚ್ಚು ಇದೆ. 10 ಸಚಿವ ಸ್ಥಾನವನ್ನು ಅನರ್ಹತೆಗೊಂಡ ಶಾಸಕರಿಗೆ ಕಾಯ್ದಿರಿಸಿದರೂ ಉಳಿದ 24 ಸಚಿವ ಸ್ಥಾನ ಉಳಿಯಲಿದೆ. ಈ ಪೈಕಿ ಮುಖ್ಯಮಂತ್ರಿಗಳು ಹಣಕಾಸು ಸೇರಿದಂತೆ ಐದಾರು ಖಾತೆಯನ್ನು ತಾವೇ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಉಳಿದ ಖಾತೆಗಳಿಗಷ್ಟೇ ಹಂತ ಹಂತವಾಗಿ ಹಂಚಿಕೆಯಾಗಬಹುದು. ಮೊದಲ ಹಂತದಲ್ಲಿ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದವರು ಅಸಮಾಧಾನ ಹೊರಹಾಕುವುದು, ಭಿನ್ನಮತ ಚಟುಟಿಕೆಯಲ್ಲಿ ತೊಡಗದಂತೆ ತಡೆಯುವ ಉದ್ದೇಶದಿಂದ ಅಂತಿಮ ಕ್ಷಣದಲ್ಲಿ ಸಚಿವರ ಪಟ್ಟಿ ಪ್ರಕಟಿಸುವ ತಂತ್ರಕ್ಕೆ ಮೊರೆ ಹೋದಂತಿದೆ ಎನ್ನಲಾಗಿದೆ.

ಪಟ್ಟಿ ಹಿಂದೆ ನಾನಾ ಲೆಕ್ಕಾಚಾರ

ಮೊದಲ ಹಂತದಲ್ಲಿ ಸಚಿವರಾಗುವವರ ಹೆಸರು ಹಾಗೂ ಸಂಖ್ಯೆ ಬಗ್ಗೆ ಸ್ಪಷ್ಟತೆ ಇಲ್ಲದಿದ್ದ ಕಾರಣ ಸೋಮವಾರ ಬಿಜೆಪಿ ನಾಯಕರು, ಸಚಿವಾಕಾಂಕ್ಷಿಗಳು ನಾನಾ ಲೆಕ್ಕಾಚಾರದಲ್ಲೇ ತೊಡಗಿದ್ದರು. ಜಾತಿ, ಪ್ರಾದೇಶಿಕತೆ, ಜಿಲ್ಲಾ ಪ್ರಾತಿನಿಧ್ಯ, ಹಿರಿತನ, ಅನುಭವ ಪರಿಗಣಿಸಿದರೆ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಯಲ್ಲಿ ಕೆಲವರು ತೊಡಗಿದ್ದರು. ಸಂಘಟನೆ ಹಿನ್ನಲೆ, ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯ ಪಾತ್ರ, ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ, ಜನಪ್ರಿಯತೆ ಹಾಗೂ ವರ್ಚಸ್ಸನ್ನು ಮಾನದಂಡವಾಗಿ ಪರಿಗಣಿಸಿದರೆ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಎಂಬ ಕುರಿತು ತೆರೆಮರೆಯಲ್ಲೇ ಲೆಕ್ಕಾಚಾರ ನಡೆದಿತ್ತು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಂಗಳವಾರ ಬೆಳಗ್ಗೆ 10.30ರಿಂದ 11.30ರವರೆಗೆ ನಡೆಯಲಿದೆ. ಈ ಬಗ್ಗೆ ರಾಜಭವನಕ್ಕೂ ಮಾಹಿತಿ ನೀಡಲಾಗಿದ್ದು, ರಾಜಭವನದಲ್ಲೇ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. -ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.