Udupi: ಉಚ್ಚಿಲ: ಮಹಾಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ
ಉಚ್ಚಿಲದಲ್ಲಿ ಹತ್ತು ದಿನಗಳ ಅವಧಿಯಲ್ಲಿ ಮಹಾಚಂಡಿಕಾಯಾಗ ಸಹಿತ 150ಕ್ಕೂ ಅಧಿಕ ಚಂಡಿಕಾಯಾಗ
Team Udayavani, Oct 13, 2024, 3:11 AM IST
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶನಿವಾರ ಮಹಾಚಂಡಿಕಾಯಾಗ ಮತ್ತು ಮಹಾಅನ್ನಸಂತರ್ಪಣೆ ನೆರವೇರಿತು.
ಕ್ಷೇತ್ರದ ಪ್ರಧಾನ ತಂತ್ರಿ ವೇ| ಮೂ| ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾ ಧ್ಯಾಯರ ನೇತೃತ್ವದಲ್ಲಿ ವೈದಿಕರ ಪಾಲ್ಗೊಳ್ಳುವಿಕೆಯೊಂದಿಗೆ ಮಹಾಚಂಡಿಕಾ ಯಾಗದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಐವತ್ತು ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದು, ಉದ್ಯಮಿ ಭುವನೇಂದ್ರ ಕಿದಿಯೂರು ಸೇವಾರ್ಥವಾಗಿ ಹಾಲು ಪಾಯಸ ವಿತರಿಸಲಾಯಿತು.
ಸೇವೆಗಳಲ್ಲಿ ದಾಖಲೆ
ನವರಾತ್ರಿ ಮತ್ತು ದಸರಾ ಉತ್ಸವದ ಪ್ರಯುಕ್ತ ಉಚ್ಚಿಲದಲ್ಲಿ ಹತ್ತು ದಿನಗಳ ಅವಧಿಯಲ್ಲಿ ಮಹಾಚಂಡಿಕಾಯಾಗ ಸಹಿತ 150ಕ್ಕೂ ಅಧಿಕ ಚಂಡಿಕಾಯಾಗ ನಡೆದಿದೆ. ಸಾಮೂಹಿಕ ಮಹಾಚಂಡಿಕಾಯಾಗದಲ್ಲಿ ಸಾವಿರಾರು ಮಂದಿ ಸೇವಾರ್ಥಿಗಳಾಗಿ ಪಾಲ್ಗೊಂಡಿದ್ದರು. ಒಂಭತ್ತು ದಿನಗಳ ಸಹಸ್ರ ಕುಂಕುಮಾರ್ಚನೆ ಸೇವೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕುಂಕುಮಾರ್ಚನೆ ಸಮರ್ಪಿಸಲಾಯಿತು. ಈವರೆಗೆ ಮೂರು ಲಕ್ಷಕ್ಕೂ ಅಧಿಕ ಮಂದಿ ಅನ್ನಪ್ರಸಾದ ಮತ್ತು ಸಂಜೆ ಉಪಾಹಾರ ಪ್ರಸಾದ ಸ್ವೀಕರಿಸಿದ್ದಾರೆ.
ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರ ಸಮಿತಿ ಅಧ್ಯಕ್ಷ ವಿನಯ ಕರ್ಕೇರ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolluru: ನವರಾತ್ರಿ ರಥೋತ್ಸವ, ನವಾನ್ನಪ್ರಾಶನ, ವಿಜಯೋತ್ಸವ
Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್ಪಾಲ್ ಸುವರ್ಣ
Udupi: ಉಚ್ಚಿಲ ದಸರಾ 2024; ಶಾರದೆ, ನವದುರ್ಗೆಯರ ಅದ್ದೂರಿ ಶೋಭಾಯಾತ್ರೆ
Udupi: ಶ್ರೀಕೃಷ್ಣ ಮಠದಲ್ಲಿ ಕದಿರುಹಬ್ಬ, ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ
Udupi; ಗೀತಾರ್ಥ ಚಿಂತನೆ 62 : ಆಯುಕ್ತ ಶಬ್ದದ ಉಗಮ ಗೀತೆಯಲ್ಲಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.