ಚುನಾವಣ ಸಿಬಂದಿಗೆ ತರಬೇತಿ : ಊಟ, ಉಪಾಹಾರ ಅವ್ಯವಸ್ಥೆ: ಆಕ್ರೋಶ


Team Udayavani, Apr 21, 2024, 1:19 AM IST

ಚುನಾವಣ ಸಿಬಂದಿಗೆ ತರಬೇತಿ : ಊಟ, ಉಪಾಹಾರ ಅವ್ಯವಸ್ಥೆ: ಆಕ್ರೋಶ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳಿಗೆ ಎ. 20ರಂದು ಉಜಿರೆಯ ಖಾಸಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಹಿನ್ನೆಲೆ ಸಾವಿರಕ್ಕೂ ಅಧಿಕ ಅಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಊಟ, ಉಪಾಹಾರ ಅವ್ಯವಸ್ಥೆಯಿಂದ ಅಧಿಕಾರಿಗಳು ತರಬೇತಿ ನೀಡಲು ನಿಯೋಜಿಸಿದವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಶನಿವಾರ ಪಿಆರ್‌ಒ, ಎಪಿಆರ್‌ಒ, ಪಿಒ ಸೇರಿ ಒಟ್ಟು 281 ತಂಡದಂತೆ ಒಟ್ಟು 1156 ಮಂದಿ ಹಾಗೂ ಇವರನ್ನು ತರಬೇತಿಗೊಳಿಸುವ ಆರ್‌ಒ, ಸೆಕ್ಟರ್‌ ಅಧಿಕಾರಿಗಳು ಸೇರಿ 1,400ಕ್ಕೂ ಅಧಿಕ ಮಂದಿ ಹಾಜರಾಗಿದ್ದರು.

ಅಧಿಕಾರಿಗಳಿಗೆ ನಿಗದಿಪಡಿಸಿದಂತೆ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಭೋಜನ, ಸಂಜೆ ಲಘು ಉಪಾಹಾರ ನೀಡಬೇಕಿತ್ತು. ಆದರೆ ಬೆಳಗ್ಗೆ ಉಪಾಹಾರ ಅವ್ಯವಸ್ಥೆ, ಮಧ್ಯಾಹ್ನ ಊಟದ ಅವ್ಯವಸ್ಥೆ ಸಹಿತ, ಸಂಜೆ ಸಮರ್ಪಕವಾಗಿ ಲಘು ಉಪಾಹಾರ ನೀಡದೆ ಇರುವ ವಿಚಾರಕ್ಕೆ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಚುನಾವಣೆ ಸಂದರ್ಭದಲ್ಲಿ ಮುಂಚಿತವಾಗಿಯೇ ಚುನಾವಣ ಕರ್ತವ್ಯಕ್ಕೆ ನೇಮಿಸಿದ ಪಿಆರ್‌ಒ, ಎಪಿಆರ್‌ಒ, ಪಿಒಗಳ ಸಂಖ್ಯೆ ನಿಗದಿಯಾಗಿರುತ್ತದೆ. ಯಾರೂ ಕೂಡ ಗೈರುಹಾಜರಾಗುವುದಿಲ್ಲ. ಬೇರೆ ಜಿಲ್ಲೆಯ ಬೇರೆ ಬೇರೆ ತಾಲೂಕಿನಿಂದ ಆನೇಕ ಮಂದಿ ಮುಂಜಾನೆ ಬೇಗ ಬಂದು ತರಬೇತಿಗೆ ಹಾಜರಾಗುತ್ತಾರೆ. ಆರೋಗ್ಯ ಸಮಸ್ಯೆ ಉಳ್ಳವರು, ಲೋ ಬಿಪಿ, ಮಧುಮೇಹದಿಂದ ಬಳಲುವವರಿದ್ದಾರೆ. ಈ ವೇಳೆ ಸೂಕ್ತ ಉಪಾಹಾರ ವ್ಯವಸ್ಥೆ ಬೇಕಾಗುತ್ತದೆ. ಆದರೆ ಪ್ರತಿ ಬಾರಿ ಇಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿರುತ್ತದೆ. ಶನಿವಾರ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಅಧಿಕಾರಿಗಳು ಆಕ್ರೋಶಕ್ಕೆ ಒಳಗಾಗಿದ್ದರು.

1,400 ಸಿಬಂದಿಗೆ ಆವಶ್ಯಕವಾಗುವಷ್ಟು ಭೋಜನ ಮುಂಚಿತವಾಗಿ ಸಿದ್ಧಪಡಿಸಿಲ್ಲ, ಮಧ್ಯಾಹ್ನ ಬಹುತೇಕ ಮಂದಿಗೆ ಭೋಜನ ಲಭಿಸಿರಲಿಲ್ಲ, 2 ಗಂಟೆ ವೇಳೆಗೆ ಊಟವೇ ಇಲ್ಲದ ಪರಿಸ್ಥಿತಿಯಾಗಿತ್ತು.

ಇನ್ನುಳಿದಂತೆ ನೂಕುನುಗ್ಗಲಿನ ಪರಿಸ್ಥಿತಿ ಕಂಡು ಹೆಚ್ಚಿನ ಸಿಬಂದಿ ಸ್ಥಳೀಯ ಹೊಟೇಲ್‌ಗ‌ಳಿಗೆ ಮೊರೆ ಹೋಗಿದ್ದರು. ಮತ್ತೆ ತಡವಾಗಿ ಭೋಜನ ವ್ಯವಸ್ಥೆ ಕಲ್ಪಿಸಿದ್ದು, ಆಯೋಗದ ಮೆನುವಿನಂತೆಯೂ ಭೋಜನ ನೀಡದೆ ಅವ್ಯವಸ್ಥೆ ಸೃಷ್ಟಿಸಿದ್ದಾರೆ.

ಈ ವಿಚಾರವಾಗಿ ಅಧಿಕಾರಿಗಳು ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಚುನಾವಣೆಗೆ ಆಯೋಗ ಕೋಟಿ ಕೋಟಿ ವ್ಯಯಿಸಿದರೂ ಸಿಬಂದಿಗೆ ಸ್ಥಳೀಯಾಡಳಿತ ಅಗತ್ಯ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಅಸಮಾಧಾನ ಹೊರಹಾಕಿದ ಘಟನೆ ಕಂಡುಬಂತು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.