Under-19: ಫೈನಲ್ ರದ್ದು- ಪ್ರಶಸ್ತಿ ಹಂಚಿಕೊಂಡ ಭಾರತ, ದ. ಆಫ್ರಿಕಾ
Team Udayavani, Jan 11, 2024, 12:02 AM IST
ಜೊಹಾನ್ಸ್ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ ಅಂಡರ್-19 ತಂಡಗಳ ನಡುವೆ ಬುಧವಾರ ಇಲ್ಲಿ ನಡೆಯಬೇಕಿದ್ದ ಟಿ20 ತ್ರಿಕೋನ ಸರಣಿಯ ಫೈನಲ್ ಪಂದ್ಯ ಭಾರೀ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಪಂದ್ಯಕ್ಕೆ ಮೀಸಲು ದಿನ ಇಲ್ಲದ ಕಾರಣ ಎರಡೂ ತಂಡಗಳಿಗೆ ಪ್ರಶಸ್ತಿಯನ್ನು ಹಂಚಲಾಯಿತು.
ಮಳೆ ನಿಂತ ಬಳಿಕ ಕನಿಷ್ಠ 5 ಓವರ್ಗಳ ಪಂದ್ಯ ನಡೆಸಲು ಸಂಘಟಕರು ಪ್ರಯತ್ನಿಸಿದರು. ಆದರೆ ಒದ್ದೆ ಅಂಗಳದಿಂದಾಗಿ ಇದನ್ನು ಕೈಬಿಡಲಾಯಿತು. ಟಾಸ್ ಕೂಡ ಹಾರಿಸಲಾಗಲಿಲ್ಲ.
ಉದಯ್ ಸಹಾರಣ್ ನಾಯಕತ್ವದ ಭಾರತ ನಾಲ್ಕೂ ಲೀಗ್ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಫೈನಲ್ ಪ್ರವೇಶಿಸಿತ್ತು. 2 ಸಲ ದಕ್ಷಿಣ ಆಫ್ರಿಕಾವನ್ನು ಕೆಡವಿತ್ತು.
ಭಾರತ ತಂಡವಿನ್ನು ಜ. 19ರಂದು ಆರಂಭವಾಗಲಿರುವ ಅಂಡರ್-19 ವಿಶ್ವಕಪ್ ಪಂದ್ಯಾವಳಿಯತ್ತ ಗಮನ ಹರಿಸಲಿದೆ. ಶನಿವಾರ ಪ್ರಿಟೋರಿಯಾದಲ್ಲಿ ನಡೆಯುವ ಅಭ್ಯಾಸ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯ ಮುಖಾಮುಖೀ ಆಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.