ಸಮರ್ಪಕ ವಿದ್ಯುತ್ಗೆ ಆಗ್ರಹಿಸಿ ಬಿಳಿಕೆರೆ ಎಇಇ ಕಚೇರಿಯಲ್ಲಿ ರೈತರ ಪ್ರತಿಭಟನೆ
Team Udayavani, Mar 23, 2022, 8:12 PM IST
ಹುಣಸೂರು : ತಾಲೂಕಿನ ದೊಡ್ಡ ಹೋಬಳಿ ಕೇಂದ್ರವಾದ ಬಿಳಿಕೆರೆ ಸುತ್ತ ಮುತ್ತಲ ಗ್ರಾಮಗಳಿಗೆ ಹಗಲು ವೇಳೆ ಅಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆಂದು ಆರೋಪಿಸಿ ಬಿಳಿಕೆರೆ ಚೆಸ್ಕಾಂ ಎಇಇ ಕಚೇರಿಯಲ್ಲಿ ರೈತ ಮುಖಂಡರು ಧರಣಿ ನಡೆಸಿದರು.
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷರಾದ ನಂಜೇಗೌಡ ಮತ್ತು ಹಿಮ್ಮಾವು ರಘು ರವರ ನೇತೃತ್ವದಲ್ಲಿ ಈ ಭಾಗದ ರೈತರಿಗೆ ಬೆಳಗಿನ ಸಮಯದಲ್ಲಿ ರೈತರ ಪಂಪ್ಸೆಟ್ಗಳಿಗೆ ಏಳು ಗಂಟೆ ಗುಣಮಟ್ಟದ ವಿದ್ಯುತ್ ನೀಡಬೇಕು. ಉತ್ತಮ ಟ್ರಾನ್ಸ್ ಫಾರಂಗಳನ್ನು ಅಳವಡಿಸುವಂತೆ ಒತ್ತಾಯಿಸಿದರು.
ವಿದ್ಯುತ್ ವಿಚಾರದಲ್ಲಿ ರೈತರಿಗೆ ಯಾವುದೇ ತೊಂದರೆ ನೀಡದಂತೆ ಮತ್ತು ರೈತರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಒತ್ತಾಯಿಸಿ, ಸ್ಥಳಕ್ಕೆ ಎ.ಇ.ಇ.ವಿಜಯರತ್ನರನ್ನು ಕರೆಸಬೇಕೆಂದು ಪಟ್ಟು ಹಿಡಿದರು.
ಈ ವೇಳೆ ಬಿಳಿಕೆರೆ ಚೆಸ್ಕಾಂ ಎ.ಇ. ಜಯಕುಮಾರ್ ಎಇಇರವರಿಗೆ ಮಾಹಿತಿ ನೀಡಿದ ಮೇರೆಗೆ ಹುಣಸೂರಿನಲ್ಲಿದ್ದ ಸಭೆ ಮುಗಿಸಿ ಬಿಳಿಕೆರೆ ಕಚೇರಿಗೆ ಬಂದು ರೈತ ಮುಖಂಡರೊಂದಿಗೆ ಚರ್ಚಿಸಿ, ರೈತರ ಸಮಸ್ಯೆಗಳ ಬಗ್ಗೆ ತಮಗೆ ಮಾಹಿತಿಯಿದ್ದು, ಶೀಘ್ರದಲ್ಲಿಯೇ ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಮೇರೆಗೆ ಧರಣಿ ಹಿಂಪಡೆದರು.
ಇದನ್ನೂ ಓದಿ : ಒಂದೇ ಸಂಘಟನೆಯಡಿ ಬ್ರಾಹ್ಮಣರು ಒಂದಾಗಬೇಕು: ಅಶೋಕ ಹಾರನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.