Ujire: ಮತ್ತೆ ನದಿಯಾದ ರಾಷ್ಟ್ರೀಯ ಹೆದ್ದಾರಿ!
Team Udayavani, Jul 18, 2023, 5:13 AM IST
ಬೆಳ್ತಂಗಡಿ: ಮಂಗಳೂರು - ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ 73ರ ಉಜಿರೆಯ ಕೆಳಗಿನ ಪೇಟೆಯಲ್ಲಿ ಸೋಮವಾರವೂ ಸಂಜೆ ರಸ್ತೆಯಲ್ಲೇ ಮಳೆನೀರು ಹರಿದ ಪರಿಣಾಮ ಅಕ್ಷರಶಃ ನದಿಯಂತೆ ಕಂಡುಬಂದಿತು.
ಸೋಮವಾರ ಸಂಜೆ ಉಜಿರೆ ಪರಿಸರ ದಲ್ಲಿ ಸುರಿದ ಭಾರೀ ಮಳೆಗೆ ಕೆಳಗಿನ ಪೇಟೆಯಲ್ಲಿ ನೀರು ರಸ್ತೆಯಲ್ಲಿ ಎರಡು ಅಡಿಗಿಂತ ಅಧಿಕ ಹರಿದು ಸಮೀಪದ ಅಂಗಡಿಗಳಿಗೆ ನುಗ್ಗಿತಲ್ಲದೆ, ದ್ವಿಚಕ್ರ ವಾಹನ, ಕಾರುಗಳ ಸಹಿತ ಸಣ್ಣಪುಟ್ಟ ವಾಹನಗಳಿಗೆ, ಪಾದಚಾರಿಗಳಿಗೆ ಸಂಚಾರ ತ್ರಾಸದಾಯಕವಾಗಿದೆ. ಜೂ. 14ರಂದು ಹಾಗೂ ಕಳೆದ ವಾರ ಇಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು.
ಜೂನ್ನಲ್ಲಿ ನೀರು ರಸ್ತೆಯಲ್ಲಿ ಹರಿದ ಬಳಿಕ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿಗಳನ್ನು ದುರಸ್ತಿ ಮಾಡಲಾಗಿತ್ತು. ಆದರೆ ಇದಕ್ಕೆ ಮೂಲ ಕಾರಣವೇನೆಂಬುದನ್ನು ಅಧಿಕಾರಿಗಳು ಪರಿಶೀಲಿಸದೆ ಜನರ ತಾಳ್ಮೆ ಪರೀಕ್ಷಿಸುತ್ತಿದ್ದಾರೆ; ಪ್ರತೀ ಮಳೆಗಾಲದಲ್ಲಿ ಸಮಸ್ಯೆ ಮರುಕಳಿಸು ತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಚರಂಡಿಗಳಲ್ಲಿ ತುಂಬಿರುವ ತ್ಯಾಜ್ಯ, ಗಿಡಗಂಟಿ ತೆರವುಗೊಳಿಸ ದಿರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.