Karnataka: ಶಾಂತಿ ಕದಡಿದರೆ ಸಹಿಸೆವು: ಸಿಎಂ ಎಚ್ಚರಿಕೆ

ಕನ್ನಡ ಕಡ್ಡಾಯ ಮಾಡಲು ನೋಟಿಸ್‌ ನೀಡೋಣ ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು: ಡಿಕೆಶಿ

Team Udayavani, Dec 28, 2023, 11:22 PM IST

siddaramayya IMP

ಬೆಂಗಳೂರು: ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಶಾಂತಿಯುತ ವಾದ ಪ್ರತಿಭಟನೆಗೆ ವಿರೋಧವಿಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾ ದರೂ ನಡೆದುಕೊಂಡರೆ ಅದನ್ನು ಸರಕಾರ ಸಹಿಸುವು ದಿಲ್ಲ ಎಂದು ಕನ್ನಡಪರ ಹೋರಾಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ವಿರೋಧವಿಲ್ಲ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳು ಹಗೆ ಎಲ್ಲರೂ ಸಂವಿಧಾನಕ್ಕೆ ಅನು ಗುಣವಾಗಿ ನಡೆದುಕೊಳ್ಳಬೇಕು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಜಾರಿಗೊಳಿಸಲಾಗು ವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದರು.

ಸರಕಾರ ಕಣ್ಮುಚ್ಚಿ ಕುಳಿತುಕೊಳ್ಳದು
ಡಿ.ಕೆ.ಶಿವಕುಮಾರ್‌ ಮಾತನಾಡಿ, “ಕನ್ನಡಪರ ಹೋರಾಟಗಳು ಮತ್ತು ಹೋರಾಟಗಾರರ ಬಗ್ಗೆ ನಮಗೆ ಗೌರವವಿದೆ. ಹಾಗಂತ, ಆಸ್ತಿಪಾಸ್ತಿ ಹಾನಿ ಮಾಡಿ ದರೆ, ಸರಕಾರ ಕಣ್ಮುಚ್ಚಿಕೊಂಡು ಕುಳಿತುಕೊಳ್ಳದು ಎಂದರು.

ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, ಶೇ. 60ರಷ್ಟು ನಾಮಫ‌ಲಕ ಕನ್ನಡದಲ್ಲೇ ಇರಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ’ ಎಂದು ತೀಕ್ಷ್ಣವಾಗಿ ಹೇಳಿದರು.

“ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣ ಗೌಡರ ಮೇಲೆ ಕೇಸು ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್‌ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟಿಸ್‌ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣ ಗೌಡ ರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ’ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣ ಗೌಡರ ಎಚ್ಚರಿಕೆ ವಿಚಾರವಾಗಿ ಕೇಳಿದಾಗ, “ಸರಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳ್ಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ’ ಎಂದು ತಿಳಿಸಿದರು.

ಪಾಲಿಸದವರಿಗೆ ನೋಟಿಸ್‌ ಜಾರಿ: ಯಾರೆಲ್ಲ ಕನ್ನಡ ನಾಮಫ‌ಲಕ ಹಾಕಿಲ್ಲ ಅವರಿಗೆ ನೊಟೀಸ್‌ ಜಾರಿ ಮಾಡಲಾಗುವುದು. ಎಲ್ಲ ವ್ಯಾಪಾರಿಗಳು ಸರಕಾರದ ಆದೇಶ ಪಾಲಿಸಬೇಕು, ನಾಮಫ‌ಲಕ ಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಕನ್ನಡದ ಹಿತ ಕಾಯಲು ಸರಕಾರ ಬದ್ಧವಾಗಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯನವರೇ, ನಿಮ್ಮ ಸರಕಾರ ಚುನಾವಣೆಯಲ್ಲಿ ನಮ್ಮನ್ನು ಬಳಸಿಕೊಂಡಿತ್ತು. ನನ್ನ ಆರೋಗ್ಯ ಹದಗೆ ಟ್ಟಿದೆ. ನಾನು ಸತ್ತರೂ ಚಿಂತೆ ಇಲ್ಲ. ನಾವು ಜಗ್ಗುವು ದಿಲ್ಲ. ಏನು ಮಾಡುತ್ತಾರೋ ಮಾಡಲಿ, ಗುಂಡಿಕ್ಕಿ ಕೊಂದರೂ ಚಿಂತೆ ಯಿಲ್ಲ. ನಾವು ಅಂಜುವುದಿಲ್ಲ, ಹೋರಾ ಟದಿಂದ ಹಿಂದೆ ಹೋಗಲ್ಲ. ಕನ್ನಡ ನೆಲ,ಜಲ ಭಾಷೆಗಾಗಿ ಹೋರಾಡುತ್ತೇವೆ.
– ಟಿ.ಎ.ನಾರಾಯಣ ಗೌಡ, ರಾಜ್ಯಾಧ್ಯಕ್ಷ, ಕರವೇ

ಆಡಳಿತ ಕನ್ನಡಕ್ಕಾಗಿ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಡೆಸಿದ ಹೋರಾಟವನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫ‌ಲವಾಗಿರುವ ರಾಜ್ಯ ಸರಕಾರ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ಹೋರಾಟಕ್ಕೆ ನೀಡಿದ ಕರೆಯನ್ನು ಗಂಭೀರವಾಗಿ ಪರಿಗಣಿಸದೆ ಇದ್ದುದರಿಂದ ಸಾರ್ವಜನಿಕ ಜನಜೀವನಕ್ಕೆ ಹಾಗೂ ವ್ಯಾಪಾರೋದ್ಯಮಕ್ಕೆ ತೊಂದರೆ ಆಗುವುದಕ್ಕೆ ಸರಕಾರವೇ ಕಾರಣವಾದಂತಾಗಿದೆ.
– ವಿ.ಸುನಿಲ್‌ ಕುಮಾರ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.