Ullala: ಮರಕ್ಕೆ ಸ್ಕೂಟರ್ ಢಿಕ್ಕಿ: ಸವಾರ ಸಾವು
Team Udayavani, Oct 17, 2024, 1:05 AM IST
ಉಳ್ಳಾಲ: ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎನ್ನುವಲ್ಲಿ ಬುಧವಾರ ಸಂಭವಿಸಿದೆ.
ಮಾಡೂರು ನಿವಾಸಿ ನಾಗೇಶ್ (51) ಮೃತರು. ಅವರು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಬಸ್ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ರಜೆ ಇದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.