Puttige Sri: ವಿಶ್ವಾದ್ಯಂತ ಸನಾತನ ಧರ್ಮ ಸತ್ವಯುತ: ಪುತ್ತಿಗೆ ಶ್ರೀ
Team Udayavani, Sep 24, 2023, 11:38 PM IST
ಬೆಂಗಳೂರು: ಪ್ರಪಂಚದಾದ್ಯಂತ ನಿಂತು ಸನಾತನ ಧರ್ಮವನ್ನು ನೋಡಿದರೆ ಅದರ ಮಹತ್ವವನ್ನು ಗುರುತಿಸಲು ಸಾಧ್ಯ. ಸನಾತನ ಧರ್ಮ ವಿಶ್ವಾದ್ಯಂತ ಒಳ್ಳೆಯ ಸತ್ವಗಳಿಂದ ಕೂಡಿದೆ ಎಂದು ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ.
ತಮ್ಮ ಚಾತುರ್ಮಾಸ್ಯ ಸಮಾರೋಪ ಸಮಾರಂಭದ ಅಂಗವಾಗಿ ಬಸವನಗುಡಿಯ ಗೋವರ್ಧನ ಕ್ಷೇತ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕನಕಾಭಿಷೇಕ ಪೂರ್ವಕ ಗುರು ವಂದನೆ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ವಿಚಾರಧಾರೆ, ಸಾಂಸ್ಕೃತಿಕ ಮೌಲ್ಯಗಳು, ಚಿಂತನಾ ಲಹರೆ ಎಷ್ಟೊಂದು ಮಾನ್ಯವಾಗಿದೆ ಎಂಬುದನ್ನು ಜಗತ್ತು ಒಳಗಿಂದೊಳಗೆ ಗುರುತಿಸುತ್ತಿದೆ. ಪ್ರಪಂಚದ 28 ದೇಶಗಳಲ್ಲಿ ಸಂಚರಿಸಿ ಅನೇಕ ದೇಶಗಳ ನಾಯಕರನ್ನೂ ಭೇಟಿಯಾಗಿದ್ದೇವೆ. ಅವರಿಗೆ ಸನಾತನ ಧರ್ಮದ
ಬಗ್ಗೆ ಇರುವ ಗೌರವಾದರಗಳನ್ನು ನೋಡಿ ಬೆರಗಾಗಿದ್ದೇವೆ ಎಂದು ತಿಳಿಸಿದರು.
ವಿಶ್ವದಲ್ಲೇ ಸದ್ಭಾವನೆ ಮೂಡಿಸಿದ ಪುತ್ತಿಗೆ ಶ್ರೀ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್ ಮಾತನಾಡಿ, ವಿಶೇಷವಾದ ಧರ್ಮದ ವಿಚಾರಗಳನ್ನು ತೆಗೆದು ಕೊಂಡು ಅಂತಾರಾಷ್ಟ್ರೀಯಮಟ್ಟದ ದೊಡ್ಡ ಸಭೆಗಳಲ್ಲಿ ಭಾಗಿಯಾಗಿ ದೇಶದ, ಧರ್ಮದ ಪ್ರತಿಪಾದನೆ ಮಾಡಿದ್ದಾರೆ. ಇದರ ಜತೆಗೆ ವಿಶ್ವದಲ್ಲಿ ಕ್ರಾಂತಿ, ಸದ್ಭಾವನೆ ಮೂಡಿಸುವ ಕೆಲಸವನ್ನು ಪುತ್ತಿಗೆ ಶ್ರೀಗಳು ಮಾಡಿದ್ದಾರೆ. ಬಹುತೇಕ ಸ್ವಾಮೀಜಿಗಳು ಅವರ ಇತಿಮಿತಿಗಳಲ್ಲೇ ಇರುತ್ತಾರೆ. ಆದರೆ ಪುತ್ತಿಗೆ ಶ್ರೀಗಳು ಜನರ ಬಳಿ ಹೋಗುವ ಕೆಲಸ ಮಾಡಿದ್ದಾರೆ. ಇಂದು ಸ್ವಾಮೀಜಿ ಕೈಗೊಂಡಿರುವ ಕೋಟಿ ಗೀತ ಲೇಖನ ಯಜ್ಞವು ನಮ್ಮ ಧರ್ಮದಲ್ಲಿರುವ ಅಂಶಗಳನ್ನು ಆಳವಾಗಿ ಅಧ್ಯಯನ ಮಾಡಲು ಪ್ರೋತ್ಸಾಹ ನೀಡಿದಂತಾಗಿದೆ. ಹೊಸ ಪೀಳಿಗೆಗೆ ಭಗವದ್ಗೀತೆ ಬಗ್ಗೆ ತಿಳಿದುಕೊಳ್ಳಲು ಸ್ವಾಮೀಜಿ ಮಾಡಿರುವ ಕಾರ್ಯ ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ವಿಧಾನ ಪರಿಷತ್ತು ಸದಸ್ಯ ಯು.ಬಿ. ವೆಂಕಟೇಶ್, ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ| ಎಸ್.ಅಹಲ್ಯ, ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್
ಬಾಬು, ಮಂಜುನಾಥ್, ಹಯಗ್ರೀವ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.