Udupi ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ
17 ಸಾವಿರ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಪೆನ್ ವಿತರಣೆ
Team Udayavani, Nov 25, 2023, 11:46 PM IST
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಕಲಿಯುತ್ತಿರುವ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಪೆನ್ ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯೋಗ, ಈಜು, ಸಂಗೀತದಂತಹ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಪುಷ್ಪಾನಂದ ಫೌಂಡೇಶನ್ನ ಪ್ರವರ್ತಕರಾಗಿರುವ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಅವರು ಶನಿವಾರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಫೌಂಡೇಶನ್ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿದ್ಯಾರ್ಥಿವೇತನ ವಿತರಿಸಲಾಗಿದೆ ಎಂದರು.
ಮಾದರಿ ಕಾರ್ಯ
ಮುಖ್ಯ ಅತಿಥಿಯಾಗಿದ್ದ ಡಾ| ಜಿ. ಶಂಕರ್ ಸರಕಾರಿ ಮಹಿಳೆಯರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಫೌಂಡೇಶನ್ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಿದ ಶಾಸಕರ ಸಾಮಾಜಿಕ ಬದ್ಧತೆ ಸರ್ವರಿಗೂ ಮಾದರಿ ಎಂದರು.
ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಬಿಇಒ ಅಶೋಕ್ ಕಾಮತ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಕಾಲೇಜಿನ ಪ್ರಾಂಶುಪಾಲ ಡಾ| ಸುಮಾ ಎಸ್., ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಇಂದಿರಾ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಉಪಾಧ್ಯಕ್ಷ ಶೇಕ್ ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.