Udayavani: “ದೀಪಾವಳಿ ಧಮಾಕಾ 2023” ಲಕ್ಕಿ ಡ್ರಾ ವಿಜೇತರ ಆಯ್ಕೆ

"ವಿಶೇಷತೆಗಳ ವಿಶೇಷಾಂಕ ಓದುಗರ ನೆಚ್ಚಿನ ಹೊತ್ತಗೆ"

Team Udayavani, Dec 15, 2023, 11:37 PM IST

lucky drw

ಮಣಿಪಾಲ: ವಿಶೇಷತೆಗಳನ್ನು ಹೊತ್ತು ತರುವ ಉದಯವಾಣಿ ವಿಶೇಷಾಂಕ ಓದುಗರ ನೆಚ್ಚಿನ ಹೊತ್ತಗೆಯಾಗಿದೆ. ಶಾಲಾ ದಿನಗಳಲ್ಲೇ ಅತ್ಯಂತ ಆಸಕ್ತಿಯಿಂದ ವಿಶೇಷಾಂಕವನ್ನು ಓದುತ್ತಿದ್ದ ನಾನು ಅದರಲ್ಲಿ ಬರುತ್ತಿದ್ದ ಚಿತ್ರ, ವ್ಯಂಗ್ಯ ಚಿತ್ರಗಳನ್ನು ಪುಸ್ತಕದ ಪುಟಗಳಲ್ಲಿ ಅಂಟಿಸುತ್ತಿದ್ದ ನೆನಪು ಈಗಲೂ ಹಸುರಾಗಿದೆ. ಹಂತ ಹಂತವಾಗಿ ವಿಶೇಷತೆಗಳನ್ನು ಮೈಗೂಡಿಸಿಕೊಂಡು ಬಂದಿರುವ ಉದಯವಾಣಿಯ ದೀಪಾವಳಿ ವಿಶೇಷಾಂಕಕ್ಕೆ ದೀಪಾವಳಿ ಧಮಾಕಾ ಚಿನ್ನದ ಮೆರುಗನ್ನು ನೀಡಿದೆ ಎಂದು ಮಂಗಳೂರಿನ ಮುಕುಂದ್‌ ಎಂಜಿಎಂ ರಿಯಾಲಿಟಿ ಮತ್ತು ವರ್ಟೆಕ್ಸ್‌ ವರ್ಕ್‌ ಸ್ಪೇಸ್‌ನ ಆಡಳಿತ ಪಾಲುದಾರ ಗುರುದತ್‌ ಶೆಣೈ ಹೇಳಿದರು.

ಮಣಿಪಾಲದ ಉದಯವಾಣಿ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಉದಯವಾಣಿಯು ಮಂಗಳೂರು ಲೇಡಿಹಿಲ್‌ ಎಸ್‌.ಎಲ್‌. ಶೇಟ್‌ ಡೈಮಂಡ್‌ ಹೌಸ್‌ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ “ದೀಪಾವಳಿ ಧಮಾಕಾ-2023’ರ ವಿಜೇತರನ್ನು ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಿ ಅವರು ಮಾತನಾಡಿದರು.

ಕಳೆದ 52 ವರ್ಷಗಳಿಂದ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲ ನೀಡುತ್ತಿರುವ ಉದಯವಾಣಿ ನನ್ನಂತಹ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುತ್ತ ಬೆಳೆಸಿದೆ. ಈ ಪ್ರಗತಿಯ ಪ್ರಕ್ರಿಯೆ ನಿರಂತರವಾಗಿರಲಿ. ಪತ್ರಿಕೆಯ ಬೆಂಬಲದೊಂದಿಗೆ ಅನೇಕ ಉದ್ಯಮ ಹಾಗೂ ಉದ್ಯಮಿಗಳು ಯಶಸ್ಸನ್ನು ಸಾಧಿಸಲಿ ಎಂದರು.

