Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ
Team Udayavani, Apr 21, 2024, 6:45 AM IST
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಯಾವುದೇ ಅಭ್ಯರ್ಥಿ ಗೆಲ್ಲಬೇಕಾದರೆ ಮಹಿಳಾ ಮತದಾರರ ಮನವೊಲಿಸುವುದು ಮುಖ್ಯ. ಕಾರಣ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರದಲ್ಲೂ ಮಹಿಳೆಯರದ್ದೇ ಪ್ರಾಬಲ್ಯ.
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 15,72,958 ಮತದಾರರಿದ್ದಾರೆ. ಇದರಲ್ಲಿ 38 ತೃತೀಯ ಲಿಂಗಿಯರು ಸೇರಿದ್ದಾರೆ. 8,10,362 ಮಹಿಳೆ ಹಾಗೂ 7,62,558 ಪುರುಷ ಮತದಾರರಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಒಟ್ಟು ಮತದಾರರಲ್ಲಿ ಪುರುಷರಿಗಿಂತ 7,985 ಮಹಿಳಾ ಮತದಾರರು, ಉಡುಪಿಯಲ್ಲಿ 7,718, ಕಾಪುವಿನಲ್ಲಿ 7,890, ಕಾರ್ಕಳದಲ್ಲಿ 7,679, ಶೃಂಗೇರಿಯಲ್ಲಿ 4,335, ಮೂಡಿಗೆರೆಯಲ್ಲಿ 4,949, ಚಿಕ್ಕಮಗಳೂರಿನಲ್ಲಿ 4,408 ಹಾಗೂ ತರೀಕೆರೆಯಲ್ಲಿ 2,840 ಮಹಿಳಾ ಮತದಾರರು ಪುರುಷ ಮತದಾರರಿಗಿಂತ ಹೆಚ್ಚಿದ್ದಾರೆ. ಒಟ್ಟಾರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 47,804 ಮಹಿಳಾ ಮತದಾರರು ಹೆಚ್ಚಿದ್ದಾರೆ. ಇದರಲ್ಲಿ ಉಡುಪಿಯ ನಾಲ್ಕು ವಿಧಾನಸಭಾ ಕ್ಷೇತ್ರದ 8,12,148 ಮತದಾರರಲ್ಲಿ 31,272 ಮಹಿಳಾ ಮತದಾರರು ಪುರುಷ ಮತರಾರರಗಿಂತ ಅಧಿಕವಿದ್ದಾರೆ. ಚಿಕ್ಕಮಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರದ 7,60,810 ಮತದಾರರಲ್ಲಿ 16,532 ಮಹಿಳಾ ಮತದಾರರು ಹೆಚ್ಚಿದ್ದಾರೆ.
ಮಹಿಳಾ ಅಭ್ಯರ್ಥಿಯಿಲ್ಲ
ಕ್ಷೇತ್ರದಲ್ಲಿ 13 ಮಂದಿ ನಾಮಪತ್ರ ಸಲ್ಲಿಸಿದವರಲ್ಲಿ ಓರ್ವರು ಮಹಿಳಾ ಅಭ್ಯರ್ಥಿ ಇದ್ದರು. ಆದರೆ, ನಾಮಪತ್ರ ಪರಿಶೀಲನೆ ವೇಳೆ ಮೂವರದ್ದು ಕ್ರಮಬದ್ಧವಾಗಿಲ್ಲದೇ ಇರುವುದರಿಂದ ತಿರಸ್ಕೃತವಾಗಿತ್ತು. ಅದರಲ್ಲಿ ಮಹಿಳಾ ಅಭ್ಯರ್ಥಿಯ ನಾಮಪತ್ರವು ಸೇರಿತ್ತು. ಸದ್ಯ ರಾಷ್ಟ್ರಿಯ ಪಕ್ಷ ಹಾಗೂ ಎಲ್ಲ ಪಕ್ಷೇತರ ಅಭ್ಯರ್ಥಿಗಳು ಪುರುಷರೇ ಆಗಿದ್ದಾರೆ.
ಮಹಿಳಾ ಮತ ಸೆಳೆಯಲು ಯತ್ನ
ಎರಡೂ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು ತಮ್ಮ ಸರಕಾರಗಳ ಸಾಧನೆ ಮತ್ತು ಜನರಿಗೆ ನೀಡಿರುವ ವಿವಿಧ ಸೌಲಭ್ಯದ ಆಧಾರದಲ್ಲಿ ಮಹಿಳೆಯರಿಗೆ ನೀಡಿರುವ ವಿಶೇಷ ಸವಲತ್ತುಗಳನ್ನು ಕೇಂದ್ರೀಕರಿಸಿ ಮಹಿಳಾ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಆರಂಭಿಸಿದ್ದಾರೆ. ಮಹಿಳೆಯರಿನ್ನು ಸೇರಿಸಿ ವಿಶೇಷ ಪ್ರಚಾರ ಸಭೆ, ಬೂತ್ ಮಟ್ಟದ ಸಭೆ ಇತ್ಯಾದಿಗಳನ್ನು ಮಾಡಲಾಗುತ್ತಿದೆ. ಜತೆಗೆ ಮಹಿಳಾ ಮತದಾರರನ್ನು ತಮ್ಮ ಪಕ್ಷದತ್ತ ಸೆಳೆಯಲು ಬೇಕಾದ ವಿವಿಧ ತಂತ್ರಗಾರಿಕೆಯನ್ನೂ ಪ್ರದರ್ಶಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.