Udupi: ಶ್ರೀಕೃಷ್ಣ ಅವತಾರವೇ ಆಕರ್ಷಕ: ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು

ಕೃಷ್ಣನ ಮೃಣ್ಮಯ ಮೂರ್ತಿಯ ಮೆರವಣಿಗೆಗೆ ಚಾಲನೆ

Team Udayavani, Aug 27, 2024, 6:45 AM IST

Uduapi

ಉಡುಪಿ: ವಿಶ್ವದ ಒಳಿತಿಗಾಗಿ ಆಗಿರುವ ಶ್ರೀ ಕೃಷ್ಣ ಅವತಾರವೇ ಆಕರ್ಷಕ. ಶ್ರೀ ಕೃಷ್ಣನ ನಡೆ, ನುಡಿ ಸದಾ ಸ್ಫೂರ್ತಿ ಹಾಗೂ ಜೀವನ ಉತ್ಸಾಹ ತುಂಬುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅನುಗ್ರಹಿಸಿದರು.

ಶ್ರೀ ಕೃಷ್ಣಮಠ, ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಾಸೋತ್ಸವ, ಸಪ್ತೋತ್ಸವದ ಪ್ರಯುಕ್ತ ಸೋಮವಾರ ಶ್ರೀ ಕೃಷ್ಣಾಷ್ಟಮಿಯಂದು ರಥಬೀದಿಯಲ್ಲಿ ಮೃಣ್ಮಯ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿ, ಅನಂತರ ರಥಬೀದಿ ಸುತ್ತಿ ರಾಜಾಂಗಣಕ್ಕೆ ಆಗಮಿಸಿ, ಅಲ್ಲಿ ಸಭಾ ಕಾರ್ಯಕ್ರಮವನ್ನು “ವಸುದೇವ ಶ್ರೀ ಕೃಷ್ಣನನ್ನು ಬುಟ್ಟಿಯಲ್ಲಿ ಹೊತ್ತು ಹೋಗುವಾಗ ಶೇಷ ಶಯನ ಅನುಗ್ರಹಿಸುತ್ತಿರುವ ಪ್ರತಿಕೃತಿ ಅನಾವರಣಗೊಳಿಸಿ ಆಶೀರ್ವಚನ ನೀಡಿದರು.

ಕೃಷ್ಣನ ಅವತಾರವೇ ಭಕ್ತ ಸ್ನೇಹಿ ಹಾಗೂ ಆಪ್ಯಾಯ ಮಾನವಾದುದು. ಕೃಷ್ಣೋಪಾಸನೆಯಿಂದ ತತ್‌ಕ್ಷಣ ಭಕ್ತರಿಗೆ ಅನುಗ್ರಹಿಸುತ್ತಾನೆ. ಶ್ರೀಕೃಷ್ಣ ಹೇಗೆ ಆಕರ್ಷಕನೋ ಹಾಗೆಯೇ ಭಕ್ತರ ಭಕ್ತಿಗೂ ಆಕರ್ಷಿತನಾಗುತ್ತಾನೆ. ಕೃಷ್ಣಾವತಾರ ಕಲಿಯುಗದ ಭಕ್ತರಿಗಾಗಿ ವಿನ್ಯಾಸ ಮಾಡಿದ ಅವತಾರ ಎಂದು ಅನುಗ್ರಹಿಸಿದರು.

ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಅನುಗ್ರಹಿಸಿ, ಸ್ತ್ರೀಯರನ್ನು ಎಲ್ಲಿ ಪೂಜಿಸುತ್ತಾರೋ ಅಲ್ಲಿ ದೇವರು ಇರುತ್ತಾರೆ. ಧರ್ಮ ದ್ರೋಹಿಗಳ ನಾಶಕ್ಕೆ ಭಗವಂತನ ಅವತಾರ ಎನ್ನುತ್ತಾರೆ. ಧರ್ಮ ದ್ರೋಹಿಗಳ ನಾಶಕ್ಕೆ ಭಗವಂತ ಅವತ ರಿಸ ಬೇಕೆಂದಿಲ್ಲ. ತನ್ನ ಇಚ್ಛೆ ಮಾತ್ರ ದಿಂದಲೇ ಸಂಹಾರ ಮಾಡಬಹುದು. ನಮ್ಮಲ್ಲಿರುವ ದೋಷ ಗಳನ್ನು ಕಳೆಯುವವನೇ ಶ್ರೀ ಕೃಷ್ಣ ಎಂದರು.

