Udupi: ಖಜಾನೆ ಖಾಲಿಯಾಗಿಲ್ಲ ,ಬಹಿರಂಗ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ


Team Udayavani, Mar 14, 2024, 1:37 AM IST

Udupi: ಖಜಾನೆ ಖಾಲಿಯಾಗಿಲ್ಲ ,ಬಹಿರಂಗ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿಲ್ಲ. ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ಜಿಲ್ಲಾಡಳಿತ, ಜಿ.ಪಂ. ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ಬುಧವಾರ ಹಮ್ಮಿ ಕೊಂಡಿದ್ದ ಗ್ಯಾರಂಟಿ ಯೋಜನೆಯ ಫ‌ಲಾನುಭವಿಗಳ ಸಮಾವೇಶ, ಜಿಲ್ಲೆಯ ವಿವಿಧ ಕಾಮ ಗಾರಿಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಬಡವರ ಕಲ್ಯಾಣ ಮಾಡು ತ್ತಿದೆ. ಇದರಿಂದ ಸರಕಾರದ ಬೊಕ್ಕಸ ಬರಿದಾಗಿಲ್ಲ ಎಂದರಲ್ಲದೇ, ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ಎಲ್ಲರಿಗೂ ತಲುಪಿಸಲು ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಎಲ್ಲಿ ಹಾಳಾಗಿದೆ? ಅದು ಸುಳ್ಳು. ನಾವು ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಇಟ್ಟಿದ್ದೇವೆ ಎಂದರು.

ಅಚ್ಛೇದಿನ್‌ ಎಲ್ಲಿದೆ?
ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50,257 ಕೋಟಿ ರೂ. ಮಾತ್ರ. ಪ್ರಧಾನಿ ಮೋದಿ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಲ್ಲ. ಇಂತಹ ಸಂಸದರನ್ನು ಇಲ್ಲಿನ ಜನ ಮರು ಆಯ್ಕೆ ಮಾಡಬೇಕೆ? ಅಚ್ಛೇ ದಿನ್‌ ಆಯೆಂಗೆ, ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್‌ ಸರಕಾರ ನೀಡಿದ ಭರವ ಸೆಗಳನ್ನು ಈಡೇರಿಸಿದೆ. ಕಳೆದ ಬಾರಿ ನಾವು ಶೇ. 98ರಷ್ಟು ಭರವಸೆಗಳನ್ನು ಈಡೇರಿಸಿದ್ದರೆ, ಬಿಜೆಪಿಯವರು ಕೇವಲ ಶೇ. 10ರಷ್ಟು ಮಾತ್ರ ಈಡೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ ಎಂದು ಆಪಾದಿಸಿದರು.

ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ ಅಂದೇ ರಾಜ್ಯದಲ್ಲಿ ನಾನು ಆಂಜ ನೇಯ ದೇಗುಲ ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋ.ರೂ. ಅನುದಾನವನ್ನು ಮೀಸಲಿಟ್ಟಿದ್ದೇವೆ. ಆದರೂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಅಧಿಕಾ ರಕ್ಕೆ ಬರುತ್ತಿರುವ ಬಿಜೆಪಿಗೆ ಗೋಬ್ಯಾಕ್‌ ಎಂದು ಹೇಳಬೇಕು. ಹಾಗೆ ಹೇಳಲು ಇದು ಸಕಾಲ ಎಂದು ಜನರಿಗೆ ಕರೆ ನೀಡಿದರು.

ಅಭಿವೃದ್ಧಿಗೆ ಬದ್ಧ: ವೈದ್ಯ
ಕೇಂದ್ರ ಸರಕಾರ ಮೀನು ಗಾರರ ಡೀಸೆಲ್‌ ಸಬ್ಸಿಡಿ ನಿಲ್ಲಿಸಿದೆ. ಆದರೆ ನಾವು ನಾಡದೋಣಿಗಳಿಗೆ ಸೀಮೆ ಎಣ್ಣೆ ನೀಡುತ್ತಿದ್ದು, ಬಜೆಟ್‌ ನಲ್ಲಿ ಮೀನುಗಾರಿಕೆಗೆ 3 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಕರಾವಳಿ ಜಿಲ್ಲೆಗಳ ಮೇಲೆ ಕಾಳಜಿಯಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೈಗೊಳ್ಳುವುದಾಗಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.