UBI: ದಾಖಲೆಯ ಲಾಭಾಂಶ ಚೆಕ್‌ ಹಸ್ತಾಂತರ


Team Udayavani, Aug 30, 2023, 1:07 AM IST

UBI: ದಾಖಲೆಯ ಲಾಭಾಂಶ ಚೆಕ್‌ ಹಸ್ತಾಂತರ

ಮಣಿಪಾಲ: ಯೂನಿಯನ್‌ಬ್ಯಾಂಕ್‌ ಆಫ್ ಇಂಡಿಯಾವು ತನ್ನ ಇತಿಹಾಸದಲ್ಲಿಯೇ ದಾಖಲೆಯ 1,712 ಕೋಟಿ ರೂ.ಗಳ ಲಾಭಾಂಶ ವನ್ನು ಕೇಂದ್ರ ಸರಕಾರಕ್ಕೆ ನೀಡಿದೆ.

ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ((MD, CEO) ಎ. ಮಣಿಮೇಖಲೈ ಅವರು ಹೊಸದಿಲ್ಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ದಾಖಲೆಯ 1,712 ಕೋಟಿ ರೂ.ಗಳ ಲಾಭಾಂಶದ ಚೆಕ್‌ ಅನ್ನು ಹಸ್ತಾಂತರಿಸಿದರು. ಇದು ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾವು ನೀಡಿರುವ ಸರ್ವಾಧಿಕ ಲಾಭಾಂಶವಾಗಿದೆ.

ಹೊಸ ಅಧ್ಯಕ್ಷರ ಸಾಧನೆ
2022ರ ಜೂನ್‌ 2 ರಂದು ಸರಕಾರವು ಎ. ಮಣಿಮೇಖಲೈ ಅವರನ್ನು ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಹೊಸ ಎಂಡಿ ಮತ್ತು ಸಿಇಒ ಆಗಿ ಮೂರು ವರ್ಷಗಳ ಅವಧಿಗೆ ನೇಮಿಸಿತು. ಅವರ ನೇಮಕದ ಬಳಿಕ ಒಂದು ವರ್ಷದೊಳಗೆ ಬ್ಯಾಂಕಿನ ಪ್ರಗತಿಯ ವೇಗಕ್ಕೆ ಹೊಸ ಆಯಾಮವನ್ನು ನೀಡಿದರು. ಮೇ 2023ರ ಮಾರ್ಚ್‌ ತ್ರೈಮಾಸಿಕದಲ್ಲಿ ಒಟ್ಟು ಲಾಭಾಂಶದಲ್ಲಿ ಶೇ. 80.57 ಜಿಗಿತವನ್ನು ಕಂಡು 2,811 ಕೋಟಿ ರೂಪಾಯಿ ನಿವ್ವಳ ಲಾಭ ದಾಖಲಿಸಿತು. ರಿಟನ್‌-ಆಫ್ ಖಾತೆಗಳಿಂದ ದೊಡ್ಡ ಪ್ರಮಾಣದ ಬಾಕಿ ಸಾಲ ವಸೂಲಾತಿಯೇ ಇದಕ್ಕೆ ಮೂಲ ಕಾರಣವಾಗಿದೆ.

ಒಂದು ವರ್ಷದ ಹಿಂದೆ 5,265 ಕೋಟಿ ರೂ. ಇದ್ದ ಬ್ಯಾಂಕಿನ ನಿವ್ವಳ ಲಾಭವು 2022-23ರಲ್ಲಿ 8,512 ಕೋಟಿ ರೂ.ಗೆ ಏರಿದೆ. ಕಳೆದ ವರ್ಷ ರಿಟನ್‌-ಆಫ್ ಖಾತೆಗಳಿಂದ ವಸೂಲಾತಿ 294 ಕೋಟಿ ರೂ. ಆಗಿದ್ದರೆ, ಈ ಸಾಲಿನಲ್ಲಿ 2,954 ಕೋಟಿ ರೂ. ವಸೂಲಾಗಿದೆ.

ಗುರಿ 15,000, ಸಾಧನೆ 20,000
ಆರ್ಥಿಕ ವರ್ಷ 2023ರಲ್ಲಿ ಬ್ಯಾಂಕ್‌ 15,000 ಕೋಟಿ ರೂಪಾಯಿಗಳ ಸಾಲ ವಸೂಲಾತಿಯ ಗುರಿ ಹೊಂದಿತ್ತು. ಆದರೆ 20,000 ಕೋಟಿಗೂ ಹೆಚ್ಚು ಸಂಗ್ರಹಿಸುವ ಮೂಲಕ ಗುರಿಯನ್ನು ಮೀರಿದ ಅದ್ಭುತ ಸಾಧನೆಗೈದಿದೆ ಎಂದು ಮಣಿಮೇಖಲೈ ತಿಳಿಸಿದ್ದಾರೆ.

ವೃತ್ತಿ ಜೀವನದ ಯಶಸ್ಸು
ವಿವಿಧ ಸರಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಸ್ತರದ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ವೃತ್ತಿಪರ ಬ್ಯಾಂಕರ್‌ ಆಗಿರುವ ಎ. ಮಣಿಮೇಖಲೈ ಅವರು ಬೆಂಗಳೂರು ವಿವಿಯಿಂದ ಎಂಬಿಎ ಮತ್ತು ಮುಂಬಯಿಯ ನಸೀì ಮೊಂಜಿ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌(NMIMS)ನಿಂದ ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ಡಿಪ್ಲೊಮಾವನ್ನು ಹೊಂದಿದ್ದಾರೆ.

ಅವರು ಬ್ಯಾಂಕಿಂಗ್‌ ವೃತ್ತಿಜೀವನ ವನ್ನು ಹಿಂದಿನ ವಿಜಯಾ ಬ್ಯಾಂಕ್‌ನಲ್ಲಿ 1988ರಲ್ಲಿ ಅಧಿಕಾರಿಯಾಗಿ ಪ್ರಾರಂಭಿಸಿದರು. ಅವರು ಅಲ್ಪಾವಧಿ ಯಲ್ಲಿಯೇ ಬ್ಯಾಂಕಿನ ಜನರಲ್‌ ಮ್ಯಾನೇಜರ್‌ ಆಗಿದ್ದಲ್ಲದೆ, ಬೆಂಗಳೂರು ಉತ್ತರ ವಲಯದ ಮುಖ್ಯಸ್ಥರೂ ಆಗಿದ್ದರು.ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾಗೆ ಸೇರುವ ಮೊದಲು, ಅವರು ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.