Udupi: ಕೊನೆಗೂ ಮಗನನ್ನು ಸೇರಿದ ತಾಯಿ
Team Udayavani, Oct 2, 2024, 1:17 AM IST
ಉಡುಪಿ: ಮಾನಸಿಕ ಅಸ್ವಸ್ಥರಾಗಿದ್ದ ಮಹಿಳೆಯನ್ನು ಇಪ್ಪತ್ತು ದಿನಗಳ ಹಿಂದೆ ಸಮಾಜ ಸೇವಕ ವಿಶು ಶೆಟ್ಟಿಯವರು ರಕ್ಷಿಸಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಖೀ ಕೇಂದ್ರದ ನೆರವಿನಿಂದ ಮಗನಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳೆ ಕಮಲಮ್ಮ (50) ಮೂಲತಃ ಹುಬ್ಬಳ್ಳಿಯವರಾಗಿದ್ದು ಕೆಲವು ದಿನ ಗಳಿಂದ ನಗರದಲ್ಲಿ ಸುತ್ತಾಡಿಕೊಂಡು ಅಸಹಾಯಕರಾಗಿ ಮಾನಸಿಕ ಖಿನ್ನತೆ ಗೊಳಗಾಗಿದ್ದರು. ರಾತ್ರಿ ಹೊತ್ತು ರಸ್ತೆ ಬದಿ ದುಃಖದಿಂದ ಇದ್ದ ಇವರನ್ನು ವಿಶು ಶೆಟ್ಟಿಯವರು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು. 15 ದಿನಗಳ ಚಿಕಿತ್ಸೆಗೆ ಸ್ಪಂದಿಸಿದ ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಕುಟುಂಬಿಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಸಖಿ ಕೇಂದ್ರಕ್ಕೆ ದಾಖಲಿಸಿದ್ದರು. ಮಹಿಳೆ ನೀಡಿದ ಮಾಹಿತಿ ಮೇರೆಗೆ ಮನೆಯವರ ಪತ್ತೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಬಿತ್ತರಿಸಲಾಗಿತ್ತು. ಸಖೀ ಕೇಂದ್ರದ ಸಿಬಂದಿ ಮಹಿಳೆ ನೀಡಿದ ಮಾಹಿತಿಯ ಅನುಸಾರ ಹುಬ್ಬಳ್ಳಿ- ಧಾರವಾಡದಲ್ಲಿ ಮನೆಯವರ ಪತ್ತೆಗಾಗಿ ಪ್ರಯತ್ನಿಸಿ ಕುಟುಂಬಿಕರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದರು.
ಮಹಿಳೆಯ ಮಗ ಹುಬ್ಬಳ್ಳಿಯಿಂದ ಉಡುಪಿಗೆ ಆಗಮಿಸಿ ಮಹಿಳೆಯನ್ನು ವಶಕ್ಕೆ ಪಡೆದು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಮಹಿಳೆಯ ರಕ್ಷಣ ಕಾರ್ಯದಲ್ಲಿ ಮಹಿಳಾ ಪೊಲೀಸ್ ಠಾಣೆಯ ಸಿಬಂದಿ, ಜಯಶ್ರೀ ಉದ್ಯಾವರ, ಬಾಳಿಗಾ ಆಸ್ಪತ್ರೆ ವೈದ್ಯರು, ಸಿಬಂದಿ, ಸಖಿ ಕೇಂದ್ರದ ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.