Iran: ಇರಾನ್‌ನಿಂದ ಭಾರತೀಯರಿಗೆ ವೀಸಾರಹಿತ ಪ್ರವಾಸ ಸೌಲಭ್ಯ


Team Udayavani, Feb 7, 2024, 5:39 AM IST

iran Flags

ಹೊಸದಿಲ್ಲಿಯಲ್ಲಿರುವ ಇರಾನ್‌ನ ರಾಯಭಾರ ಕಚೇರಿಯು ಮಂಗಳವಾರ ಈ ಸಂಬಂಧ ಅಧಿಕೃತ ಘೋಷಣೆ ಮಾಡಿದೆ. ಇನ್ನು ಮುಂದೆ ಭಾರತೀ ಯರು 15 ದಿನಗಳ ಮಟ್ಟಿಗೆ ಇರಾನ್‌ಗೆ ವೀಸಾ ರಹಿತವಾಗಿ ಪ್ರವಾಸ ಕೈಗೊಳ್ಳಬಹುದಾಗಿದೆ. ಫೆ. 4 ರಿಂದ ಅನ್ವಯವಾಗುವಂತೆ ಇಸ್ಲಾಮಿಕ್‌ ರಿಪಬ್ಲಿಕ್‌ ಆಫ್ ಇರಾನ್‌ ಸರಕಾರ ಭಾರತೀಯರು ವೀಸಾರಹಿತವಾಗಿ ಇರಾನ್‌ ಪ್ರವಾಸ ಕೈಗೊಳ್ಳ ಬಹುದಾಗಿದೆ ಎಂದು ತಿಳಿಸಿದೆ. ಇದೇ ವೇಳೆ ಈ ವೀಸಾರಹಿತ ಸೌಲಭ್ಯ ಪಡೆಯಲು ಕೆಲವು ಷರತ್ತುಗಳನ್ನು ಕೂಡ ಇರಾನ್‌ ಸರಕಾರ ವಿಧಿಸಿದೆ.

ಭಾರತ ಮತ್ತು ಇರಾನ್‌ ನಡುವಣ ಸಂಬಂಧವನ್ನು ಪುನಃಸ್ಥಾಪಿಸುವ ಕ್ರಮವಾಗಿ ಇರಾನ್‌ ಸರಕಾರ ಈ ಘೋಷಣೆ ಮಾಡಿದೆ. ಇರಾನ್‌ನ ಈ ನಿರ್ಧಾರದಿಂದ ಉಭಯ ದೇಶಗಳ ನಡುವೆ ಸಾಂಸ್ಕೃತಿಕ ಬಾಂಧವ್ಯ ವೃದ್ಧಿಯಾಗುವುದರ ಜತೆಯಲ್ಲಿ ಇರಾನ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ. ಈ ಹಿಂದೆ ಇರಾನ್‌, ಭಾರತಕ್ಕೆ ಗರಿಷ್ಠ ಪ್ರಮಾಣದಲ್ಲಿ ತೈಲ ಪೂರೈಸುತ್ತಿತ್ತಾದರೂ ಅಮೆರಿಕದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಅವರು, ಇರಾನ್‌ ಮೇಲೆ ನಿರ್ಬಂಧಗಳನ್ನು ಹೇರಿದ ಬಳಿಕ ಇರಾನ್‌ನಿಂದ ಭಾರತಕ್ಕೆ ಪೂರೈಕೆಯಾಗುತ್ತಿದ್ದ ತೈಲದ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ.

ಷರತ್ತುಗಳೇನು?
ಇರಾನ್‌ಗೆ ಪ್ರವಾಸ ತೆರಳಬಯಸುವ ಭಾರತೀಯರು ಸಾಮಾನ್ಯ ಭಾರತೀಯ ಪಾಸ್‌ಪೋರ್ಟ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ವೀಸಾರಹಿತವಾಗಿ ಭೇಟಿ ನೀಡುವ ಭಾರತೀಯರು ಗರಿಷ್ಠ 15 ದಿನಗಳವರೆಗೆ ಇರಾನ್‌ನಲ್ಲಿ ತಂಗಬಹುದಾಗಿದೆ. ಆದರೆ ಈ ಅವಧಿಯನ್ನು ಯಾವ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ. ಅಷ್ಟು ಮಾತ್ರವಲ್ಲದೆ ಪ್ರತೀ ಆರು ತಿಂಗಳುಗಳಿಗೊಮ್ಮೆ ಭಾರತೀಯರು ವೀಸಾರಹಿತವಾಗಿ ಇರಾನ್‌ಗೆ ಭೇಟಿ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪ್ರವಾಸದ ದೃಷ್ಟಿಯಿಂದ ಇರಾನ್‌ಗೆ ಭೇಟಿ ನೀಡುವವರಿಗೆ ಮಾತ್ರವೇ ಈ ವೀಸಾರಹಿತ ಸೌಲಭ್ಯ ಅನ್ವಯವಾಗಲಿದೆ.

ದೀರ್ಘ‌ಕಾಲ ಇರಾನ್‌ನಲ್ಲಿ ಉಳಿಯ ಬಯಸುವವರು ಮತ್ತು ಆರು ತಿಂಗಳ ಅವಧಿಯಲ್ಲಿ ಪದೇ ಪದೆ ಇರಾನ್‌ಗೆ ಭೇಟಿ ನೀಡ ಬಯಸುವವರು ಕಡ್ಡಾಯವಾಗಿ ಹಾಲಿ ನಿಯಮಾವಳಿಗಳಂತೆಯೇ ರಾಯಭಾರ ಕಚೇರಿಯಿಂದ ವೀಸಾವನ್ನು ಪಡೆಯಬೇಕು. ವಾಣಿಜ್ಯ, ವ್ಯವಹಾರ ಮತ್ತಿತರ ಉದ್ದೇಶಗಳಿಗಾಗಿ ಇರಾನ್‌ಗೆ ಭೇಟಿ ನೀಡುವವರು ವೀಸಾ ಹೊಂದಿರುವುದು ಅತ್ಯಗತ್ಯ.

ವಾಯು ಮಾರ್ಗದ ಮೂಲಕ ಇರಾನ್‌ಗೆ ಪ್ರಯಾಣಿಸುವ ಭಾರತೀಯರಿಗೆ ಮಾತ್ರವೇ ಈ ವೀಸಾರಹಿತ ಸೌಲಭ್ಯ ಪಡೆಯಲು ಅವಕಾಶ ನೀಡಲಾಗಿದೆ. ಭೂ ಮತ್ತು ಜಲಸಾರಿಗೆ ಮೂಲಕ ಇರಾನ್‌ ಪ್ರವಾಸ ಕೈಗೊಳ್ಳಲಿಚ್ಛಿಸುವವರಿಗೆ ವೀಸಾರಹಿತ ಪ್ರಯಾಣದ ಸೌಲಭ್ಯ ಅನ್ವಯಿಸದು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.