ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಸೇರಿಸಲು ವಿಫ‌ಲ: ಡಿ.ವಿ. ಸದಾನಂದ ಗೌಡ

ತುಳುವೆರೆ ಚಾವಡಿಯ ಬೆಳ್ಳಿಹಬ್ಬ ಸಮಾರೋಪ

Team Udayavani, Feb 13, 2023, 5:45 AM IST

ತುಳುವೆರೆ ಚಾವಡಿ ಸಮಾರೋಪ

ಬೆಂಗಳೂರು: ತುಳು ವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನದಲ್ಲಿ ರಾಜಕಾರಣಿಗಳಾಗಿ ನಾವು ವಿಫ‌ಲರಾಗಿದ್ದೇವೆ ಎಂದು ಮಾಜಿ ಸಿಎಂ, ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಕಲಾ ಕ್ಷೇತ್ರದಲ್ಲಿ ಬೆಂಗಳೂರಿನ ತುಳುವೆರೆ ಚಾವಡಿ ಸಂಘಟನೆಯ 25ನೇ ವರ್ಷದ ಬೆಳ್ಳಿ ಹಬ್ಬ (ಬೊಳ್ಳಿ ಪರ್ಬ) ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗತ್ತಿನಲ್ಲಿ ಏಳು ಸಾವಿರ ಭಾಷೆಗಳಿವೆ. ಇದರಲ್ಲಿ ಮೂರೂವರೆ ಸಾವಿರ ಭಾಷೆಗಳು ಭಾರತದಲ್ಲಿದೆ. ಈವರೆಗೆ 22 ಭಾಷೆಗಳು ಮಾತ್ರ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿವೆ. 108 ಭಾಷೆಗಳು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರುವ ಪ್ರಯತ್ನ ನಡೆಸುತ್ತಿದ್ದು, ಇದರಲ್ಲಿ ತುಳು ಸೇರಿ 35 ಭಾಷೆಗಳು 22ನೇ ಪರಿಚ್ಛೇದಕ್ಕೆ ಸೇರಲು ಹೋರಾಡುತ್ತಿವೆ ಎಂದರು.

ಆಶಿರ್ವಚನ ನೀಡಿದ ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಹೃದಯದ ಭಾವನೆಗಳ ಇನ್ನೊಂದು ರೂಪವೇ ಭಾಷೆ. ತುಳುನಾಡಿನವರಿಗೆ ಎರಡು ಭಾಷೆ ಇದೆ. ಕನ್ನಡ ರಾಜ್ಯ ಭಾಷೆಯಾಗಿದ್ದು, ತುಳು ಮಾತೃಭಾಷೆಯಾಗಿದೆ. ಮಾತೃಭಾಷೆಯನ್ನು ಬಳಸಲು ಹಿಂಜರಿಕೆ ಸಲ್ಲದು ಎಂದು ಹೇಳಿದರು.

ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ವಿಚಾರ ಹೋರಾಟದ ಹಾದಿ ಯಲ್ಲಿದೆ. ಆದರೆ ಅದಕ್ಕಿಂತ ಮುನ್ನ ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿಸಬೇಕು ಎಂದರು.

ಮಕ್ಕಳ ಪದ ಸಾಹಿತ್ಯ ಕೃತಿ “ಜೋಕುಲೆ ಉಜ್ಜಾಲ್‌’ ಪುಸ್ತಕ ಬಿಡುಗಡೆ ಮಾಡಲಾಯಿತು. ಕೆ. ಇ. ರಾಧಾಕೃಷ್ಣ ಬರೆದಿರುವ ‘ಸತ್ಯಪ್ಪೆ ಬಾಲೆಲು’ ತುಳು ಕತೆಯ ಆಡಿಯೋ ಬಿಡುಗಡೆ ಮಾಡಲಾಯಿತು.

ಖ್ಯಾತ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್‌ ಕಟೀಲು, ಹಿರಿಯ ತುಳು ಸಾಹಿತಿ ಕುಶಲಾಕ್ಷಿ ವಿ. ಕಣ್ವತೀರ್ಥ, ಸ್ಫೂರ್ತಿ ಭಿನ್ನ ಸಾಮರ್ಥ್ಯದ ಶಾಲೆಯ ಪ್ರಕಾಶ್‌ ಜೆ ಶೆಟ್ಟಿಗಾರ್‌ ಇವರಿಗೆ ತುಳುನಾಡª ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಸಾಹಿತಿ ಡಿ.ಕೆ.ಚೌಟ ಸ್ಮರರ್ಣಾಥ ತುಳು ಸಾಹಿತಿ ಉಗ್ರಪ್ಪ ಪೂಜಾರಿಯವರಿಗೆ ಮತ್ತು ತುಳು ಪರ ಹೋರಾಟಗಾರ ಡಾ| ಉದಯ ಧರ್ಮಸ್ಥಳ ಸ್ಮರರ್ಣಾಥವಾಗಿ ತುಳು ಸೇವೆಗಾಗಿ ಯುವ ಪ್ರತಿಭೆ ಸತೀಶ್‌ ಗೆ ಪ್ರಶಸ್ತಿ ನೀಡಲಾಯಿತು. ವಿಶೇಷ ಚೇತನರಾದ ಉಲ್ಲಾಸ್‌ ಯು. ನಾಯಕ್‌, ಲಿಖಿತ ಮತ್ತು ಶ್ರಾವ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶಿಕ್ಷಣ ತಜ್ಞ ಪ್ರೊ| ಕೆ.ಇ.ರಾಧಾಕೃಷ್ಣ, ತುಳುವೆರೆ ಚಾವಡಿ ಸಂಘದ ಅಧ್ಯಕ್ಷ ಪುರುಷೋತ್ತಮ್‌ ಚೇಂಡ್ಲಾ, ಉಮೇಶ್‌ ಪೂಂಜ, ವಸಂತ್‌ ಶೆಟ್ಟಿ ಬೆಳ್ಳಾರೆ ಉಪಸ್ಥಿತರಿದ್ದರು.

ಮಂಗಳೂರಿನ ತಂಡರ್‌ ಕಿಡ್ಸ್‌ ತಂಡದಿಂದ ಪದರಂಗಿತ, ವಂದನಾ ರೈ ಕಾರ್ಕಳ ಇವರಿಂದ ಪದ ನೃತ್ಯರೂಪಕ ಜರಗಿತು.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.