ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ಪರಿಕರಗಳು


Team Udayavani, Jun 20, 2019, 3:07 AM IST

sathish-dhva

ಬೆಂಗಳೂರು: ಬಹುನಿರೀಕ್ಷಿತ ಚಂದ್ರಯಾನ-2ಕ್ಕೆ ಇಸ್ರೋ ಸಜ್ಜಾಗಿದ್ದು, ಬೆಂಗಳೂರಿನ ಇಸ್ರೋ ಸ್ಪೇಸ್‌ಕ್ರಾಫ್ಟ್‌ ಇಂಟಿಗ್ರೇಷನ್‌ ಟೆಸ್ಟ್‌ ಎಸ್ಟಾಬ್ಲಿಷ್‌ಮೆಂಟ್‌(ಐಸೈಟ್‌)ನಲ್ಲಿ ಸಿದ್ಧಗೊಂಡ ಆರ್ಬಿಟ್‌, ಲ್ಯಾಂಡರ್‌ ಹಾಗೂ ರೋವರ್‌, ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರ ತಲುಪಿವೆ.

ಚಂದ್ರಯಾನ -2 ಪರಿಕರಗಳಾದ ಆರ್ಬಿಟ್‌ (ಕಕ್ಷೆಗಾಮಿ), ವಿಕ್ರಂ ಹೆಸರಿನ ಲ್ಯಾಂಡರ್‌ (ಚಂದ್ರನ ಮೇಲೆ ಪರಿಕರ ಇಳಿಸುವ ಸಾಧನ), ಪ್ರಗ್ಯಾನ್‌ ಹೆಸರಿನ ರೋವರ್‌ (ಚಂದ್ರನ ಮೇಲೆ ವಿವಿಧ ಪ್ರಯೋಗ ನಡೆಸುವ ರೋಬೋಟ್‌ ಸಾಧನ)ಗಳನ್ನು ಬೆಂಗಳೂರಿನ ಮಾರತಹಳ್ಳಿಯಲ್ಲಿರುವ ಸ್ಪೇಸ್‌ಕ್ರಾಫ್ಟ್‌ ಇಂಟಿಗ್ರೇಷನ್‌ ಟೆಸ್ಟ್‌ ಎಸ್ಟಾಬ್ಲಿಷ್‌ಮೆಂಟ್‌(ಐಸೈಟ್‌)ನಲ್ಲಿಯೇ ಸಿದ್ಧಪಡಿಸಲಾಗಿದೆ. ಈ ಎರಡೂ ಉಪಕರಣಗಳನ್ನು ಸಾಕಷ್ಟು ಬಾರಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಸ್ರೋ ಚಂದ್ರಯಾನ-2ಕ್ಕೆ ದಿನಾಂಕ ನಿಗದಿ ಮಾಡಿದ ಬಳಿಕ ಅವುಗಳನ್ನು ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜೂ.14ಕ್ಕೆ ಆರ್ಬಿಟ್‌ (ಕಕ್ಷೆಗಾಮಿ), ಜೂ.18ರ ಮಂಗಳವಾರ ವಿಕ್ರಂ ಲ್ಯಾಡರ್‌, ಪ್ರಜ್ಞಾನ್‌ ರೋವರ್‌ ಬಾಹ್ಯಾಕಾಶ ಕೇಂದ್ರ ತಲುಪಿವೆ. ಈ ಮೂರೂ ಪರಿಕರಗಳನ್ನು ಜುಲೈ 15ರಂದು ಅಂತರಿಕ್ಷ ವಾಹನ ಜಿಎಸ್‌ಎಲ್‌ವಿ ಮಾರ್ಕ್‌-3 ಚಂದ್ರನಲ್ಲಿ ಹೊತ್ತೂಯ್ಯಲಿದ್ದು, ಸೆಪ್ಟಂಬರ್‌ 6 ರಂದು ಚಂದ್ರನ ಅಂಗಳ ತಲುಪಲಿವೆ.

ಚಂದ್ರನಲ್ಲಿ ಕಾರ್ಯಾಚರಣೆ ಹೇಗೆ?: ಸೆ.6ರಂದು ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೆ„ ತಲುಪಲಿದ್ದು, ಆರ್ಬಿಟ್‌ ಚಂದ್ರನ ಕಕ್ಷೆಯನ್ನು ಮೇಲ್ಮೆ„ನಿಂದ 100 ಕಿ.ಮೀ. ಅಂತರದಲ್ಲಿ ಸುತ್ತಾಟ ನಡೆಸುತ್ತದೆ. ಇನ್ನೊಂದೆಡೆ, ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಸುರಕ್ಷಿತವಾಗಿ ರೋವರ್‌ನ್ನು ಇಳಿಸಲಿದೆ. ನಂತರ ರೋವರ್‌ ಚಂದ್ರನ ಮೇಲ್ಮೆ„ ಮೇಲೆ ಪ್ರತಿ ಸೆಕೆಂಡಿಗೆ 1 ಸೆಂ.ಮೀ.ನಷ್ಟು ವೇಗದಲ್ಲಿ ಚಲಿಸುತ್ತಾ ವಿವಿಧ ಪ್ರಯೋಗಗಳನ್ನು ನಡೆಸಲಿದೆ. ಆ ಪ್ರಯೋಗಗಳ ಮಾಹಿತಿಯನ್ನು ಲ್ಯಾಂಡರ್‌ ಮೂಲಕ ಚಂದ್ರನ ಕಕ್ಷೆ ಸುತ್ತುತ್ತಿರುವ ಆರ್ಬಿಟ್‌ಗೆ ತಲುಪಿಸುತ್ತದೆ. ನಂತರ ಆರ್ಬಿಟ್‌ ಭೂಮಿಯ ಇಸ್ರೋ ಕೇಂದ್ರಕ್ಕೆ ಮಾಹಿತಿಯನ್ನು ವರ್ಗಾಯಿಸುತ್ತದೆ.

