ಟೊಮೆಟೋ ದರ ಮತ್ತೆ ಏರಿಕೆ; ಇನ್ನಷ್ಟು ಹೆಚ್ಚಳ ಸಂಭವ; ಈರುಳ್ಳಿ ಬೆಲೆ ಇಳಿಕೆ
ಒಂದು ಲಿಂಬೆ ಹುಳಿಗೆ 10- 12 ರೂ.
Team Udayavani, May 9, 2022, 1:04 AM IST
ಕುಂದಾಪುರ: ಕಳೆದ ವಾರ 40-45 ರೂ. ಇದ್ದ ಟೊಮೆಟೋ ದರ ಈಗ ಮತ್ತೆ ಏಕಾಏಕಿ ಭಾರೀ ಏರಿಕೆಯಾಗಿದೆ. ಕೆ.ಜಿ.ಗೆ 40 ರೂ. ಆಸುಪಾಸಿನಲ್ಲಿದ್ದ ದರ 70-80 ರೂ. ಆಗಿದೆ. ಕಾರ್ಯಕ್ರಮಗಳು ಹೆಚ್ಚಾಗಿದ್ದು, ಮಾರುಕಟ್ಟೆಗಳಿಗೆ ಬೇಡಿಕೆಯಷ್ಟು ಟೊಮೆಟೋ ಪೂರೈಕೆಯಾಗದೆ ದರ ಇನ್ನಷ್ಟು ಏರಿಕೆಯಾಗುವ ಸಂಭವವೂ ಇದೆ ಎನ್ನಲಾಗುತ್ತಿದೆ.
ಕಳೆದ ಡಿಸೆಂಬರ್ – ಜನವರಿಯಿಂದೀಚೆಗೆ ಇದು ಎರಡನೇ ಬಾರಿಗೆ ಟೊಮೆಟೋ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಆಗಲೂ 80-90 ರೂ. ಆಸುಪಾಸಿನವರೆಗೆ ಹೆಚ್ಚಿತ್ತು. ಜೂ. 10 ವರೆಗೆ, ಅಂದರೆ ಮಳೆಗಾಲದ ವರೆಗೆ ದರ ಇದೇ ಸ್ಥಿತಿ ಇರಬಹುದು.
ಲಿಂಬೆಹುಳಿ ದುಬಾರಿ
ಬಿಸಿಲಿನ ಬೇಗೆ, ಸಮಾರಂಭಗಳು, ಪೂರೈಕೆ ಕೊರತೆಯಿಂದಾಗಿ ಲಿಂಬೆಹುಳಿಯ ಬೆಲೆಯೂ ಹೆಚ್ಚಿದೆ. ಸದ್ಯ ಒಂದು ಲಿಂಬೆ ಹುಳಿಯ ಬೆಲೆ 10-12 ರೂ. ಇದೆ. ಸ್ವಲ್ಪ ಸಮಯದ ಹಿಂದೆ 10 ರೂ.ಗೆ 4 ಲಿಂಬೆ ಸಿಗುತ್ತಿತ್ತು. ಆಗ ಒಂದು ಚೀಲ (1 ಸಾವಿರ ಲಿಂಬೆ)ಕ್ಕೆ 1,500 ರೂ. ಇದ್ದುದು ಈಗ 6-7 ಸಾವಿರ ರೂ. ಆಗಿದೆ.
ಈರುಳ್ಳಿ ಬೆಲೆ ಇಳಿಕೆ
ಬೀನ್ಸ್, ತೊಂಡೆ, ನುಗ್ಗೆ, ಬದನೆ, ಸೌತೆ ಸಹಿತ ಬಹುತೇಕ ಇತರ ತರಕಾರಿಗಳ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಾಸವಾಗಿಲ್ಲ. ಈ ವಾರದಲ್ಲಿ ಈರುಳ್ಳಿ ಬೆಲೆ ಮಾತ್ರ ಇಳಿಕೆಯಾಗಿರುವುದು ಗ್ರಾಹಕರಲ್ಲಿ ಸಮಾಧಾನ ತಂದಿದೆ. 30-35ರ ಆಸುಪಾಸಿನಲ್ಲಿದ್ದ ಈರುಳ್ಳಿ ದರ ಈಗ 20-25 ರೂ. ಆಸುಪಾಸಿನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ
Kundapura: ಕೋಣಿ ಬ್ಯಾಂಕ್ ಕಳ್ಳತನ ಯತ್ನ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.