ನೆಚ್ಚಿನ ವಿಶೇಷಾಂಕ
ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಅವರು ಮಾತನಾಡಿ, ಉದಯವಾಣಿಯು ದೀಪಾವಳಿ ವಿಶೇಷಾಂಕವನ್ನು ಆರಂಭಿ ಸಿದ ಮುಂಚೂಣಿ ಪತ್ರಿಕೆ ಯಾಗಿದ್ದು, ಆರಂಭದಿಂದಲೂ ಸಂಚಿಕೆಯ ಮುಖ್ಯ ವಿಷಯದ ನಿರೂಪಣೆ, ಕಥೆ, ಬರೆಹ, ಲೇಖನಗಳ ಆಯ್ಕೆ ಹಾಗೂ ಪುಟ ವಿನ್ಯಾಸಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಪ್ರತೀ ವರ್ಷವೂ ವಿಶಿಷ್ಟ ರೀತಿಯಲ್ಲಿ ಹೊರತಂದ ನೆಲೆಯಲ್ಲಿ ಉದಯವಾಣಿ ವಿಶೇಷಾಂಕವು ಜನಮಾನಸದ ಅತ್ಯಂತ ನೆಚ್ಚಿನ ವಿಶೇಷಾಂಕವಾಗಿ ಗುರುತಿಸಿಕೊಂಡಿದೆ. ಇದರೊಂದಿಗೆ ಹಲವಾರು ವರ್ಷ
ಗಳಿಂದ ಉದಯವಾಣಿ ಆಯೋಜಿಸಿ ಕೊಂಡು ಬಂದಿರುವ ಎಸ್‌.ಎಲ್‌. ಶೇಟ್‌ ಉದಯವಾಣಿ ದೀಪಾವಳಿ ಧಮಾಕಾಕ್ಕೆ ಓದುಗರು ರಾಜ್ಯಾದ್ಯಂತ ತಮ್ಮ ಉತ್ತರವನ್ನು ಕಳುಹಿಸಿರುವುದು ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಎಂಎಂಎನ್‌ಎಲ್‌ ಉಪಾಧ್ಯಕ್ಷ (ನ್ಯಾಶನಲ್‌ ಹೆಡ್‌-ಮ್ಯಾಗಜಿನ್‌ ಆ್ಯಂಡ್‌ ಸ್ಪೆಶಲ್‌ ಇನೀಶಿಯೇಟಿವ್ಸ್‌) ರಾಮಚಂದ್ರ ಮಿಜಾರು ನಿರೂಪಿಸಿ, ಅತ್ಯಂತ ಪಾರದರ್ಶಕತೆಯಿಂದ ಅದೃಷ್ಟಶಾಲಿಗಳ ಆಯ್ಕೆ ನಡೆಯುತ್ತಿದ್ದು, ಓದುಗರು ಅತೀವ ವಿಶ್ವಾಸದಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಷಯ. ದೀಪಾವಳಿ ಧಮಾಕಾದ ಮೂಲಕ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ನಮ್ಮ ಓದುಗರು ಈಗಾಗಲೇ ಪಡೆದ ಅದೃಷ್ಟಶಾಲಿಗಳಾಗಿದ್ದಾರೆ. ಅಂತೆಯೇ ಈ ವರ್ಷವೂ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದರು.
ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್‌ ಉಷಾರಾಣಿ ಕಾಮತ್‌ ಸ್ವಾಗತಿಸಿದರು. ಸಹಾಯಕ ಸಂಪಾದಕ ರಾಜೇಶ್‌ ಮೂಲ್ಕಿ ವಂದಿಸಿದರು. ಅತಿಥಿಗಳು ಬಂಪರ್‌, ಪ್ರಥಮ, ದ್ವಿತೀಯ,

ತೃತೀಯ, ಪ್ರೋತ್ಸಾಹಕ ಬಹುಮಾನಗಳ ವಿಜೇತರನ್ನು ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಿದರು.

