ಹನ್ನೆರಡು ದಿನ ನಿರಂತರ ಪಾರಾಯಣ, ಭಜನೆ, ಗೋಷ್ಠಿ


Team Udayavani, Dec 31, 2019, 3:07 AM IST

hanneradu

ಬೆಂಗಳೂರು: ಪೇಜಾವರ ಶ್ರೀಗಳು ವೃಂದಾವನಸ್ಥರಾದ ಹಿನ್ನೆಲೆಯಲ್ಲಿ ಕತ್ರಿ ಗುಪ್ಪೆಯ ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಮುಂದಿನ 12 ದಿನಗಳು ಭಜನೆ, ಪಾರಾ ಯಣ ಹಾಗೂ ವಿದ್ವಾಂಸರ ಗೋಷ್ಠಿಗಳು ಅಖಂಡವಾಗಿ ನಡೆ ಯಲಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ಪೂರ್ಣಪ್ರಜ್ಞಾ ವಿದ್ಯಾಪೀಠ ದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಗುರುಗಳು ಹರಿಪಾದ ಸೇರಿ ದಿನಗಳು ಕಳೆದಿದೆ. ಗುರು ಗಳ ಮೇಲಿನ ಗೌರವದಿಂದ ಸರ್ಕಾರ, ಅಧಿಕಾರಿಗಳು, ನಾಡಿನ ಸಮಸ್ತ ಜನತೆ ಪಾರ್ಥಿವ ಶರೀರಕ್ಕೆ ಸಂಸ್ಕಾರ ಅರ್ಪಿಸಿದ್ದಾರೆ. ಮುಂದಿನ 12 ದಿನಗಳ ಕಾಲ ಭಜನೆ, ಪಾರಾಯಣ, ವಿದ್ವಾಂಸರ ಗೋಷ್ಠಿ ನಿರಂತರವಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸರ್ಕಾರವು ಗುರುಗಳ ಸಾಧನೆ ಗಮನಿಸಿ, ಸಕಲ ಸರ್ಕಾರಿ ಗೌರವ ನೀಡಿದೆ. ಇದಕ್ಕಾಗಿ ಸರ್ಕಾರ, ಅಧಿಕಾರಿ ವರ್ಗವನ್ನು ಅಭಿನಂದಿಸುತ್ತೇವೆ. ಎಲ್ಲ ವ್ಯವಸ್ಥೆಯೂ ಸುಸೂತ್ರವಾಗಿ ನಡೆದಿದೆ. ನಾಡಿನಾದ್ಯಂತ ಇರುವ ಸಹಸ್ರಾರು ಭಕ್ತರು ಅಂತಿಮ ದರ್ಶನ ಪಡೆದು, ಗೌರವ ನಮನ ಅರ್ಪಿಸಿ ದ್ದಾರೆ. ಎಲ್ಲರಿಗೂ ಕೃಷ್ಣನ ಅನು ಗ್ರಹವನ್ನು ಪ್ರಾರ್ಥಿಸುವುದಾಗಿ ಹೇಳಿದರು.

ವಿದ್ಯಾಪೀಠದ ವಿದ್ವಾಂಸರಾದ ಹರಿ ದಾಸ ಭಟ್‌ ಮಾತನಾಡಿ, 12ನೇ ದಿನ ದ್ವಾದಶ ಮೂರ್ತಿ ಆರಾಧನೆ, 12 ಮಂದಿ ಯತಿ ಅರ್ಹ ವಿದ್ವಾಂಸರಿಂದ ವಿಶೇಷವಾಗಿ ಆರಾಧನೆ ಮಾಡಲಾಗುತ್ತದೆ. ಜಯನಗರ ದಲ್ಲಿರುವ ಆಸ್ಪತ್ರೆಯಲ್ಲಿ ಜನ ಸಾಮಾನ್ಯರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. 13ನೇ ದಿನ ಶ್ರೀಗಳ ಸಂಕಲ್ಪ ನಡೆಯಲಿದೆ.

