“ವಳಕಾಡು ಶಾಲೆಯ ತರಗತಿಗೊಂದು ಗ್ರಂಥಾಲಯ ರಾಜ್ಯಕ್ಕೇ ಮಾದರಿ’

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಶಾಲೆಗೆ ಭೇಟಿ

Team Udayavani, Oct 9, 2021, 5:04 AM IST

“ವಳಕಾಡು ಶಾಲೆಯ ತರಗತಿಗೊಂದು ಗ್ರಂಥಾಲಯ ರಾಜ್ಯಕ್ಕೇ ಮಾದರಿ’

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ವ್ಯಾಪಕ ಪ್ರವಾಸ ಮಾಡಿದ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು, ವಳಕಾಡು ಪ್ರೌಢಶಾಲೆಯಲ್ಲಿರುವ ತರಗತಿಗೊಂದು ಗ್ರಂಥಾಲಯ ರಾಜ್ಯಕ್ಕೇ ಮಾದರಿ ಎಂದು ಮೆಚ್ಚುಗೆ ಸೂಚಿಸಿದರು.

ವಳಕಾಡು ಶಾಲೆಗೆ ಭೇಟಿ ನೀಡಿದ ಅವರು, “ಶ್ರದ್ಧಾ’ ವಾಚನಾಲಯವನ್ನು (ರೀಡಿಂಗ್‌ ರೂಮ್‌) ಉದ್ಘಾಟಿಸಿದರು. ಸ್ಮಾರ್ಟ್‌ ಕ್ಲಾಸ್‌ ರೂಮ್‌ ಸಹಿತ ವಿವಿಧ ತರಗತಿಗಳಿಗೆ ಭೇಟಿ ನೀಡಿ ಮಕ್ಕಳು, ಶಿಕ್ಷಕರ ಜತೆ ಮಾತುಕತೆ ನಡೆಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯ ಏಳು ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಒಂದಕ್ಕಿಂತ ಒಂದು ಶಾಲೆಗಳು ಎಸ್‌ಡಿಎಂಸಿ ಮತ್ತು ಹಳೆ ವಿದ್ಯಾರ್ಥಿಗಳಿಂದ ಅತ್ಯುತ್ತಮವಾಗಿ ನಡೆಯುತ್ತಿವೆ. ವಿದ್ಯಾರ್ಥಿಗಳ ಹಾಜರಾತಿ ನವರಾತ್ರಿ ಹಬ್ಬವಿದ್ದರೂ ಉತ್ತಮವಾಗಿದೆ ಎಂದರು.

ಶಾಸಕ ಕೆ.ರಘುಪತಿ ಭಟ್‌ ನೇತೃತ್ವದಲ್ಲಿ ಶಾಲೆಯಲ್ಲಿ ಹತ್ತು ರೂಮುಗಳು ಮಂಜೂರಾದರೂ ಹೆಚ್ಚುವರಿಯಾಗಿ ಒಂದು ಸಭಾಂಗಣವನ್ನು ನಿರ್ಮಿಸಿದ್ದಾರೆ ಎಂದವರು ತಿಳಿಸಿದರು.

ಡಿಡಿಪಿಐ ಎನ್‌.ಎಚ್‌. ನಾಗೂರ, ಬಿಇಒ ನಾಗೇಂದ್ರಪ್ಪ, ಡಯಟ್‌ ಪ್ರಾಂಶುಪಾಲ ವೇದಮೂರ್ತಿ, ಎಸ್‌ಡಿಎಂಸಿ ಉಪಾಧ್ಯಕ್ಷ ಶ್ಯಾಮಪ್ರಸಾದ್‌ ಕುಡ್ವ, ಸದಸ್ಯ ರವಿರಾಜ ನಾಯಕ್‌, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಭೂಷಣ ಶೇಟ್‌, ಮುಖ್ಯ ಶಿಕ್ಷಕಿ ನಿರ್ಮಲಾ, ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಕುಸುಮಾ, ಬಿಆರ್‌ಸಿ ಸಮನ್ವಯಕಾರ ಉಮಾ ಪಿ., ಶೈಕ್ಷಣಿಕ ಸಮನ್ವಯಕಾರ ಶಂಕರ್‌ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಚೀನಾದ ಕಾರನ್ನ ನಮ್ಮಲ್ಲಿ ಮಾರಬೇಡಿ: ಟೆಸ್ಲಾಗೆ ಕೇಂದ್ರದ ಸೂಚನೆ

ಇದಕ್ಕೂ ಮುನ್ನ ಸಚಿವರು ಕುಂದಾಪುರದ ಸ.ಪ.ಪೂ. ಕಾಲೇಜು, ಅಮಾಸೆಬೈಲು ಸ.ಹಿ.ಪ್ರಾ. ಶಾಲೆ, ತೆಕ್ಕಟ್ಟೆ ಕುವೆಂಪು ಮಾದರಿ ಹಿ.ಪ್ರಾ. ಶಾಲೆ, ಮಣೂರು ಸ.ಹಿ.ಪ್ರಾ. ಶಾಲೆ, ಕೊಲ್ಲೂರು, ಕುಂಭಾಸಿ ಆನೆಗುಡ್ಡೆ, ಕೋಟ ಅಮೃತೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಿದರು.

1ನೇ ಕ್ಲಾಸ್‌ ಕೂಡಲೇ ಆರಂಭಿಸಿ ಸಾರ್‌!
ಒಂದನೇ ಕ್ಲಾಸ್‌ನ್ನು ಕೂಡಲೇ ಆರಂಭಿಸಬೇಕು ಎಂದು ವಳಕಾಡು ಶಾಲೆಯ ನಾಲ್ಕನೆಯ ತರಗತಿ ವಿದ್ಯಾರ್ಥಿನಿ ಕನ್ನರ್ಪಾಡಿಯ ಸಂಪ್ರೀತಿ ಶಿಕ್ಷಣ ಸಚಿವರಿಗೆ ಮನವಿ ಮಾಡಿದಳು. ಸಚಿವರ ಪ್ರಶ್ನೆಗೆ ಉತ್ತರಿಸಿದ ಈಕೆ, “ಶಾಲೆಯಲ್ಲಿ ಇತರ ಮಕ್ಕಳೂ ಇರುತ್ತಾರೆ. ಮನೆಯಲ್ಲಾದರೆ ನಾವು ಮಾತ್ರ ಇರಬೇಕು. ಆನ್‌ಲೈನ್‌ ತರಗತಿ ಅರ್ಥ ಆಗುವುದಿಲ್ಲ’ ಎಂದಳು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.