ಉತ್ತರ ಪ್ರದೇಶ : ಕೊನೇ ಹಂತದ ಪ್ರಚಾರಕ್ಕೆ ತೆರೆ


Team Udayavani, Mar 6, 2022, 7:15 AM IST

ಉತ್ತರ ಪ್ರದೇಶ : ಕೊನೇ ಹಂತದ ಪ್ರಚಾರಕ್ಕೆ ತೆರೆ

ಲಕ್ನೋ/ಇಂಫಾಲ: ಏಳು ಹಂತಗಳಲ್ಲಿ ನಡೆಯುತ್ತಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಕೊನೇ ಹಂತದ ಮತದಾನ ಮಾ.7ಕ್ಕೆ ಮುಕ್ತಾಯವಾಗಲಿದೆ.

ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿರುಸಿನ ಬಹಿರಂಗ ಪ್ರಚಾರ ಶನಿವಾರ ಕೊನೆಗೊಂಡಿದೆ. ಆಜಂಗಢ‌, ಮೌ, ಜೌನ್ಪುರ, ಘಾಜಿಪುರ್‌, ಚಂದೌಲಿ, ವಾರಾಣಸಿ, ಮಿರ್ಜಾಪುರ, ಭದೋಯ್‌ ಮತ್ತು ಸೋನಾಭದ್ರಾ ಜಿಲ್ಲೆಗಳ 54 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದೆ. ಒಟ್ಟು 613 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಾ.10ರಂದು ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಮತ ಎಣಿಕೆ ನಡೆಯಲಿದ್ದು, ಫ‌ಲಿತಾಂಶ ಪ್ರಕಟವಾಗಲಿದೆ.

ಆಡಳಿತ ಪರ: ಪ್ರಚಾರದ ಕೊನೇ ದಿನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದಲ್ಲಿನ ಮತದಾನ ಉತ್ತಮ ಆಡಳಿತದ ಪರವಾಗಿ ಇರಲಿದೆ ಎಂದು ಬಣ್ಣಿಸಿದ್ದಾರೆ. ವಾರಾಣಸಿಯ ಖಜುರಿ ಗ್ರಾಮ ದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿನ ವಿಪಕ್ಷಗಳು ಸ್ವತ್ಛ ಭಾರತ ಮತ್ತು ವೋಕಲ್‌ ಫಾರ್‌ ಲೋಕಲ್‌ ಎಂಬ ಕೇಂದ್ರ ಸರಕಾರದ ಅಭಿಯಾನವನ್ನು ಕೆಲವರು ಲೇವಡಿ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಪಾರು ಮಾಡಿ ಕರೆತರುವ ವಿಚಾರದಲ್ಲಿ ಕೂಡ ವಿಪಕ್ಷಗಳು ಕೊಂಕು ಹುಡುಕುವುದರಲ್ಲಿಯೇ ಕಾಲ ಕಳೆಯುತ್ತಿವೆ ಎಂದು ಆಕ್ಷೇಪ ಮಾಡಿದ್ದಾರೆ. ಕಾಂಗ್ರೆಸ್‌ ಹೆಸರೆತ್ತದೆ ಟೀಕೆ ಮಾಡಿದ ಪ್ರಧಾನಿ, ಖಾದಿ ಹೆಸರು ಹೇಳಿಕೊಂಡು ರಾಜಕೀಯ ಮಾಡಿದ ಪಕ್ಷವೊಂದು ಈಗ ಅದರ ಹೆಸರು ಹೇಳಲು ಕೂಡ ಹಿಂದೇಟು ಹಾಕುತ್ತಿದೆ ಎಂದರು.

ಎಸ್‌ಪಿ ಸೇರ್ಪಡೆ
ಕೊನೇ ಹಂತದ ಮತದಾನಕ್ಕೆ ಮುನ್ನವೇ ಅಲಹಾಬಾದ್‌ ಲೋಕಸಭಾ ಕ್ಷೇತ್ರದ ಸಂಸದೆ, ಬಿಜೆಪಿ ನಾಯಕಿ ರೀಟಾ ಬಹುಗುಣ ಜೋಷಿ ಅವರ ಪುತ್ರ ಮಾಯಂಕ್‌ ಅವರು ಸಮಾಜವಾದಿ ಪಕ್ಷ ಸೇರಿದ್ದಾರೆ. ಆಜಂಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಅಖಿಲೇಶ್ ಯಾದವ್‌ ಬಿಜೆಪಿ ನಾಯಕಿಯ ಪುತ್ರನ ಪಕ್ಷ ಸೇರ್ಪಡೆಯ ವಿಚಾರ ಪ್ರಕಟಿಸಿದರು.

ಮಣಿಪುರ: ಶೇ.76.4 ಮತ
ಮಣಿಪುರದಲ್ಲಿ ಶನಿವಾರ ನಡೆದ ಎರಡನೇ ಹಂತದ ಮತದಾನದಲ್ಲಿ ಶೇ.76.04 ಹಕ್ಕು ಚಲಾವಣೆ ಯಾಗಿದೆ. ಇದರ ಜತೆಗೆ ಸಣ್ಣಪುಟ್ಟ ಹಿಂಸಾಚಾರಗಳೂ ನಡೆದಿವೆ. ಆರು ಜಿಲ್ಲೆಗಳ ಒಟ್ಟು 22 ವಿಧಾನಸಭಾ ಕ್ಷೇತ್ರ ಗಳಲ್ಲಿ ಮತದಾನ ನಡೆದಿತ್ತು. ಸೇನಾಪತಿ ಜಿಲ್ಲೆ ಯಲ್ಲಿ ಶೇ.82.02 ಮತದಾನವಾಗಿದೆ. ಸೇನಾಪತಿ ಜಿಲ್ಲೆಯ ನಗ್ಮಾಜು ಎಂಬ ಮತಗಟ್ಟೆಯಲ್ಲಿ ಬಿಜೆಪಿ ಬೆಂಬಲಿಗನೊಬ್ಬನನ್ನು ಗುಂಡು ಹಾರಿಸಿ ಕೊಲ್ಲಲಾ ಗಿದೆ. ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಬಿಜೆಪಿಯ ಉಚ್ಛಾಟಿತ ಅಭ್ಯರ್ಥಿಯ ಮನೆ ಮುಂಭಾಗದಲ್ಲಿ ಕಚ್ಚಾ ಬಾಂಬ್‌ ಅನ್ನು ಸ್ಫೋಟಿಸಲಾಗಿದೆ.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.