ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ದಿನಕ್ಕೆರಡು ಅಪಘಾತಗಳು; 2 ದಿನಕ್ಕೊಂದು ಸಾವು!

7 ತಿಂಗಳಲ್ಲಿ 398 ಅಪಘಾತ; 121 ಸಾವು

Team Udayavani, Jul 28, 2023, 7:25 AM IST

bang mys expressway

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಪ್ರತಿ ದಿನ ಸರಾಸರಿ ಎರಡು ಅಪಘಾತಗಳಾಗುತ್ತಿದ್ದು, ಎರಡು ದಿನಕ್ಕೊಂದು ಸಾವು ಸಂಭವಿಸುತ್ತಿದೆ. ಈ ಮೂಲಕ ಅಕ್ಷರಶಃ ಉದ್ದೇಶಿತ ಮಾರ್ಗವು ವಾಹನ ಸವಾರರ ಪಾಲಿಗೆ “ಸಾವಿನ ರಹದಾರಿ’ಯಾಗುತ್ತಿದೆ!

ಜನವರಿಯಲ್ಲಿ ಉದ್ಘಾಟನೆಗೊಂಡ ಈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಏಳು ತಿಂಗಳಲ್ಲಿ 398 ಅಪಘಾತಗಳು ಸಂಭವಿಸಿ 121 ಜನ ಮೃತಪಟ್ಟಿದ್ದಾರೆ. ಈ ಪೈಕಿ ಪ್ಯಾಕೇಜ್‌ 1 (ಬೆಂಗಳೂರು- ನಿಡಗಟ್ಟ)ರಲ್ಲಿ 189 ಅಪಘಾತಗಳಲ್ಲಿ 59 ಸಾವು ಹಾಗೂ ಪ್ಯಾಕೇಜ್‌ 2 (ನಿಡಗಟ್ಟ- ಮೈಸೂರು)ರಲ್ಲಿ 209 ರಸ್ತೆ ಅಪಘಾತಗಳಿಂದ 62 ಜನ ಮೃತಪಟ್ಟಿದ್ದಾರೆ.

ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿದ ಲಿಖೀತ ಮಾಹಿತಿ ಇದು. ಸಂಸದರಾದ ಸುಮಲತಾ ಅಂಬರೀಷ್‌ ಮತ್ತು ಪ್ರಜ್ವಲ್‌ ರೇವಣ್ಣ ಅವರು ಸಂಸತ್‌ನಲ್ಲಿ ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಗುರುವಾರ ಸಚಿವಾಲಯ ನೀಡಿದ ಉತ್ತರದಲ್ಲಿ ಈ ಮಾಹಿತಿ ಲಭ್ಯವಾಗಿದೆ. ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಆಗಸ್ಟ್‌ 1ರಿಂದ ಉದ್ದೇಶಿತ ಮಾರ್ಗದಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್‌ ಸಹಿತ ನಿಧಾನಗತಿಯಲ್ಲಿ ಸಾಗುವ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈಗಾಗಲೇ ಬೆಂಗಳೂರು- ಮೈಸೂರು ಎಕ್ಸೆಸ್‌ ಕಂಟ್ರೋಲ್ಡ್‌ ಕಮಿಟಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮೂರು ದಿನಗಳ ಕಾಲ ಪರಿಶೀಲನೆ ನಡೆಸಿದೆ ಎಂದು ಸಚಿವಾಲಯ ತಿಳಿಸಿದೆ.
ಮಾರ್ಗದುದ್ದಕ್ಕೂ ಮಾರ್ಗಸೂಚಿಗಳನ್ವಯ ಸೂಚನೆ ಫ‌ಲಕಗಳು, ಸಿಸಿ ಕೆಮರಾ ಅಳವಡಿಕೆ, ಜೀವರಕ್ಷಕ ಉಪಕರಣಗಳನ್ನು ಹೊಂದಿರುವ ಆ್ಯಂಬುಲನ್ಸ್‌, ಪ್ಯಾರಾಮೆಡಿಕಲ್‌ ಸಿಬಂದಿ ನಿಯೋಜನೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ತುರ್ತು ಸಹಾಯ ಕೇಂದ್ರ ಆರಂಭ
ಈ ಮಧ್ಯೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸೋಲಾರ್‌ ಆಧಾರಿತ ಜೀವರಕ್ಷಣೆಗೆ ಧಾವಿಸುವ ತುರ್ತು ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಹೆದ್ದಾರಿ ಉದ್ದಕ್ಕೂ ಅಲ್ಲಲ್ಲಿ ಕಂಡುಬರುವ ಈ ಸೋಲಾರ್‌ ಆಧಾರಿತ ಹಳದಿ ಬಣ್ಣದ ಪೆಟ್ಟಿಗೆಗಳು ಅಪಘಾತದ ಸಂದರ್ಭದಲ್ಲಿ ನೆರವಿಗೆ ಬರಲಿವೆ. ಅಪಘಾತಕ್ಕೀಡಾದ ಸಂದರ್ಭದಲ್ಲಿ ಯಾರಾದರೂ ಈ ಪೆಟ್ಟಿಗೆ ತೆರೆದು ಕರೆ ಮಾಡಿ, ತುರ್ತು ನೆರವು ಪಡೆಯಬಹುದು. ಅಲ್ಲದೆ, ಹತ್ತಿರದ ಪೊಲೀಸ್‌ ಠಾಣೆಗೆ ಕರೆ ಮಾಡಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.