ಚಂದ್ರಯಾನದ ಉದ್ದೇಶವೇನು?: ಮೊದಲ ಬಾರಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಕಾರ್ಯಾಚರಣೆ ನಡೆಸುವುದು, ನೀರಿನ ನಿಖರತೆಯನ್ನು ಇನ್ನಷ್ಟು ಖಚಿತ ಪಡಿಸಿಕೊಳ್ಳುವುದು, ಖನಿಜ ಸೇರಿ ಇತರ ಧಾತುಗಳನ್ನು ಪತ್ತೆ ಹಚ್ಚುವುದು ಯಾನದ ಉದ್ದೇಶ.

ಅಶೋಕ ಚಕ್ರ ಅಚ್ಚೊತ್ತಲಿದೆ: ಪ್ರಗ್ಯಾನ್‌ ರೋವರ್‌ನಲ್ಲಿ ಒಟ್ಟು ಆರು ಚಕ್ರಗಳಿದ್ದು, ಅವುಗಳಲ್ಲಿ ಎರಡೂ ಚಕ್ರಗಳಲ್ಲಿ ಒಂದು ಬದಿಯ ಚಕ್ರದಲ್ಲಿ ಅಶೋಕ ಚಕ್ರ, ಮತ್ತೂಂದರಲ್ಲಿ ಇಸ್ರೋ ಲಾಂಛನ ಹಾಕಲಾಗಿದೆ. ಲ್ಯಾಡರ್‌ನಲ್ಲಿ ತ್ರಿವರ್ಣ ಧ್ವಜ ಹಾಕಲಾಗಿದೆ. ಚಂದ್ರನ ಮೇಲೆ ರೋವರ್‌ ಸಂಚರಿಸುವಾಗ ಅಶೋಕ ಚಕ್ರ, ಇಸ್ರೋ ಲಾಂಛನವನ್ನು ಅಚ್ಚೊತ್ತಲಿದೆ. ಈ ಅಚ್ಚು ಚಂದ್ರನ ಮೇಲ್ಮೆ„ನಲ್ಲಿ ನೂರಾರು ವರ್ಷ ಉಳಿಯಲಿದೆ. ಈ ಕಾರ್ಯಾಚರಣೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಒಟ್ಟು 1 ಚಂದ್ರಮಾನ ದಿನ (14 ಭೂಮಿ ದಿನ) ಅಂದರೆ, ಸೆ.6 ರಿಂದ 20ರವರೆಗೆ ನಡೆಯಲಿದೆ.

* 2019ರ ಜುಲೈ 15ರಂದು ಜಿಎಸ್‌ಎಲ್‌ವಿ ಮಾರ್ಕ್‌-3 ಬಾಹ್ಯಾಕಾಶ ನೌಕೆ ಮೂಲಕ ಉಡಾವಣೆ. (3.8 ಟನ್‌ ತೂಕ) 14 ಪೇಲೋಡ್ಸ್‌ ಬಳಕೆ.

* ಜುಲೈ 15 ನಸುಕು 2 ಗಂಟೆ 51 ನಿಮಿಷಕ್ಕೆ ಉಡಾವಣೆ. ಆ.1ರಂದು ಚಂದ್ರನ ಕಕ್ಷೆ ಪ್ರವೇಶ. ಸೆ. 6ರಂದು ಚಂದ್ರನ ಮೇಲ್ಮೆ„ ಸ್ಪರ್ಶ. ಸೆ.6 ರಿಂದ 20ರವರೆಗೆ ಕಾರ್ಯಾಚರಣೆ.

* ಆರ್ಬಿಟ್‌ ಆಯಸ್ಸು – 1 ವರ್ಷ. ತೂಕ – 2,378 ಕೆ.ಜಿ. ಚಂದ್ರನ ಮೇಲ್ಮೆ„ನಿಂದ 100 ಕಿ.ಮೀ ಅಂತರದಲ್ಲಿ ಸುತ್ತಾಟ.

* ಲ್ಯಾಂಡರ್‌ ಆಯಸ್ಸು – 14 ದಿನ, 1,471 ಕೆ.ಜಿ. (1 ಚಂದ್ರಮಾನ ದಿನ).

*ರೋವರ್‌ ಆಯಸ್ಸು – 14 ದಿನ. 27 ಕೆ.ಜಿ. (1 ಚಂದ್ರಮಾನ ದಿನ).

* ಚಂದ್ರಯಾನದ ಒಟ್ಟು ದೂರ – 3.84 ಲಕ್ಷ ಕಿ.ಮೀ.

* ಚಂದ್ರಯಾನ-2ರ ವೆಚ್ಚ – 603 ಕೋಟಿ ರೂ. ಬಾಹ್ಯಾಕಾಶ ನೌಕೆಯ ವೆಚ್ಚ – 375 ಕೋಟಿ ರೂ. ಒಟ್ಟು ವೆಚ್ಚ – 978 ಕೋಟಿ ರೂ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.