Udupi: ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೊಟೇಲ್ ಉದ್ಘಾಟನೆ
Team Udayavani, Oct 9, 2024, 5:48 PM IST
ಉಡುಪಿ: ಉಡುಪಿಯ ಹೃದಯಭಾಗ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಬುಧವಾರ(ಅ.09) ರಂದು ಶುಭಾರಂಭಗೊಂಡಿತು.
ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಜಂಟಿಯಾಗಿ ನೂತನ ಹೋಟೆಲ್ ಅನ್ನು ಉದ್ಘಾಟಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಪೇಜಾವರ ಶ್ರೀಗಳು, ಶ್ರೀಕೃಷ್ಣನ ಉಡುಪಿಗೆ ಜಯರಾಮ್ ಬನಾನ್ ಅವರು ಈ ಹೋಟೆಲ್ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.
ಶ್ರೀಕೃಷ್ಣನ ಅನುಗ್ರಹದಿಂದ ನೂತನ ಹೋಟೆಲ್ ಯಶಸ್ವಿಯಾಗಲಿ ಎಂದು ಹಾರೈಸಿದರು. ಸುಬ್ರಹ್ಮಣ್ಯ ಶ್ರೀಗಳು, ಉಡುಪಿ ಆಹಾರೋದ್ಯಮ ಮತ್ತು ಆಧಾರೋಪಚಾರಕ್ಕೆ ಪ್ರಸಿದ್ದವಾಗಿದೆ. ಆದ್ದರಿಂದ ಇಂತಹ ಹೋಟೆಲ್ ಉಡುಪಿಗೆ ಅಗತ್ಯವಿತ್ತು. ಬಹಳ ಪರಿಶ್ರಮಿಯಾಗಿರುವ ಜಯರಾಮ್ ಬನಾನ್ ಅವರು, ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದು, ತಮ್ಮ ಸಮರ್ಥ ಆಡಳಿತದಿಂದ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಇದಕ್ಕೆ ಮೊದಲು ಉಡುಪಿಯ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ಅವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಯು.ಪೈ, ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ಇದರ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಿಇಓ ವಿನೋದ್ ಕುಮಾರ್,ಶಾಸಕ ಯಶ್ ಪಾಲ್ ಸುವರ್ಣ, ಸುನೀಲ್ ಕುಮಾರ್, ಬಿಜೆಪಿ ಮುಖಂಡ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಗದೀಶ್ ಅಧಿಕಾರಿ, ಓಶಿಯನ್ ಪರ್ಲ್ ಸಂಸ್ಥೆಯ ಸ್ಥಾಪಕ ಜಯರಾಮ್ ಬನಾನ್, ಮ್ಯಾನೇಜಿಂಗ್ ಡೈರೆಕ್ಟರ್ ರೋಷನ್ ಬನಾನ್, ಉಪಾಧ್ಯಕ್ಷರಾದ ಗಿರೀಶ್ ಮತ್ತು ಶಿವಕುಮಾರ್, ಪ್ರಧಾನ ವ್ಯವಸ್ಥಾಪಕ ಪ್ರಶಾಂತ್ ಆಚಾರ್ಯ, ಟೈಮ್ಸ್ ಸ್ಕ್ವೇರ್ ಮಾಲ್ ನ ಮಾಲೀಕ ಡಾ.ಜೆರ್ರಿ ವಿನ್ಸಂಟ್ ಡಯಾಸ್, ಮಾಂಡವಿ ಬಿಲ್ಡರ್ಸ್ ನ ಗ್ಲೆನ್ ಡಯಾಸ್, ಜೇಸನ್ ಡಯಾಸ್, ಉದ್ಯಮಿಗಳಾದ ಸಾಯಿರಾಧ ಮನೋಹರ್ ಶೆಟ್ಟಿ, ಇಂದ್ರಾಳಿ ಜಯಕರ್ ಶೆಟ್ಟಿ, ಇಬ್ರಾಹಿಂ ಕೋಡಿ, ಮಾಜಿ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಾರಿನ ಬ್ರೇಕ್ ಫೇಲ್ ಆಗಿ ಅವಘಡ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ
Geethanjali Silks: ಪುರುಷರ ಬಟ್ಟೆಗಳ ವಿಶಾಲ ವಿಭಾಗ ಗ್ರಾಹಕರಿಂದಲೇ ಉದ್ಘಾಟನೆ
Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ
Udupi: ಗಮನ ಬೆರೆಡೆ ಸೆಳೆದು ಲಕ್ಷಾಂತರ ರೂ. ವಂಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮ*ಹತ್ಯೆ
BBK11: ಬಿಗ್ ಬಾಸ್ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್
Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ
Bhairathi Ranagal: ಕಾವಲಿಗನಾದ ಭೈರತಿ ರಣಗಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.