![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, May 4, 2020, 7:08 PM IST
ಸಾಂದರ್ಭಿಕ ಚಿತ್ರ.
ಮಂಡ್ಯ: ಮುಂಬಯಿಯಿಂದ ಕೆ.ಆರ್.ಪೇಟೆ ತಾಲೂಕಿನ ಜಾಗಿನಕೆರೆ ಗ್ರಾಮಕ್ಕೆ ಬಂದ ಗರ್ಭಿಣಿ ಮತ್ತು ಯುವತಿಯಲ್ಲಿ ಕೋವಿಡ್- 19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೇರಿದೆ. ಇವರಿಬ್ಬರನ್ನೂ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬಯಿಯ ಸಾಂತಾಕ್ರೂಸ್ ಈಸ್ಟ್ ನ್ಯೂ ಅಗ್ರಿಪಾಡ ಬಡಾವಣೆ ಅಪಾರ್ಟ್ಮೆಂಟ್ನಲ್ಲಿ 20 ವರ್ಷದ ಮಹಿಳೆ, ತನ್ನ ಪತಿ, ಭಾವ, ಭಾವನ ಹೆಂಡತಿ, ಮಕ್ಕಳೊಂದಿಗೆ 3 ವರ್ಷಗಳಿಂದ ವಾಸವಾಗಿದ್ದಾರೆ. ಇವರೆಲ್ಲರೂ ಕೆ.ಆರ್.ಪೇಟೆ ತಾಲೂಕು ಜಾಗಿನಕೆರೆ ಗ್ರಾಮದವರು ಎಂದು ಜಿಲ್ಲಾಧಿಕಾರಿ ಡಾ| ವೆಂಕಟೇಶ್ ತಿಳಿಸಿದ್ದಾರೆ.
ಪಿ.637 ಎಂದು ಗುರುತಿಸಿರುವ 7 ತಿಂಗಳ ಗರ್ಭಿಣಿ ತನ್ನ ಪತಿ, ಭಾವ, ಭಾವನ ಹೆಂಡತಿ ಮತ್ತು ಮಕ್ಕಳೊಂದಿಗೆ ಎ.23ರಂದು ಮುಂಬಯಿಯಿಂದ ಇನೋವಾ ಕಾರಿನಲ್ಲಿ ಹೊರಟು, 24ರಂದು ಮಧ್ಯಾಹ್ನ ಜಾಗಿನಕೆರೆ ಗ್ರಾಮಕ್ಕೆ ಬಂದಿದ್ದರು. ಈಕೆ ಗರ್ಭಿಣಿಯಾದ ಕಾರಣ ಚೆಕ್ಪೋಸ್ಟ್ಗಳಲ್ಲಿ ತಾಯಿ ಕಾರ್ಡ್ ತೋರಿಸಿ ಬಂದಿದ್ದಾರೆ. ಮೇ 1 ರಂದು ಅವರ ಗಂಟಲ ದ್ರವ ಪರೀಕ್ಷೆಯಲ್ಲಿ ಕೋವಿಡ್- 19 ಸೋಂಕು ಪತ್ತೆಯಾಗಿದೆ.
ಬಿಇ ವಿದ್ಯಾರ್ಥಿಗೆ ಸೋಂಕು
ಮುಂಬಯಿಯ ಎಲ್.ಆರ್.ತಿವಾರಿ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿರುವ 19 ವರ್ಷದ ಯುವತಿಗೂ ಸೋಂಕು ದೃಢಪಟ್ಟಿದೆ. ಇವರು ಗರ್ಭಿಣಿಯೊಂದಿಗೆ ಮುಂಬಯಿಯಿಂದ ಪ್ರಯಾಣ ಮಾಡಿ ಜಾಗಿನಕೆರೆ ಗ್ರಾಮಕ್ಕೆ ಬಂದಿದ್ದಾರೆ. ಇವರ ಗಂಟಲದ್ರವ ಪರೀಕ್ಷೆ ನಡೆಸಿದಾಗ ಸೋಂಕು ಪತ್ತೆಯಾಗಿದ್ದು, ಇಬ್ಬರನ್ನೂ ಮಿಮ್ಸ್ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.