ದೀಪಾವಳಿ ಧಮಾಕಾ ವಿಜೇತರು

ಬಂಪರ್‌ ಬಹುಮಾನ: ಸುಧೇಷ್ಣಾ ಮಂಗಳೂರು
ಪ್ರಥಮ: ಕೆ.ವಿ. ಶಿವಕುಮಾರ್‌ ನಂಜನಗೂಡು ಮತ್ತು ರಾಕೇಶ್‌ ಜೆಪ್ಪಿನಮೊಗರು,
ದ್ವಿತೀಯ: ಆಕಾಶ್‌ ಕುಲಕರ್ಣಿ, ಸತ್ತೂರು ಧಾರವಾಡ, ಭವಾನಿ ಉಳ್ಳಾಲ, ಹರೀಶ್‌ ಐತಾಳ್‌ ಸುರತ್ಕಲ್‌,
ತೃತೀಯ: ಉಮೇಶ್‌ ಕುಂಜಿಬೆಟ್ಟು ಉಡುಪಿ, ನಾಗಭೂಷಣ ವಾಕೂಡ ಕೊಕ್ಕರ್ಣೆ, ಸುದರ್ಶನ್‌ ಶಿವರಾಮ ಶೆಟ್ಟಿ ಮೂಡುಬೆಳ್ಳೆ, ಪದ್ಮಿನಿ ಕೆ. ಮಂಗಳೂರು
ಪ್ರೋತ್ಸಾಹಕ ಬಹುಮಾನ: ಎಸ್‌.ವಿ. ರತನ ಶಿವಮೊಗ್ಗ, ಸಂತೋಷ್‌ ವಿಷ್ಣು ಮಡಿವಾಳ ಮಂಕಿ (ಉತ್ತರ ಕನ್ನಡ), ನಿಧಿ ಯಲಹಂಕ ಬೆಂಗಳೂರು, ಪ್ರತಿಮಾ ಕೆ.ಪಿ. ಕಾಸರಗೋಡು, ಸತ್ಯೇಂದ್ರ ಕೂಸ ಪೂಜಾರಿ ಮುಂಬಯಿ, ಪಿ. ನರಸಿಂಹಲು ಸಿಂಧನೂರು, ಸಂಧ್ಯಾ ಸವಣೂರು ಕಡಬ, ಪುಟ್ಟಣ್ಣ ಪೂಜಾರಿ ನಾಲ್ಕೂರು ಸುಳ್ಯ, ಅಬ್ದುಲ್‌ ರಜಾಕ್‌ ಅನಂತಾಡಿ ಬಂಟ್ವಾಳ, ಕೃಷ್ಣ ಮಟ್ಟಾರು ಕಾಪು, ರೇವತಿ ಮಯ್ನಾಡಿ ಬೈಂದೂರು, ಶೋಭಿತಾ ಹೊಸ್ಮಾರು ಕಾರ್ಕಳ, ಚೈತ್ರಾ ಮಚ್ಚಿನ ಬೆಳ್ತಂಗಡಿ, ಕುಶಲ ವಿ. ಮೊಲಿ ಮೂಡುಬಿದಿರೆ, ಕೌಶಿಕ್‌ ಉಳ್ಳಂಜೆ ಕಟೀಲು, ಜಯಶ್ರೀ ಯು. ಕೋಟೇಶ್ವರ, ಬೀನಾ ಫೆರ್ನಾಂಡಿಸ್‌ ಮಂಗಳೂರು, ಅಣ್ಣಪ್ಪ ನಾಯಕ್‌ ಹೆಬ್ರಿ, ಬಿ. ಅಶೋಕ್‌ ಶೆಟ್ಟಿ ಬೆಂಗಳೂರು, ತನುಶ್ರೀ ಕೆ.ವಿ. ಕೊಳ್ತಿಗೆ ಪುತ್ತೂರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.