ಪ್ರಸಾದ್‌ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣ ಪ್ರಸಾದ್‌ ಕೂಡ್ಲು, ದುಬಾೖಯ ಸುಧಾಕರ ಪೇಜಾವರ, ಉದ್ಯಮಿಗಳಾದ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ, ಪ್ರೀತಂ ಕುಮಾರ್‌ ದಂಪತಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಶ್ರೀಪಾದರ ಅನುಗ್ರಹಿಸಿದರು.

ವಿ. ಪರಿಷತ್‌ ಸದಸ್ಯ ಬೋಜೇಗೌಡ, ಸು. ಕೋ. ಹಿರಿಯ ವಕೀಲ ಬಾಲರಾಜ್‌, ಗುಜರಾತ್‌ನ ಮಾಜಿ ಸಂಸದ ಸಾಗರ್‌ ರಾಯ್ಕರ್‌, ಬೆಂಗ ಳೂರಿನ ಆರೆಸ್ಸೆಸ್‌ನ ಹಿರಿಯರಾದ ಮಿಲಿಂದ್‌ ಗೋಖಲೆ, ಮುಂಬಯಿ ಉದ್ಯಮಿ ಗುರುಪ್ರಸಾದ್‌, ಅರುಣ್‌ ಕುಮಾರ್‌ ಉಪಸ್ಥಿತರಿದ್ದರು. ಶ್ರೀಮಠದ ರಮೇಶ್‌ ಭಟ್‌ ಸ್ವಾಗತಿಸಿ, ಡಾ| ಗೋಪಾಲಾಚಾರ್ಯ ನಿರೂಪಿಸಿದರು.

ಭಂಡತನದ ಚರ್ಚೆ ಕೇಳಲಷ್ಟೇ ಚಂದ, ಅನುಷ್ಠಾನ ಅಸಾಧ್ಯ
ಕಿರುತೆರೆ ನಿರ್ದೇಶಕ ಎಸ್‌.ಎನ್‌. ಸೇತುರಾಮ್‌ ಅವರು ಕೃಷ್ಣನ ವ್ಯಕ್ತಿತ್ವದ ಪ್ರಸ್ತುತತೆ ಬಗ್ಗೆ ಉಪನ್ಯಾಸ ನೀಡಿ, ಹಿಂದೂ ಧರ್ಮ, ದೇವತೆಗಳ ವಿಷಯದಲ್ಲಿ ಭಂಡತನದ ಚರ್ಚೆ ಕೇಳಲು ಚೆನ್ನಾಗಿರುತ್ತದೆ. ಅದರಂತೆ ಬದುಕಲು ಕಷ್ಟ. ಅದು ಕೇವಲ ಮನೋರಂಜನೆ ಅಷ್ಟೆ. ಭಾರತದ ಸಂಪತ್ತನ್ನು ಹುಡುಕಿ ವಿದೇಶಿಗರು ಇಲ್ಲಿಗೆ ಬಂದಿದ್ದರು. ನಮ್ಮಲ್ಲಿ ಎಲ್ಲ ಸಂಪತ್ತು ಇದ್ದುದರಿಂದ ನಾವು ಎಲ್ಲಿಗೂ ಹೋಗಿಲ್ಲ. ಆದರೆ ಇಲ್ಲಿಗೆ ಬಂದರು ನಮ್ಮಲ್ಲಿ ನಾವೇ ಹೊರಗಿನವರು ಎಂಬ ಭಾವ ತುಂಬಿ ಹೋಗಿದ್ದರಿಂದ ಪೂರ್ವಜರ ರೇಖೆಯನ್ನು ಮರೆತಿದ್ದೇವೆ ಎಂದು ವಿಶ್ಲೇಷಿಸಿದರು.

ಟಾಪ್ ನ್ಯೂಸ್

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

Alanda

Alanda: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನಿಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

coart ಚೆಕ್‌ ಅಮಾನ್ಯ ಪ್ರಕರಣ: ಆರೋಪಿ ಖುಲಾಸೆ

Coart: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

indian-flag

South Asia ಆ್ಯತ್ಲೆಟಿಕ್ಸ್‌ : ರಿಲೇಯಲ್ಲಿ ಭಾರತಕ್ಕೆ ಚಿನ್ನ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.