Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

ಇಂದು ಲಲಿತಾ ಪಂಚಮಿ ಪ್ರಯುಕ್ತ "ಶತವೀಣಾವಲ್ಲರಿ' ಕಾರ್ಯಕ್ರಮ

Team Udayavani, Oct 7, 2024, 1:28 AM IST

DANDIA-DANCE

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರವಿವಾರ ರಾತ್ರಿ ಸಾರ್ವಜನಿಕರಿಗಾಗಿ ದಾಂಡಿಯಾ ಮತ್ತು ಗರ್ಭಾ ನೃತ್ಯ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರದ ರಥಬೀದಿಯಲ್ಲಿ ಸುಮಧುರ ಸಂಗೀತದೊಂದಿಗೆ ನಡೆದ ಈ ಕಾರ್ಯಕ್ರಮ ಭಾರೀ ಜನಾಕರ್ಷಣೆಗೆ ಕಾರಣವಾಯಿತು. ಸಾವಿರಾರು ಮಂದಿ ಮಹಿಳೆಯರು, ಪುರುಷರು ಮತ್ತು ಮಕ್ಕಳೆಲ್ಲರೂ ಗರ್ಭಾ ಮತ್ತು ದಾಂಡಿಯಾಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಇಂದು ಶತವೀಣಾ ವಲ್ಲರಿ ಕಾರ್ಯಕ್ರಮ
ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಅ. 7ರಂದು ಲಲಿತಾ ಪಂಚಮಿ ಸಂಭ್ರಮ ನಡೆಯಲಿದೆ. ಆ ಪ್ರಯುಕ್ತ ಮಧ್ಯಾಹ್ನ 2ರಿಂದ ಪುರುಷರು ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಸಂಜೆ 4ರಿಂದ ಮಣಿಪಾಲದ ವಿ| ಪವನಾ ಬಿ. ಆಚಾರ್‌ ಇವರ ನಿರ್ದೇಶನದಲ್ಲಿ ಏಕಕಾಲದಲ್ಲಿ ನೂರ ಒಂದು ವೀಣಾ ವಾದಕರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಕಾರ್ಯಕ್ರಮ ನಡೆಯಲಿದೆ.

ಲಲಿತಾ ಪಂಚಮಿ ವಿಶೇಷ
ಲಲಿತಾ ಪಂಚಮಿ ಪ್ರಯುಕ್ತ ಬೆಳಗ್ಗೆ ಉದಯ ಪೂಜೆ, ನಿತ್ಯ ಚಂಡಿಕಾ ಹೋಮ, ಭಜನೆ, ಮಧ್ಯಾಹ್ನ 12 ನವದುರ್ಗೆಯರಿಗೆ ಮಹಾಮಂಗಳಾರತಿ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ರಶ್ಮೀ ಪರ್ವದಿ ಅವರಿಂದ ಧಾರ್ಮಿಕ ಉಪನ್ಯಾಸ, 5.45 ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.

ಭಾರೀ ಜನಸಾಗರ
ಉಚ್ಚಿಲ ದಸರಾಕ್ಕೆ ರವಿವಾರ ಭಾರೀ ಜನಸಾಗರ ಹರಿದು ಬಂದಿದೆ. ಬೆಳಗ್ಗಿನಿಂದಲೇ ನಾಡಿನಾದ್ಯಂತದಿಂದ ಲಕ್ಷಾಂತರ ಮಂದಿ ಉಚ್ಚಿಲಕ್ಕೆ ಬಂದಿದ್ದು ಸಂಜೆಯ ವೇಳೆಗೆ ದೇವಸ್ಥಾನದ ಸುತ್ತಮುತ್ತಲಿನಲ್ಲಿ ಕಾಲಿಡಲೂ ಅವಕಾಶವಿಲ್ಲದಂತೆ ಜನಸಂದಣಿಯುಂಟಾಯಿತು. ಜನರನ್ನು ಮತ್ತು ವಾಹನಗಳನ್ನು ನಿಯಂತ್ರಿಸಲು ಪೋಲೀಸರು ಮತ್ತು ಸ್ವಯಂ ಸೇವಕರು ನಿರಂತರ ಶ್ರಮ ವಹಿಸಿದರು.

ವೈಶಿಷ್ಟಪೂರ್ಣ ವಿವಿಧ ನೃತ್ಯ ಸೇವೆಗೆ ಒತ್ತು
ಶಾರದೆ ಕಲಾಪ್ರಿಯೆಯಾಗಿದ್ದು ಶಾರದೆಯನ್ನು ಒಲಿಸಿಕೊಳ್ಳುವುದಕ್ಕಾಗಿ ಉಚ್ಚಿಲ ದಸರಾದಲ್ಲಿ ಗ್ರಾಮೀಣ ಮಹಿಳೆಯರು ಮತ್ತು ಸ್ಥಳೀಯ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದ ಕಲಾವಿದರನ್ನೊಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೋಡಿಸಲಾಗಿದೆ. ನೃತ್ಯ ಪ್ರಿಯೆ ಶಾರದೆಯ ಮುಂಭಾಗದಲ್ಲಿ ದಾಂಡಿಯಾ ನೃತ್ಯ ಕಾರ್ಯಕ್ರಮವೂ ನಡೆದಿದ್ದು ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ವೈಶಿಷ್ಟಪೂರ್ಣವಾದ ವಿವಿಧ ನೃತ್ಯ ಸೇವೆಗೆ ಒತ್ತು ನೀಡಲಾಗುವುದು ಎಂದು ಡಾ| ಜಿ. ಶಂಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.