Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Team Udayavani, Sep 15, 2024, 10:30 PM IST
ವಿಜಯಪುರ:ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಮತ್ತು ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ ಪ್ರಕರಣದಲ್ಲಿ ಒಂದಕ್ಕೊಂದು ತಳುಕು ಹಾಕುವುದು ಬೇಡ. ಮುನಿರತ್ನ ಪ್ರಕರಣದಲ್ಲಿ ಸಾಕ್ಷéಗಳಿವೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಹಣಕ್ಕೆ ಒತ್ತಾಯ, ಅತ್ಯಂತ ಹೀನ, ಅಸಭ್ಯ ಮತ್ತು ಅಶ್ಲೀಲವಾಗಿ ಮಾತನಾಡಿರುವ ಆರೋಪವು ಆಡಿಯೋದಿಂದ ಬೆಳಕಿಗೆ ಬಂದಿದೆ. ಆಂಧ್ರಕ್ಕೆ ಪರಾರಿಯಾಗುವ ಸಂದರ್ಭದಲ್ಲಿ ಅವರನ್ನು ಪೊಲೀಸರು ಬಂ ಧಿಸಿದ್ದಾರೆ.
ಅಲ್ಲದೇ, ಮುನಿರತ್ನ ಜಾತಿ ನಿಂದನೆ ಮಾಡಿ ಮಹಿಳೆಯರ ಕುರಿತಾಗಿ ಮಾತಾಡಿದ್ದು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ಒಬ್ಬ ಜನಪ್ರತಿನಿಧಿ ಯಾಗಿ ಇಂತಹ ವರ್ತನೆ ಸರಿಯಲ್ಲ. ಅವರು ಕ್ಷಮೆಗೆ ಅರ್ಹರಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯಾಸತ್ಯತೆ ತಿಳಿದುಕೊಳ್ಳಲಾಗುತ್ತದೆ.
ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪಿಎಸೈ ಪರಶುರಾಮ ಸಾವಿನ ಪ್ರಕರಣದಲ್ಲಿ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ ಪಾತ್ರವಿಲ್ಲ. ಮುನಿರತ್ನ ವಿಷಯದಲ್ಲಿ ಸಾಕ್ಷಿ ಸಮೇತವಾಗಿ ಸಿಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.