ಮೀನುಗಾರಿಕಾ ಆಸಕ್ತರಿಗೆ “ಟ್ರೈನಿಂಗ್‌ ಸೆಂಟರ್‌’

ಸ್ಮಾರ್ಟ್‌ ಸಿಟಿ ಯೋಜನೆಯಡಿ ಹೊಗೆ ಬಜಾರ್‌ನಲ್ಲಿ ತರಬೇತಿ

Team Udayavani, May 30, 2020, 6:08 AM IST

ಮೀನುಗಾರಿಕಾ ಆಸಕ್ತರಿಗೆ “ಟ್ರೈನಿಂಗ್‌ ಸೆಂಟರ್‌’

ವಿಶೇಷ ವರದಿ-ಮಂಗಳೂರು: ಕರಾವಳಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ ಜೀವನಾಧಾರವಾಗಿರುವ ಮೀನುಗಾರಿಕೆಯಲ್ಲಿ ಹೊಸ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶದಿಂದ ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಡಿ ಪ್ರತ್ಯೇಕ ಮೀನುಗಾರಿಕಾ ತರಬೇತಿ ಕೇಂದ್ರವೊಂದು ಸ್ಥಾಪನೆಯಾಗಲಿದೆ.

ಕರಾವಳಿಯ ಮೀನುಗಾರಿಕೆ ಇಲ್ಲಿನ ಆರ್ಥ ವ್ಯವಸ್ಥೆಯ ಆಧಾರಸ್ತಂಭ. ಪ್ರತೀ ವರ್ಷ ಸಾವಿರಾರು ಕೋಟಿ ರೂ.ಗಳ ಮೀನುಗಾರಿಕೆ ಉದ್ಯಮವು ಲಕ್ಷಾಂತರ ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ನೀಡಿದೆ. ಇಂತಹ ಕ್ಷೇತ್ರದಲ್ಲಿ ಮತ್ತಷ್ಟು ಉದ್ಯೋಗ ಸೃಷ್ಟಿಲು ನಿರ್ಧರಿಸಲಾಗಿದೆ.

2 ವರ್ಷ ಉಚಿತ ತರಬೇತಿ
ನಗರದ ಹೊಗೆಬಜಾರ್‌ ಮೀನು ಗಾರಿಕಾ ಕಾಲೇಜಿಗೆ ಸೇರಿದ ಭೂಮಿ ಯಲ್ಲಿ ನೂತನ ಸೆಂಟರ್‌ ನಿರ್ಮಾಣ ಗೊಳ್ಳಲಿದೆ. ಕಟ್ಟಡವನ್ನು ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಿರ್ಮಿಸಿ, 2 ವರ್ಷ ಮೀನುಗಾರಿಕೆ ಸಂಬಂಧಿತ ವಿಚಾರಗಳ ತರಬೇತಿಯನ್ನು ಮೀನುಗಾರಿಕಾ ಕಾಲೇಜಿನ ವತಿಯಿಂದ ಉಚಿತವಾಗಿ ನೀಡಲಾಗುತ್ತದೆ. ವಸತಿ ಹಾಗೂ ಊಟದ ವ್ಯವಸ್ಥೆಯೂ ದೊರೆಯಲಿದೆ. 2 ವರ್ಷ ಈ ತರಬೇತಿ ದೊರೆಯಲಿದೆ. ಒಬ್ಬ ಫಲಾನುಭವಿಗೆ 2 ವರ್ಷ ತರಬೇತಿಗೆ ಬೇಕಾಗುವ ಹಣವನ್ನು ಸ್ಮಾರ್ಟ್‌ಸಿಟಿ ಸಂಸ್ಥೆಯೇ ನೀಡಲಿದೆ. ಪ್ರತೀವರ್ಷ 180 ಸದಸ್ಯರಂತೆ ಎರಡು ವರ್ಷ 360 ಸದಸ್ಯರು ತರಬೇತಿ ಪಡೆಯಲು ಅವಕಾಶವಿರಲಿದೆ.

