ಉಡುಪಿ ಜಿಲ್ಲೆಯಲ್ಲಿ ಲಸಿಕೆ ವಾರದಲ್ಲಿ ಶೇ. 100 ಸಾಧನೆ ಗುರಿ


Team Udayavani, Feb 1, 2022, 7:50 AM IST

covidಉಡುಪಿ ಜಿಲ್ಲೆಯಲ್ಲಿ ಲಸಿಕೆ ವಾರದಲ್ಲಿ ಶೇ. 100 ಸಾಧನೆ ಗುರಿ

ಉಡುಪಿ: ಜಿಲ್ಲೆಯಲ್ಲಿ ಶೇ. 98.55 ಮಂದಿ ಪ್ರಥಮ ಹಾಗೂ ಶೇ. 87.22 ಮಂದಿ ಎರಡನೇ ಡೋಸ್‌ ಕೊರೊನಾ ನಿರೋಧಕ ಲಸಿಕೆ ಪಡೆದಿದ್ದಾರೆ. ಒಂದು ವಾರದ ಅವಧಿಯಲ್ಲಿ ಎರಡೂ ವಿಭಾಗಗಳಲ್ಲಿ ಶೇ. 100 ಗುರಿ ಸಾಧಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ.

ಫೆ. 2 ಮತ್ತು 4ರಂದು ವಿಶೇಷ ಲಸಿಕೆ ಅಭಿಯಾನ ಆಯೋಜಿಸಲಾಗಿದೆ. ಗ್ರಾ.ಪಂ. ಮತ್ತು ನಗರ ವ್ಯಾಪ್ತಿಯಲ್ಲಿ ಪ್ರಥಮ ಡೋಸ್‌ ಪಡೆಯದವರನ್ನು ಮತ್ತು ಪ್ರಥಮ ಡೋಸ್‌ ಪಡೆದು ಎರಡನೇ ಡೋಸ್‌ ಪಡೆಯದವರನ್ನು, 2ನೇ ಡೋಸ್‌ ಲಸಿಕೆ‌ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಅರ್ಹರಾಗಿರುವವರನ್ನು ಗುರುತಿಸಿ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ನೀಡುವ ಗುರಿ 9,99,000 ಆಗಿದ್ದು, ಇಂದಿನವರೆಗೆ 9,84,551 ಮಂದಿಗೆ ಪ್ರಥಮ ಡೋಸ್‌ ನೀಡಿ ಶೇ. 98.55 ಗುರಿ ಸಾಧಿಸಲಾಗಿದೆ. ಎರಡನೇ ಡೋಸ್‌ 8,71,317 ಮಂದಿಗೆ ನೀಡಿದ್ದು, ಶೇ. 87.22 ಸಾಧನೆಯಾಗಿದೆ. ಒಟ್ಟು 18,55,868 ಡೋಸ್‌ ಲಸಿಕೆ ನೀಡಲಾಗಿದೆ. 15-18 ವರ್ಷದೊಳಗಿನ ಗುರಿ 53,555 ಆಗಿದ್ದು, ಇದುವರೆಗೆ 47,185 ವಿದ್ಯಾರ್ಥಿಗಳಿಗೆ ನೀಡಿ ಶೇ.88.11 ಸಾಧನೆ ಮಾಡಲಾಗಿದೆ. 25,797 ಮಂದಿಗೆ ಮುನ್ನೆಚ್ಚರಿಕ ಡೋಸ್‌ ನೀಡಲಾಗಿದೆ.

ಅಧಿಕಾರಿಗಳ ನಿಯೋಜನೆ
ಒಂದು ವಾರದ ಅವಧಿಯಲ್ಲಿ ಎರಡೂ ಡೋಸ್‌ ಲಸಿಕಾಕರಣದಲ್ಲಿ ಶೇ. 100 ಸಾಧನೆ ಮಾಡಲು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾ.ಪಂ. ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್‌ವಾರು ನೋಡಲ್‌ ಅಧಿಕಾರಿಗಳನ್ನಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳನ್ನು ನಿಯೋಜಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಮಾರ್ಗದರ್ಶನ
ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಅರ್ಹರಿರುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸಿ ಹತ್ತಿರದ ಲಸಿಕೆ ಕೇಂದ್ರದಲ್ಲಿ ಪಡೆಯುವ ಬಗ್ಗೆ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರು ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಪರಿಶೀಲಿಸುವುದು ಮತ್ತು ಸಿಬಂದಿ ಮುಂಜಾಗ್ರತಾ ಡೋಸ್‌ ಲಸಿಕೆಯನ್ನು ಕೂಡಲೇ ಪಡೆದುಕೊಳ್ಳುವಂತೆ ಸೂಚಿಸಲಿದ್ದಾರೆ.

ಅಗತ್ಯ ಕ್ರಮಕ್ಕೆ ಸೂಚನೆ
ಗ್ರಾ.ಪಂ. ಮತ್ತು ನಗರ ವ್ಯಾಪ್ತಿಯಲ್ಲಿ ಲಸಿಕೆ ಪಡೆಯಲು ಬಾಕಿ ಇರುವ 15ರಿಂದ 18 ವರ್ಷದ ವಿದ್ಯಾರ್ಥಿಗಳು ಮತ್ತು ಅದೇ ವಯಸ್ಸಿನ ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಗ್ರಾಮ/ನಗರ ಕಾರ್ಯಪಡೆ ಅಧ್ಯಕ್ಷರು ಮತ್ತು ಸದಸ್ಯರ ಸಹಕಾರದಿಂದ ಲಸಿಕೆ ಪಡೆಯುವಂತೆ ಕ್ರಮವಹಿಸಬೇಕಾಗಿದೆ.

ಜಿಲ್ಲೆಯ ಅರ್ಹ ಎಲ್ಲರಿಗೂ 1ನೇ ಮತ್ತು 2ನೇ ಡೋಸ್‌ ಲಸಿಕೆ ನೀಡಲು ಗ್ರಾ.ಪಂ. ಮತ್ತು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ನೋಡೆಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಹಾಗೂ ಲಸಿಕೆ ಪಡೆಯಲು ನಿರಾಕರಣೆ ಇರುವವರ ಮನೆಗೆ ತೆರಳಿ ಮನವೊಲಿಸಿ ಲಸಿಕೆ ನೀಡಲು ಮೊಬೈಲ್‌ ತಂಡಗಳನ್ನು ರಚಿಸಲಾಗಿದೆ. ವಾರದ ಅವಧಿಯಲ್ಲಿ ಅರ್ಹ ಎಲ್ಲರಿಗೂ ಶೇ. 100 ಸಾಧನೆ ಮಾಡಲು ಗುರಿ ಹಾಕಿಕೊಳ್ಳಲಾಗಿದೆ.
– ಕೂರ್ಮಾ ರಾವ್‌ ಎಂ., ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.