ಇಂದು ಅವಳಿಗಳ ದಿನ: ಉಳ್ಳಾಲ-ಕೈರಂಗಳದ ಈ ಶಾಲೆಯಲ್ಲಿದ್ದಾರೆ 17 ಜೋಡಿ ಅವಳಿ ವಿದ್ಯಾರ್ಥಿಗಳು!


Team Udayavani, Dec 18, 2023, 1:08 AM IST

ganapathi school

ಉಳ್ಳಾಲ: ಒಂದು ಮನೆಯಲ್ಲಿ, ಒಂದೂರಿನಲ್ಲಿ ಒಂದೆರಡು ಅವಳಿ- ಜವಳಿ ಮಕ್ಕಳಿದ್ದರೆ ಕುತೂಹಲದಿಂದ ಗಮನಿಸುತ್ತೇವೆ. ಆದರೆ ಇಲ್ಲೊಂದು ಶಾಲೆಯಲ್ಲಿ 17
ಜೋಡಿ ಅವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಡಿಸೆಂಬರ್‌ 18ರ ಅವಳಿಗಳ ದಿನಾಚರಣೆಗೆ ಈ 34 ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹೊಸ ಮೆರುಗು ನೀಡಲಿದ್ದಾರೆ.
ಉಳ್ಳಾಲ ತಾಲೂಕಿನ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದಲ್ಲಿರುವ ಶಾರದಾ ಗಣಪತಿ ವಿದ್ಯಾ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 17 ಜೋಡಿ ಅವಳಿ ವಿದ್ಯಾರ್ಥಿಗಳಿದ್ದಾರೆ. ಎಲ್‌ಕೆಜಿಯಿಂದ ಪಿಯುಸಿ ವರೆಗೆ ಶಿಕ್ಷಣ ನೀಡುತ್ತಿರುವ ಈ ಶಾಲೆಯಲ್ಲಿ ಒಟ್ಟು 914 ವಿದ್ಯಾರ್ಥಿಗಳಿದ್ದಾರೆ. 2021ರ ಶೈಕ್ಷಣಿಕ ವರ್ಷದಲ್ಲಿ ಎಲ್‌ಕೆಜಿಯಿಂದ ಪಿಯುಸಿವರೆಗಿನ ತರಗತಿಗಳಲ್ಲಿ 11 ಅವಳಿ ಜೋಡಿ ವಿದ್ಯಾರ್ಥಿಗಳಿದ್ದರು.

2022ರಲ್ಲಿ ಅವರಲ್ಲಿ ಮೂರು ಜೋಡಿ ಶಿಕ್ಷಣ ಪೂರೈಸಿ ಉನ್ನತ ಶಿಕ್ಷಣಕ್ಕೆ ಬೇರೆ ಶಿಕ್ಷಣ ಸಂಸ್ಥೆಗಳಿಗೆ ತೆರಳಿದ್ದರಿಂದ ಇಲ್ಲಿ ಅವಳಿ ವಿದ್ಯಾರ್ಥಿಗಳ ಸಂಖ್ಯೆ 8ಕ್ಕೆ ಇಳಿದಿತ್ತು.