ಬೆಂಗಳೂರಿನ ಆಸು ಪಾಸಿನಲ್ಲಿರುವ ಹಿಂದುಳಿದ ವರ್ಗದ ಪ್ರದೇಶದಲ್ಲಿ ಅನ್ನ ಸಂತರ್ಪಣೆ ಹಾಗೂ ವಿದ್ಯಾಪೀಠದಲ್ಲಿ ಭಕ್ತಾದಿಗಳಿಗೆ ಸಾರ್ವಜನಿಕವಾಗಿ ಮಹಾ ಅನ್ನ ಸಂತರ್ಪಣೆ ನಡೆಸಲಾಗುತ್ತದೆ ಎಂದರು. ಶ್ರೀಗಳ ಕಾರ್ಯ ಸಾಧನೆಯನ್ನು ವರ್ಷ ಪೂರ್ತಿ ನಾಡಿನಾದ್ಯಂತ ಅವರ ಸ್ಮರಣೆಯ ಕಾರ್ಯ ನಡೆಸಲು ವಿಶ್ವಪ್ರಸನ್ನ ತೀರ್ಥರು ಯೋಜನೆ ರೂಪಿಸಿಕೊಂಡಿದ್ದಾರೆ ಎಂದು ಹೇಳಿದರು.

ದೇವರ ಅನುಗ್ರಹವಿತ್ತು: ಶ್ರೀಗಳು ತಮ್ಮ ದೇಹತ್ಯಾಗ ಮಾಡುವ ಕೆಲವೇ ದಿನಗಳ ಮೊದಲು ತಿರುಪತಿಗೆ ಹೋಗಿ ದೇವರ ದರ್ಶನ ಪಡೆದಿದ್ದರು. ನಂತರ ಬೆಂಗಳೂರಿನ ಪೂರ್ಣಪ್ರಜ್ಞಾ ವಿದ್ಯಾಪೀಠಕ್ಕೆ ಭೇಟಿ, ಇಲ್ಲಿಂದ ತಮ್ಮ ಹುಟ್ಟೂರಾದ ರಾಮಕುಂಜಾಗೆ ಭೇಟಿ ನೀಡಿದ್ದಾರೆ. ಆಚಾರ್ಯರ ಅವತಾರವಾದ ಉಡುಪಿಯ ಪಾಜಕಕ್ಕೆ ಭೇಟಿ ನೀಡಿ, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ತಾವು ಆರಾಧಿಸಿಕೊಂಡು ಬಂದ ಉಡುಪಿ ಶ್ರೀಕೃಷ್ಣನನ್ನು ದರ್ಶನ ಮಾಡಿದ ಬಳಿಕ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಶ್ರೀಗಳ ಮೇಲೆ ಸಂಪೂರ್ಣವಾಗಿ ದೇವರ ಅನುಗ್ರಹ ಇತ್ತು ಎಂದು ಸ್ಮರಿಸಿದರು.

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ
ಉಡುಪಿ: ಪಾಮರರಿಂದ ಹಿಡಿದು ಪಂಡಿತರವರೆಗೆ, ಸಾಮಾನ್ಯರಿಂದ ಹಿಡಿದು ಪ್ರಧಾನಿಯವರೆಗೆ ಸಂಪರ್ಕ ಹೊಂದಿದ್ದರೂ ಪೇಜಾವರ ಮಠದ ಒಂದು ಸಣ್ಣ ಕೋಣೆಯಲ್ಲಿ ಸಾಮಾನ್ಯ ಮಂಚದ ಮೇಲೆ ಮಲಗುತ್ತಿದ್ದ ಪೇಜಾವರ ಶ್ರೀಗಳು ಭಾನುವಾರ ಹರಿಪಾದ ಸೇರಿದ ಪರಿಣಾಮ ಸೋಮವಾರ ಮಠದೊಳಗೂ ಹೊರಗೂ ದಿವ್ಯಮೌನ ಆವರಿಸಿತ್ತು.

