ಎಂಡೋ ಸಂತ್ರಸ್ತರಿಗೆ ಸೌಲಭ್ಯ ಒದಗಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌


Team Udayavani, Jan 20, 2022, 6:55 AM IST

ಎಂಡೋ ಸಂತ್ರಸ್ತರಿಗೆ ಸೌಲಭ್ಯ ಒದಗಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌

ಉಡುಪಿ: ಎಂಡೋಸಲ್ಫಾನ್‌ ಪೀಡಿತರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುವುದರ ಜತೆಗೆ ಸರಕಾರದ ಸೌಲಭ್ಯಗಳನ್ನು ತಲುಪಿಸಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವ ಕಾರ್ಯವನ್ನು ಚಾಚೂ ತಪ್ಪದೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಸೂಚಿಸಿದರು.

ಜಿ.ಪಂ. ಸಭಾಂಗಣದಲ್ಲಿ ಎಂಡೋ ಸಂತ್ರಸ್ತರ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಂಡೋಸಲ್ಫಾನ್‌ನಿಂದ ಕೆಲವರುಶಾಶ್ವತ ಅಂಗವೈಕಲ್ಯ ಹೊಂದಿದರೆ, ಕೆಲವರು ಕ್ಯಾನ್ಸರ್‌, ಅಸ್ತಮಾ, ಚರ್ಮರೋಗ, ಅಪಸ್ಮಾರ ಮೊದಲಾದವುಗಳಿಗೆ ತುತ್ತಾಗು ತ್ತಿದ್ದಾರೆ. ಅವರಿಗೆ ಉಚಿತ ಆರೋಗ್ಯ ಸೌಲಭ್ಯ ಒದಗಿಸುವ ಜತೆಗೆ ಸರಕಾರದ ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ರಾಜ್ಯಮಟ್ಟದ ಮಂಡಳಿಗೆ ಶಿಫಾರಸು
ಎಂಡೋ ಬಾಧಿತ ಪ್ರದೇಶಗಳಲ್ಲಿ ಇತರ ಕಾಯಿಲೆಗಳು ಇದರಿಂದಲೇ ಉಂಟಾಗಿ ದೆಯೇ ಎಂಬ ಬಗ್ಗೆ ಸರ್ವೇ ಮಾಡಿಸುವುದರೊಂದಿಗೆ ಅಂಗವಿಕಲರಿಗೆ ನೀಡುವ ಸೌಲಭ್ಯಗಳನ್ನು ಒದಗಿಸುವ ಕುರಿತು ರಾಜ್ಯಮಟ್ಟದ ಮಂಡಳಿಗೆ ಶಿಫಾರಸು ಮಾಡಲು ಸೂಚನೆ ನೀಡಿದರು.

ಪಾಸ್‌ ನೀಡಲು ಸೂಚನೆ
ಎಂಡೋ ಪೀಡಿತ ಅಂಗವಿಕಲರಿಗೆ ಫಿಸಿಯೋಥೆರಪಿ ನೀಡಲು ಶಾಶ್ವತ ಪುರ್ನವಸತಿ ಕೇಂದ್ರವನ್ನು ತೆರೆಯಬೇಕು. ಗುರುತಿನ ಚೀಟಿ ಹಾಗೂ ಪಾಸ್‌ ತಪ್ಪದೇ ನೀಡಬೇಕು ಎಂದರು.

ಗೇರು ಮರಗಳಿಗೆ ಹಾನಿ
ಜಿಲ್ಲೆಯಲ್ಲಿ ಗೇರು ಬೀಜದ ಮರಗಳಿಗೆ ಹಾನಿ ಉಂಟು ಮಾಡುವ ಕೀಟಗಳ ನಿಯಂತ್ರಣಕ್ಕೆ ಕುಂದಾಪುರ ತಾಲೂಕಿನ 29, ಉಡುಪಿಯ 5 ಹಾಗೂ ಕಾರ್ಕಳದ 9 ಗ್ರಾಮಗಳು ಸೇರಿದಂತೆ 43 ಗ್ರಾಮಗಳಲ್ಲಿ ಎಂಡೋಸಲ್ಫಾನ್‌ ಸಿಂಪಡಿಸಿದ್ದು, ಇದು ಸುತ್ತಲಿನ ಇತರ ಗ್ರಾಮಗಳಿಗೂ ಬಾಧಿಸಿ ಒಟ್ಟು 86 ಗ್ರಾಮದ ಜನರಿಗೆ ತೊಂದರೆ ಉಂಟಾಗಿದೆ ಎಂದರು.

