![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 27, 2024, 1:16 AM IST
ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಎರಡೂ ಪಕ್ಷದ ಅಭ್ಯರ್ಥಿಗಳು ಶುಕ್ರವಾರ ಬೆಳಗ್ಗೆ ಮತದಾನ ಮಾಡಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿ, ಮತಯಾಚನೆಯ ಕಸರತ್ತು ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಕೊರ್ಗಿ ಶಾಲೆಯಲ್ಲಿ ಬೆಳಗ್ಗೆ 7 ಕ್ಕೆ ಮತ ಚಲಾಯಿಸಿ, ಕುಂದಾಪುರ, ಬಾರಕೂರು, ಉಡುಪಿ, ಪರ್ಕಳ, ಪೆರ್ಡೂರು, ಕಾಪು, ಕಾರ್ಕಳ ಸೇರಿದಂತೆ ಜಿಲ್ಲೆಯ 4 ವಿಧಾನಸಭಾ ವ್ಯಾಪ್ತಿಯಲ್ಲಿ ಸಂಚರಿಸಿದರು. ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕೋಟತಟ್ಟು ಗ್ರಾ.ಪಂ. ಮತಗಟ್ಟೆ ಯಲ್ಲಿ ಮತದಾನ ಮಾಡಿ ವಿವಿಧೆಡೆ ಭೇಟಿ ನೀಡಿದರು. ಗಿಳಿಯಾರು ಮತಗಟ್ಟೆ ಬಳಿ ಕಾರ್ಯ ಕರ್ತರೊಂದಿಗೆ ಕುಳಿತು ಮತ ಯಾಚಿಸಿದರು.
ಸಂಸದನಾಗಿ ನಾನು ಮಾಡಿದ ಅಭಿವೃದ್ಧಿ ಕಾರ್ಯ ಹಾಗೂ ರಾಜ್ಯ ಸರಕಾರದ ಗ್ಯಾರಂಟಿ
ಯೋಜನೆಗಳು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಪರಿಕಲ್ಪನೆಯಡಿ ಮತ ಯಾಚಿಸಿದ್ದೆ. ಮತದಾರರು ಮತ ಚಲಾಯಿಸಿದ್ದು, ನಿಶ್ಚಿತವಾ ಗಿಯೂ ಗೆಲುವು ದಕ್ಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದವರು ಕೆ. ಜಯಪ್ರಕಾಶ್ ಹೆಗ್ಡೆ.
ಕೇಂದ್ರ ಸರಕಾರ 10 ವರ್ಷದಲ್ಲಿ ಕೈಗೊಂಡಿ ರುವ ಅಭಿವೃದ್ಧಿ ಕಾರ್ಯ, ದೇಶದ ಭದ್ರತೆ, ಸುರಕ್ಷತೆಯ ಜತೆಗೆ ವಿಕಸಿತ ಭಾರತದ ನಿರ್ಮಾಣ ಸಂಕಲ್ಪದ ಪ್ರಧಾನಿ ನರೇಂದ್ರ ಮೋದಿ ಯವರ ನಾಯಕತ್ವದ ಜತೆ ಅಭಿವೃದ್ಧಿ ವಿಷಯಗಳನ್ನೇ ಮುಂದಿಟ್ಟುಕೊಂಡು ಮತ ಕೇಳಲಾಗಿದೆ. ಖಂಡಿತವಾಗಿ ಜಯ ಸಿಗಲಿದೆ ಎಂದುವರು ಕೋಟ ಶ್ರೀನಿವಾಸ ಪೂಜಾರಿ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.