ಸ್ವಾಮೀಜಿಯವರು ಮಠದಲ್ಲಿದ್ದರೆ ಅಥವಾ ಮಠಕ್ಕೆ ಬರುತ್ತಾರೆಂದು ಗೊತ್ತಾಗುತ್ತಿದ್ದರೆ ಗಿಜಿಗುಡುತ್ತಿದ್ದ ಜನಸಂದಣಿ ಸೋಮವಾರವಿರಲಿಲ್ಲ. ಉಡುಪಿಯಲ್ಲಿದ್ದಾಗ ಮಠದ ಗರ್ಭಗುಡಿ ಎದುರು ಅವರು ಜಪ, ಪಾರಾಯಣ ಮಾಡುತ್ತಿದ್ದ ಸ್ಥಳ ಅವರಿಲ್ಲದ ಶೂನ್ಯಭಾವ ಹೊಂದಿತ್ತು. ಸ್ವಾಮಿಗಳಿದ್ದಾರೆಂದರೆ ಅವರ ಸುತ್ತಮುತ್ತ ಓಡಾಡುತ್ತಿದ್ದ ವಿದ್ಯಾರ್ಥಿಗಳೊಬ್ಬರೂ ಇಲ್ಲದ ನೀರವ ವಾತಾವರಣವಿತ್ತು.

ಸಮಾಜದ ಸಹಕಾರ ಬೇಕು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಮಾತನಾಡಿ, ಶ್ರೀಗಳ ಆದರ್ಶಗಳನ್ನು ಪರಿಪಾಲಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿದ್ದೇವೆ. ಸಾಹಿತ್ಯ, ಶಿಕ್ಷಣ, ಆರೋಗ್ಯ, ದಾನ-ಧರ್ಮಗಳು, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮಾಜದ ಜತೆಗೆ ಗುರುಗಳು ನೇರವಾಗಿ ಸಹಾಯಕ್ಕೆ ಧುಮುಕುತ್ತಿದ್ದರು. ಶ್ರೀಗಳ ಮಾರ್ಗದರ್ಶನದಂತೆ ನಾವೂ ಮುಂದುವರಿಸುತ್ತೇವೆ. ನಮ್ಮೆಲ್ಲ ಪ್ರಯತ್ನಗಳು ಸಾಂಗವಾಗಿ ಕೈಗೂಡಬೇಕಾದರೆ ಸಮಾಜದ ಸಹಕಾರ ಬೇಕು ಎಂದು ಕೋರಿದರು.

ಶಿಲೆಯಲ್ಲಿ ವೃಂದಾವನ: ಶ್ರೀಗಳ ಇಚ್ಛೆಯಂತೆ ಪೂರ್ಣಪ್ರಜ್ಞಾ ವಿದ್ಯಾಪೀಠದ ಆವರಣದಲ್ಲಿ ವೃಂದಾವನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೆಲ ಸಮತಟ್ಟಾದ ನಂತರ, ಶಾಸ್ತ್ರೀಯ ಪರಿಕಲ್ಪನೆಯಲ್ಲಿ ಶಿಲಾಮಯವಾದ ಕೂರ್ಮಾಸನದಿಂದ ಆರಂಭವಾಗಿ ಐದು ಸ್ತರಗಳನ್ನು ಹೊಂದಿರುವ ಭವ್ಯವಾದ ವೃಂದಾವನ ನಿರ್ಮಿಸುವ ಯೋಜನೆಯಿದೆ. ಸಾರ್ವಜನಿಕರು ಭೇಟಿ ನೀಡಿದ ವೇಳೆ ದೀಪ ಬೆಳಗಲು ಅನುಕೂಲವಾಗುವಂತೆ ವೃಂದಾವನ ನಿರ್ಮಾಣವಾಗಲಿದೆ.

ಶ್ರೀಗಳ ವ್ಯಕ್ತಿತ್ವಕ್ಕೆ ಅನುಗುಣವಾಗಿ ಭವ್ಯ ಹಾಗೂ ಆಕರ್ಷಕ ವೃಂದಾವನವನ್ನು ಮಠದ ವತಿಯಿಂದಲೇ ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಮತ್ತು ಸಾರ್ವಜನಿಕರ ಸಹಾಯವನ್ನು ನಾವಾಗಿ ಕೇಳುವುದಿಲ್ಲ. ಸ್ವಪ್ರೇರಣೆಯಿಂದ ಸಹಾಯ ನೀಡಿದರೆ ಉಪಯೋಗಿಸಿಕೊಳ್ಳಲಿದ್ದೇವೆ ಎಂದು ವಿದ್ಯಾಪೀಠದ ವಿದ್ವಾಂಸರಾದ ಹರಿದಾಸ ಭಟ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.