Udupi: ಕಳವು ಪ್ರಕರಣದ ಆರೋಪಿ ಬಂಧನ
Team Udayavani, Aug 26, 2024, 8:56 PM IST
ಉಡುಪಿ: ಕರಾವಳಿ ಬೈಪಾಸ್ ಬಳಿ ನಡೆದ ಕಳ್ಳತನ ಪ್ರಕರಣದ ಆರೋಪಿ ಬಾಗಲಕೋಟೆಯ ಯಲ್ಲಪ್ಪ ಮಲ್ಲಪ್ಪಬೋವಿ(37)ಯನ್ನು ಪೊಲೀಸರು ಬಂಧಿಸಿದ್ದಾರೆ.
ಆ.7ರಂದು ಕರಾವಳಿ ಬೈಪಾಸ್ ಬಳಿ ಇರುವ ಈಜಿ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯಲ್ಲಿ ಚಾಲಕರಾಗಿರುವ ಯಲ್ಲಪ್ಪ ಬೋವಿರವರು ಸಂಸ್ಥೆಯ ಮಾಲಕತ್ವದ ಬಜಾಜ್ ಗೂಡ್ಸ್ನಲ್ಲಿ ಅವರದೇ ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ವಿವಿಧ ಬಗೆಯ ಸಾಮಗ್ರಿಗಳನ್ನು ತುಂಬಿಕೊಂಡು ಉಡುಪಿ ಶಾಖೆಗೆ ತಂದು ಆ.4ರಂದು ನಿಲ್ಲಿಸಿದ್ದರು.
ಆ.5ರಂದು ಬೆಳಗ್ಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಶ್ರೇಯಸ್ ಅವರು ಗೂಡ್ಸ್ ರಿಕ್ಷಾದಲ್ಲಿದ್ದ ವಸ್ತುಗಳನ್ನು ತೆಗೆಯುತ್ತಿದ್ದ ಸಮಯ ಅದರಲ್ಲಿದ್ದ 12ಬಗೆಯ ವಸ್ತುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ 6 ಲ.ರೂ.ಗಳಾಗಿದ್ದವು. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ಮತ್ತು ಸೊತ್ತು ಪತ್ತೆಯ ಬಗ್ಗೆ ಉಡುಪಿ ಠಾಣೆಯ ಪಿಎಸ್ಐ ಈರಣ್ಣ ಶಿರಗುಂಪಿ, ಸಿಬಂದಿಗಳಾದ ಆನಂದ, ಶಿವಕುಮಾರ್ ಅವರನ್ನು ವಿಶೇಷ ಕರ್ತವ್ಯದಲ್ಲಿ ನೇಮಿಸಲಾಗಿದ್ದು, ಆರೋಪಿಯನ್ನು ಹಾಗೂ ಕಳವು ಮಾಡಿ ಉಡುಪಿ ಆದಿ ಉಡುಪಿ ಎಪಿಎಂಸಿ ಗೋದಾಮು ಕಟ್ಟಡಗಳ ಸಂಧಿನಲ್ಲಿ ಬಚ್ಚಿಟ್ಟಿದ್ದ 6 ಲ.ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹಿರಿಯಡ್ಕದ ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.