Karnataka: ವಿಕ್ರಂ ಸಿಂಹ, ಕರಸೇವಕರ ಬಂಧನ ಸೇಡಿನ ರಾಜಕಾರಣ- ಜೆಡಿಎಸ್‌ ನಾಯಕರ ಆಕ್ರೋಶ


Team Udayavani, Jan 5, 2024, 11:56 PM IST

jds

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ಹಾಗೂ ಸಂಸದ ಪ್ರತಾಪಸಿಂಹ ಅವರ ಸಹೋದರ ವಿಕ್ರ ಸಿಂಹ ಪ್ರಕರಣದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ದಳಪತಿಗಳು (ಜೆಡಿಎಸ್‌) ಸಿದ್ದರಾಮಯ್ಯ ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಈ ಎರಡೂ ಪ್ರಕರಣಗಳು ಸೇಡಿನ ರಾಜಕಾರಣ ಭಾಗವಾಗಿದೆ ಎಂದು ಕಿಡಿ ಕಾರಿದ್ದಾರೆ. ಶುಕ್ರವಾರ ಜೆಡಿಎಸ್‌ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿ ವಿರುದ್ಧ ಗುಡುಗಿದರು. ಆಡಳಿತ ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ತುಳಿಯಲು ಹೊರಟಿದ್ದಾರೆ ಎಂದು ಟೀಕಿಸಿದರು.

ಕರಸೇವಕರ ಮೇಲೆ ದಬ್ಟಾಳಿಕೆ
ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಇಲ್ಲಿ ಕಾಂಗ್ರೆಸ್‌ ಸರಕಾರ ಶ್ರೀಕಾಂತ್‌ ಪೂಜಾರಿ ಪ್ರಕರಣವನ್ನು ದೊಡ್ಡದು ಮಾಡಿದೆ. ಅವರ ಬಹುತೇಕ ಎಲ್ಲ ಪ್ರಕರಣಗಳು ಖುಲಾಸೆ ಆಗಿವೆ. ಆದರೆ ಬಾಕಿ ಇದ್ದ ಒಂದು ಹಳೆ ಕೇಸ್‌ ಅನ್ನು ಮತ್ತೆ ಮುನ್ನೆಲೆಗೆ ತಂದಿದೆ. ಕರಸೇವಕರ ಮೇಲಿನ ದೌರ್ಜನ್ಯ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಕ್ರಂ ಸಿಂಹ ಪ್ರಕರಣದಲ್ಲಿ ಸಿಎಂ ಕೈವಾಡ
ಹಾಸನದ ವಿಕ್ರಂ ಸಿಂಹ ಪ್ರಕರಣದಲ್ಲಿ ಸಿಎಂ ಅವರ ನೇರ ಕೈವಾಡವಿದೆ. ಸಂಸದ ಪ್ರತಾಪಸಿಂಹ ಅವರ ಬಾಯಿ ಮುಚ್ಚಿಸಲು ಗೆಂಡೆಕೆರೆ ಅರಣ್ಯ ಪ್ರದೇಶದಿಂದ ಬೀಟೆ ಮರ ತಂದು ಸುಳ್ಳು ಕೇಸ್‌ ಹಾಕಿ ವಿಕ್ರಂ ಸಿಂಹ ಅವರನ್ನು ಜೈಲಿಗೆ ಹೋಗುವಂತೆ ಮಾಡಲಾಯಿತು. ಸಿದ್ದರಾಮಯ್ಯ ಅವರು ವಕೀಲರಾಗಿರುವ ಹಿನ್ನೆಲೆಯಲ್ಲಿ ಅವರೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕುತಂತ್ರ ಸಲಹೆ ಕೊಟ್ಟಿದ್ದಾರೆ. ಡಿಎಫ್ಒ ಜತೆಗೆ ಮುಖ್ಯಮಂತ್ರಿಗಳು ದೂರವಾಣಿಯಲ್ಲಿ ಮಾತನಾಡಿದ್ದು, ಕಾಲ್‌ ರೆಕಾರ್ಡ್‌ ತೆಗೆದರೆ ಅದೆಲ್ಲವೂ ಗೊತ್ತಾಗಲಿವೆ ಎಂದರು. ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್‌, ಪರಿಷತ್‌ ಸದಸ್ಯ ಟಿ.ಎ.ಶರವಣ ಸೇರಿ ಮತ್ತಿತರರು ಇದ್ದರು.

ನಾನೆಂದೂ ಸೇಡಿನ ರಾಜಕಾರಣ ಮಾಡಿಲ್ಲ: ದೇವೇಗೌಡ
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮಾತನಾಡಿ, ನಾನು ಸಿಎಂ ಆಗಿದ್ದಾಗಲೇ ಹುಬ್ಬಳ್ಳಿಯ ಈದ್ಗಾ ಮೈದಾನ ಘಟನೆ ನಡೆದಿತ್ತು. ನಾನು ಎಲ್ಲ ಸಮುದಾಯದವರ ಹಿತಕಾಯುವ ಕೆಲಸ ಮಾಡಿದ್ದೆ. ಎಂದೂ ಸೇಡಿನ ರಾಜಕಾರಣ ಮಾಡಲಿಲ್ಲ. ಆದರೆ ಈಗಿನ ಸರಕಾರ ವಿಪಕ್ಷಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು, ಅದು ಯಾವತ್ತೂ ಒಳ್ಳೆಯದಲ್ಲ ಎಂದರು.

ದೇವೇಗೌಡರ ನಿವಾಸಕ್ಕೆ ಸೋಮಣ್ಣ ಭೇಟಿ
ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ನಿವಾಸ ಶುಕ್ರವಾರ ಕುತೂಹಲಕರ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾಯಿತು. ಮೈಸೂರಿನ ವರುಣಾ ಮತ್ತು ಚಾಮರಾಜನಗರ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋಲುಂಡ ಬಳಿಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಪದೇಪದೆ ಆಕ್ರೋಶ ಹೊರ ಹಾಕುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ದಿಢೀರ್‌ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಸಮಾಲೋಚಿಸಿದ್ದಾರೆ. ಈ ಭೇಟಿ ವೇಳೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿ ಕೂಡ ಇದ್ದರು.

ಜೆಡಿಎಸ್‌ ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿದ್ದು, ಈ ಮೈತ್ರಿ ಬಳಿಕ ಇದೇ ಮೊದಲ ಬಾರಿಗೆ ಸೋಮಣ್ಣ ಅವರು ದಳಪತಿಗಳನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯ ವಲಯದಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ವರಿಷ್ಠರ ವಿರುದ್ಧ ಮುನಿಸಿಕೊಂಡಿರುವ ಸೋಮಣ್ಣ ಅವರಿಗೆ ಬಿಜೆಪಿ ವರಿಷ್ಠರು ದಿಲ್ಲಿಗೆ ಬರುವಂತೆ ಸೂಚನೆ ನೀಡಿದ್ದು, ಈ ಬೆಳವಣಿಗೆ ಮಧ್ಯೆ ನಡೆದಿರುವ ಭೇಟಿ ಕೌತುಕ ಹುಟ್ಟಿಹಾಕಿದೆ. ಈ ಹಿಂದೆ ಸೋಮಣ್ಣ ಅವರು ಬಿಜೆಪಿಗೆ ಗುಡ್‌ಬೈ ಹೇಳಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇತ್ತೀಚೆಗಷ್ಟೇ ಸೋಮಣ್ಣ ತಾವು ಬಿಜೆಪಿಯಲ್ಲೇ ಇರುತ್ತೇನೆಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದರು.

 

ಟಾಪ್ ನ್ಯೂಸ್

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.