ಮತ್ತೆ 6+3 ಹೊಸ ಜೋಡಿ ಸೇರ್ಪಡೆ
ಕಳೆದ ಶೈಕ್ಷಣಿಕ ವರ್ಷದಲ್ಲಿ 3 ಮತ್ತು ಈ ಶೈಕ್ಷಣಿಕ ವರ್ಷದಲ್ಲಿ 6 ಜೋಡಿ ಹೊಸ ಅವಳಿಗಳು ಈ ಶಿಕ್ಷಣ ಸಂಸ್ಥೆಗೆ ದಾಖಲಾತಿ ಪಡೆಯುವ ಮೂಲಕ ಅವಳಿ ಜೋಡಿಗಳ ಸಂಖ್ಯೆ 17ಕ್ಕೆ ಏರಿತು. ಈ ಎಲ್ಲ ವಿದ್ಯಾರ್ಥಿಗಳು ಉಳ್ಳಾಲ ತಾಲೂಕು ವ್ಯಾಪ್ತಿಯ ಕೈರಂಗಳದ ಸುತ್ತಮುತ್ತಲಿನ ಗ್ರಾಮದ ಮತ್ತು ಕೇರಳ ಗಡಿಭಾಗದ ಮಂಜೇಶ್ವರ ವ್ಯಾಪ್ತಿಯವರಾಗಿದ್ದಾರೆ. ಎಲ್ಲರೂ ಶಾರದಾ ಗಣಪತಿ ವಿದ್ಯಾಕೇಂದ್ರದ ಸುತ್ತಮುತ್ತ 16 ಕಿ.ಮೀ. ವ್ಯಾಪ್ತಿಯೊಳಗಿನ ಮಕ್ಕಳು ಎನ್ನುವುದು ವಿಶೇಷವಾಗಿದೆ. ಒಂದೇ ವಿದ್ಯಾಸಂಸ್ಥೆಯಲ್ಲಿ ಇಷ್ಟು ಜೋಡಿ ಅವಳಿಗಳಿರುವುದು ವಿಶೇಷವಾದರೆ, ಇಷ್ಟು ಸಣ್ಣ ಭೌಗೋಳಿಕ ಪ್ರದೇಶದಲ್ಲಿ ಇಷ್ಟು ಸಂಖ್ಯೆಯ ಅವಳಿ ಮಕ್ಕಳಿರುವುದೂ ಕುತೂಹಲಕಾರಿ.

ಅವಳಿಗಳ ಕೇಂದ್ರ ಬಿಂದು ಈ ಶಾಲೆ
ಈ ಬಾರಿ 17 ಜೋಡಿ ಅವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಮೂಲಕ ಈ ಶಿಕ್ಷಣ ಸಂಸ್ಥೆ ಅವಳಿ ವಿದ್ಯಾರ್ಥಿಗಳ ಕೇಂದ್ರವಾಗಿ ಗಮನ ಸೆಳೆದಿದೆ. ಈ ವಿದ್ಯಾರ್ಥಿಗಳಲ್ಲಿ 6 ಗಂಡು ಅವಳಿಗಳು, 6 ಹೆಣ್ಣು ಅವಳಿಗಳಿದ್ದರೆ, 5 ವಿದ್ಯಾರ್ಥಿಗಳು ಗಂಡು ಮತ್ತು ಹೆಣ್ಣು ಮಿಶ್ರ ಅವಳಿಗಳಾಗಿದ್ದಾರೆ. ಎಲ್‌ಕೆಜಿ, ಒಂದನೇ ತರಗತಿ, 8 ಮತ್ತು 10ನೇ ತರಗತಿಗಳಲ್ಲಿ ತಲಾ ಒಂದು ಜತೆ ಅವಳಿಗಳಿದ್ದರೆ, 2ನೇ ಮತ್ತು 7ನೇ ತರಗತಿಗಳಲ್ಲಿ ತಲಾ ಎರಡು ಅವಳಿ ಜೋಡಿಗಳಿದ್ದಾರೆ. ಯುಕೆಜಿ, 6ನೇ ಮತ್ತು 9ನೇ ತರಗತಿಗಳಲ್ಲಿ ತಲಾ ಮೂರು ಜೋಡಿ ಇದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ರಮಣಿ ಭಂಡಾರಿ ತಿಳಿಸಿದ್ದಾರೆ.

ಕೈರಂಗಳ ಪುಣ್ಯಕೋಟಿ ನಗರದಲ್ಲಿ 17 ವರ್ಷಗಳಿಂದ ಕಾರ್ಯನಿರ್ವ ಹಿಸುತ್ತಿರುವ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪಠ್ಯದೊಂದಿಗೆ ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದ್ದು, ಅವಳಿ ವಿದ್ಯಾರ್ಥಿಗಳಲ್ಲಿ ಒಂದು ಮಗುವಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ.
-ಟಿ.ಜಿ. ರಾಜಾರಾಮ ಭಟ್‌, ಶಾಲಾ ಸಂಚಾಲಕರು, ಶಾರದಾ ಗಣಪತಿ ವಿದ್ಯಾಕೇಂದ್ರ

 ವಸಂತ ಕೊಣಾಜೆ

ಟಾಪ್ ನ್ಯೂಸ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.