4.75 ಕೋಟಿ ರೂ. ವೆಚ್ಚ
ಒಟ್ಟು 4.75 ಕೋ.ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, 2.40 ಕೋ.ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಶುಕ್ರವಾರದಿಂದ ಕಟ್ಟಡದ ಕಾಮಗಾರಿ ಆರಂಭವಾಗಿದ್ದು, ವರ್ಷ ದೊಳಗೆ ಕಾಮಗಾರಿ ಪೂರ್ಣ ಗೊಳ್ಳುವ ನಿರೀಕ್ಷೆಯಿದೆ. ಉಳಿದಂತೆ 2.35 ಕೋ. ರೂ.ಗಳನ್ನು ತರಬೇತಿಗೆ ನಿಗದಿ ಮಾಡಲಾಗಿದೆ. ಮೀನುಗಾರರು, ನಿರುದ್ಯೋಗಿಗಳು, ಶಾಲೆ ಬಿಟ್ಟ ಯುವಕರಿಗೆ ತರಬೇತಿ ಸಿಗಲಿದೆ. ಬಂದರು, ಮೀನುಗಾರಿಕೆ ಕುರಿತಾದ ಕೆಲಸದ ಬಗ್ಗೆ ತರಬೇತಿ ನೀಡಲಾಗುತ್ತದೆ.

ಏನಿದು ತರಬೇತಿ?
ಮೀನುಗಾರಿಕೆಯ ಬಗ್ಗೆ ಆಸಕ್ತಿ ಇರುವವರಿಗೆ ಈ ತರಬೇತಿ ಉಪಯೋಗವಾಗಲಿದೆ. ಮೀನುಗಾರಿಕಾ ಬಲೆಗಳಲ್ಲಿ ಬಳಕೆಯಾಗುವ ನೆಟ್ಟಿಂಗ್‌, ಫಿಶ್‌ ಕಟ್ಟಿಂಗ್‌, ಬೋಟ್‌ ರಿಪೇರಿ, ಆಲಂಕಾರಿಕ ಮೀನು ಸೇರಿದಂತೆ ಸುಮಾರು 12 ವಿವಿಧ ತರಬೇತಿ ಇಲ್ಲಿ ದೊರೆಯಲಿದೆ. ಎಲ್ಲ ಫಲಾನುಭವಿಗಳಿಗೆ ಸ್ಮಾರ್ಟ್‌ಸಿಟಿ ವತಿಯಿಂದ ಉಚಿತ ತರಬೇತಿ ನೀಡಲಾಗುತ್ತದೆ. ಮೀನುಗಾರಿಕಾ ಕಾಲೇಜಿನ ತಜ್ಞರು ತರಬೇತಿ ನೀಡಲಿದ್ದಾರೆ.

 ಕೇಂದ್ರ ನಿರ್ಮಾಣ ಆರಂಭ
ಕರಾವಳಿಯ ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸಬರಿಗೂ ಅವಕಾಶ ದೊರೆಯಬೇಕು ಎಂಬ ನೆಲೆಯಲ್ಲಿ ಮೀನುಗಾರಿಕೆ ಸಂಬಂಧಿತ ವಿಚಾರಗಳಲ್ಲಿ ಯುವಕರಿಗೆ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಉಚಿತ ತರಬೇತಿ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ನಗರದ ಹೊಗೆಬಜಾರ್‌ನಲ್ಲಿ “ಸ್ಕಿಲ್‌ ಡೆವೆಲಪ್‌ಮೆಂಟ್‌ ಆ್ಯಂಡ್‌ ಸೇಫ್ಟಿ ಟ್ರೈನಿಂಗ್‌ ಸೆಂಟರ್‌’ನ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದೆ.
– ಮೊಹಮ್ಮದ್‌ ನಝೀರ್‌
ವ್ಯವಸ್ಥಾಪಕ ನಿರ್ದೇಶಕ,
ಸ್ಮಾರ್ಟ್‌ಸಿಟಿ ಕಂಪೆನಿ, ಮಂಗಳೂರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.