![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 11, 2020, 10:33 AM IST
ಕೊಲ್ಲೂರು: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಎ. 10ರಂದು ಸಂಜೆ ಕೊಲ್ಲೂರು ಗಡಿ ಭಾಗದ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಇಲ್ಲಿನ ಹೆಗ್ಡೆಹಕ್ಲು ಬಳಿ ನಿಯೋಜಿಸಲಾಗಿರುವ ಪೊಲೀಸ್ ವ್ಯವಸ್ಥೆ , ಚೆಕ್ ಪೋಸ್ಟ್ ನಿರ್ವಹಣೆ ಅಲ್ಲದೆ ಶಿವಮೊಗ್ಗ ಜಿಲ್ಲೆಯಿಂದ ಈ ಭಾಗಕ್ಕೆ ಆಗಮಿಸುವ ವಾಹನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರಲ್ಲದೆ ಯಾವುದೇ ಕಾರಣಕ್ಕೂ ಇತರೆ ವಾಹನ ಅಥವಾ ವ್ಯಕ್ತಿಗಳು ಒಳಪ್ರವೇಶಿಸದಂತೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಕೊಲ್ಲೂರು ಠಾಣಾಧಿಕಾರಿ ಮಹಾದೇವ ಭೋಂಸ್ಲೆ ಅವರಿಗೆ ಸೂಚಿಸಿದರು. ಅನ್ಯ ಜಿಲ್ಲೆಗಳಿಂದ ಜನರು ನುಸುಳದಂತೆ ನಿಗಾ ವಹಿಸುವಂತೆ ಎಚ್ಚರಿಸಿದರು. ನಿಗದಿತ ಅವಧಿ ಮೀರಿ ಸ್ಥಳೀಯ ನಿವಾಸಿಗಳು ಸಂಚರಿಸುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲು ಆದೇಶಿಸಿದರು. ಈ ವೇಳೆ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ಉಪಸ್ಥಿತರಿದ್ದು, ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.
ಕೊಲ್ಲೂರು ಕ್ಷೇತ್ರ ಭೇಟಿ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಅಲ್ಲಿನ ದೈನಂದಿನ ಪೂಜಾ ಕ್ರಮ ಹಾಗೂ ಭಕ್ತರಿಗೆ ವಿಧಿಸಲಾಗಿರುವ ನಿರ್ಬಂಧಗಳ ಬಗ್ಗೆ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತಗುಂಡಿ ಹಾಗೂ ಉಪ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಅವರೊಡನೆ ಸಮಾಲೋಚನೆ ನಡೆಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.