1,522 ಎಂಡೋ ಪೀಡಿತರು
ಜಿಲ್ಲೆಯಲ್ಲಿ 669 ಪುರುಷ, 620 ಮಹಿಳೆ, 353 ಮಕ್ಕಳ ಸಹಿತ ಒಟ್ಟು 1,642 ಎಂಡೋಸಲ್ಫಾನ್‌ ಪೀಡಿತರಿದ್ದು, ಅವರಲ್ಲಿ 120 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 1,522 ಮಂದಿ ಪೀಡಿತರಿದ್ದಾರೆ. ಅವರಲ್ಲಿ 203 ಜನರಿಗೆ ಶೇ. 25ರಷ್ಟು , 351 ಜನರಿಗೆ ಶೇ. 25ರಿಂದ 59ರಷ್ಟು ಹಾಗೂ 968 ಜನರಿಗೆ ಶೇ. 60ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿದ್ದಾರೆ ಎಂದರು.

ಫಿಸಿಯೋಥೆರಪಿ
ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ವೈ. ಮಾತನಾಡಿ, ಶಾಶ್ವತ ಪುರ್ನವಸತಿ ಕೇಂದ್ರ ತೆರೆಯುವವರೆಗೂ ಪೀಡಿತರಿಗೆ ಫಿಸಿಯೋಥೆರಪಿಯನ್ನು ಅಂಗವಿಕಲ ಇಲಾಖೆ ಮತ್ತು ಎನ್‌ಜಿಒಗಳ ಸಹಯೋಗ ದೊಂದಿಗೆ ನೀಡಬೇಕು. ಚಿಕಿತ್ಸೆಗಾಗಿ ಬರುವ ಎಂಡೋಸಲ್ಪಾನ್‌ ಪೀಡಿತರಿಗೆ ಔಷಧ ನೀಡಲು ಆದ್ಯತೆ ಮೇಲೆ ಖರೀದಿ ಮಾಡಿ ಉಚಿತವಾಗಿ ವಿತರಿಸಬೇಕು ಎಂದರು.

ಸವಲತ್ತು ಒದಗಿಸಿ
ಸಭೆಯಲ್ಲಿ ವಿವಿಧ ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿ, ವಿವಿಧ ಬೇಡಿಕೆಗಳನ್ನು ಸಮಿತಿಯ ಮುಂದೆ ತಂದರು. ಬಾಧಿತ ಪ್ರದೇಶದಲ್ಲಿ ಜನಿಸಿದ ಹೆಣ್ಣು ಮಕ್ಕಳು ಮದುವೆಯಾಗಿ ಇತರ ಪ್ರದೇಶಗಳಿಗೆ ಹೋಗಿದ್ದು, ಅವರಿಗೆ ಜನಿಸಿದ ಮಕ್ಕಳಿಗೂ ಎಂಡೋಸಲ್ಫಾನ್‌ ದುಷ್ಪರಿಣಾಮ ಬೀರಿದೆ. ಅವರಿಗೂ ಸವಲತ್ತುಗಳನ್ನು ಒದಗಿಸಬೇಕು ಎಂದರು.

ಕುಂದಾಪುರ ಎ.ಸಿ. ರಾಜು, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ
ವೆಬ್‌ಸೈಟ್‌
ಸರಕಾರದ ಸೌಲಭ್ಯ, ಆದೇಶಗಳ ಮತ್ತಿತರ ಕಾರ್ಯಕ್ರಮಗಳ ಕುರಿತ ಮಾಹಿತಿ ಗಳನ್ನು ಪೀಡಿತರಿಗೆ ತಲುಪಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲಾ ಮಟ್ಟದ ವೆಬ್‌ಸೈಟ್‌ ತೆರೆಯಬೇಕು. ಇದರಲ್ಲಿಯೇ ಅವರ ಕುಂದು-ಕೊರತೆ ಅರ್ಜಿಗಳನ್ನು ಸಲ್ಲಿಸಲು ಅನುವು ಮಾಡಿಕೊಟ್ಟು, ನಿಯಮಾನು ಸಾರವಾಗಿ ಸ್ಪಂದಿಸಬೇಕು ಎಂದು ಡಿ.ಸಿ. ಕೂರ್ಮಾ ರಾವ್‌ ಹೇಳಿದರು.

3 ತಿಂಗಳಿಗೊಮ್ಮೆ ಸಭೆ
ತಾಲೂಕು ಮಟ್ಟದಲ್ಲಿ ಸಂತ್ರಸ್ತರಿಗೆ ಸೌಲಭ್ಯ ನೀಡುವ, ಕುಂದುಕೊರತೆ ಗಳನ್ನು ಚರ್ಚಿಸುವ ಸಭೆಯನ್ನು ಪ್ರತೀ 3 ತಿಂಗಳಿಗೊಮ್ಮೆ ಕರೆಯಬೇಕು. ಸಾಧ್ಯ ವಾದಷ್ಟು ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಿದರು.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.