Udupi: ಬಿಎಸ್ ಎನ್ ಎಲ್ ಕೇಬಲ್ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್ ಕೇಬಲ್ ಪತ್ತೆ!
ಹೆಚ್ಚಿನ ಹಣ ಗಳಿಸುವ ಆಸೆಯಿಂದ ಕಡಿಮೆ ಬೆಲೆಗೆ ಖರೀದಿ
Team Udayavani, Oct 15, 2024, 5:34 PM IST
ಉಡುಪಿ: ಇತ್ತೀಚೆಗೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಸ್ ಎನ್ ಎಲ್ ಕೇಬಲ್ ಗಳು ರಾತ್ರಿ ವೇಳೆ ಕಾಣೆಯಾಗುತ್ತಿರುವ ಬಗ್ಗೆ ದೂರು ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ನಿರೀಕ್ಷಕರು ನಗರ ಠಾಣಾ ವ್ಯಾಪ್ತಿಯ ಗುಜರಿ ಅಂಗಡಿಗಳಿಗೆ ಹೋಗಿ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು. ಅ.14ರಂದು ಪೊಲೀಸ್ ಸಿಬಂದಿ ಅಂಬಲಪಾಡಿಯ ಸರ್ವಿಸ್ ರಸ್ತೆ ಸಮೀಪದ ಅಬ್ದುಲ್ಲಾ ಸ್ಕ್ರ್ಯಾಪ್ ಅಂಗಡಿಗೆ ಭೇಟಿ ನೀಡಿದ್ದು, ಅದರ ಮಾಲೀಕ ಅಬ್ದುಲ್ಲಾ ಬಳಿ ಕಾಪರ್ ಕೇಬಲ್ ತುಂಡುಗಳ ಬಗ್ಗೆ ವಿಚಾರಿಸಿದಾಗ ಸಮರ್ಪಕ ಉತ್ತರ ನೀಡಿರಲಿಲ್ಲವಾಗಿತ್ತು.
ಇದನ್ನೂ ಓದಿ:BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು
ನಂತರ ಕೂಲಂಕಷವಾಗಿ ವಿಚಾರಣೆ ನಡೆಸಿದಾಗ, ಕೆಲವು ದಿನಗಳ ಹಿಂದೆ ಓರ್ವ ವ್ಯಕ್ತಿ ಗುಜರಿ ಸಾಮಾನುಗಳೊಟ್ಟಿಗೆ ಈ ಕಾಪರ್ ಕೇಬಲ್ ಗಳನ್ನು ತಂದು ನೀಡಿದ್ದು, ತಾನು ಹೆಚ್ಚಿನ ಹಣ ಗಳಿಸುವ ಆಸೆಯಿಂದ ಕಡಿಮೆ ಬೆಲೆಗೆ ಖರೀದಿ ಮಾಡಿರುವುದಾಗಿ ತಿಳಿಸಿದ್ದರು. ಕಾಪರ್ ಕೇಬಲ್ ತುಂಡುಗಳನ್ನು ಪರಿಶೀಲಿಸಿದಾಗ ಸುಮಾರು 25 ಕೆಜಿ ತೂಕ ಹೊಂದಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ
Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
Deepavali Bonus: ಚುನಾವಣೆ ಘೋಷಣೆಗೂ ಮುನ್ನ ʼಮಹಾʼ ಸರಕಾರದಿಂದ ನೌಕರರಿಗೆ ಬೋನಸ್!
Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.