“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

ಡಾ| ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು...

Team Udayavani, Oct 2, 2024, 1:55 PM IST

“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರವರೆಗೆ ಜರಗಲಿರುವ ಉಚ್ಚಿಲ ದಸರಾ 2024ರ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತರ ಸಹಕಾರದೊಂದಿಗೆ ಶಾಲಿನಿ ಡಾ| ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ -ನೃತ್ಯ ಸ್ಪರ್ಧೆ : ಅ.3ರ ಸಂಜೆ 6.30ರಿಂದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ದೊರಕಲಿದೆ. ಅ. 4ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಲೈವ್‌ ಹಿನ್ನೆಲೆ ಸಂಗೀತ ವಾದನದೊಂದಿಗೆ ನಾಟ್ಯ ನಿಲಯಂ ಮಂಜೇಶ್ವರ ತಂಡದವರಿಂದ ನೃತ್ಯ ವೈವಿಧ್ಯ, ಅ. 5ರ ಸಂಜೆ ಗಂಟೆ 6.15ರಿಂದ
ಕ್ಷೇತ್ರದ ರಥಬೀದಿಯ ಸುತ್ತ ಸಾಮೂಹಿಕ ಭಜನ ಕುಣಿತ, ರಾತ್ರಿ 7.30ರಿಂದ ಜಿಲ್ಲಾ ಮೊಗವೀರ ಯುವ ಸಂಘಟನೆ ಸದಸ್ಯರಿಂದ
ಸಾಂಸ್ಕೃತಿಕ ಕಾಯಕ್ರಮ, ರಾತ್ರಿ 8.30ರಿಂದ ಗುರು ಕೌಸಲ್ಯ ನಿವಾಸ್‌ ಮತ್ತು ಬಳಗ, ಎಂ. ಎಸ್‌. ನಾಟ್ಯಕ್ಷೇತ್ರ ಬೆಂಗಳೂರು ಇವರಿಂದ ಶ್ರೀರಾಮ ಹನುಮಂತ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.

ಸಾಮೂಹಿಕ ದಾಂಡಿಯಾ: ಅ. 6ರ ಸಂಜೆ 6.30ರಿಂದ 8ರ ತನಕ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಸಾಮೂಹಿಕ ದಾಂಡಿಯಾ ನೃತ್ಯ, ರಾತ್ರಿ 8ರಿಂದ ಮೆಗಾ ಮ್ಯಾಜಿಕ್‌ ಸ್ಟಾರ್‌ ಕುದ್ರೋಳಿ ಗಣೇಶ್‌ ಅವರಿಂದ ವಿಸ್ಮಯ ಜಾದೂ, ಅ. 7ರ ಸಂಜೆ 4ರಿಂದ ವಿದುಷಿ ಪವನ ಬಿ. ಆಚಾರ್‌ ಮಣಿಪಾಲ ಅವರಿಂದ ಶತವೀಣಾವಲ್ಲರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಜ್ಞಾನ ಐತಾಳ್‌ ನೇತೃತ್ವದ ಹೆಜ್ಜೆನಾದ ಮಂಗಳೂರು ಇವರಿಂದ ನೃತ್ಯ
ಕಾರ್ಯಕ್ರಮ ನಡೆಯಲಿದೆ.

ಯಕ್ಷಗಾನ, ನೃತ್ಯ, ಹರಿಕಥೆ:
ಅ. 8ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ
ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಯಕ್ಷ ಕಲಾ ತಂಡ ಇವರಿಂದ ಚಕ್ರ ಚಂಡಿಕೆ ಯಕ್ಷಗಾನ, ಅ. 9ರ ಮಧ್ಯಾಹ್ನ 2ರಿಂದ ಯಶಸ್ವಿನಿ ಉಳ್ಳಾಲ್‌ ಅವರಿಂದ ಗಾನ ಲಹರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದೇವಿ ನೃತ್ಯಾರಾಧನ ಕಲಾಕೇಂದ್ರ ಪುತ್ತೂರು ಇದರ ನೃತ್ಯ ಗುರು ವಿದುಷಿ ರೋಹಿಣಿ ಉದಯ್‌ ಶಿಷ್ಯೆಯರಿಂದ ನೃತ್ಯ ರಂಜನಿ, ಅ. 10ರ ಸಂಜೆ 6.30ರಿಂದ ಖ್ಯಾತ  ಕೀರ್ತನಕಾರ ಡಾ| ಎಸ್‌.ಪಿ. ಗುರುದಾಸ್‌ ಮಂಗಳೂರು ಅವರಿಂದ ಹರಿಕಥಾ ಸತ್ಸಂಗ ಲಕ್ಷ್ಮೀ ಕಲ್ಯಾಣ ನಡೆಯಲಿದೆ.

ಅಜಯ್‌ ವಾರಿಯರ್‌ ನೇತೃತ್ವದಲ್ಲಿ ಸಂಗೀತ ಸಂಜೆ ಅ. 11ರ ಸಂಜೆ 6.30ರಿಂದ ಕಲಾಮೃತ ತಂಡ ಮಂಗಳೂರು ಅವರಿಂದ
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ಮತ್ತು ತಂಡ ಬೆಂಗಳೂರು
ಇವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಅ. 12ರ ಬೆಳಗ್ಗೆ 11.30ರಿಂದ ವಿದುಷಿ ಡಾ| ಸುಚಿತ್ರ ಹೊಳ್ಳ ಪುತ್ತೂರು ಅವರಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಅ. 12ರಂದು ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ಶೋಭಾಯಾತ್ರೆ ಮತ್ತು ಜಲಸ್ತಂಭನೆ
ಪ್ರಯುಕ್ತ ರಾತ್ರಿ 10 ಗಂಟೆಗೆ ಕಾಪು ಬೀಚ್‌ ನಲ್ಲಿ ಲೈವ್‌ ಮ್ಯೂಸಿಕ್‌ ಶೋ ಮತ್ತು ವಿಶೇಷ ಲೇಸರ್‌ ಶೋ ಪ್ರದರ್ಶನ ನಡೆಯಲಿದೆ
ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ  ಗಿರಿಧರ್‌ ಸುವರ್ಣ, ದಸರಾ ಉತ್ಸವ ಸಮಿತಿ
ಅಧ್ಯಕ್ಷ ವಿನಯ್‌ ಕರ್ಕೇರ ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.