ತುಳುನಾಡಿನ ಶ್ರದ್ಧಾಭಕ್ತಿಯ “ಬಿಸು’ ಆಚರಣೆ
Team Udayavani, Apr 16, 2022, 6:30 AM IST
ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಶುಕ್ರವಾರ ಬಿಸು ಅಥವಾ ವಿಷು ಹಬ್ಬ (ಸೌರಮಾನ ಯುಗಾದಿ)ವನ್ನು ದೇವಸ್ಥಾನ, ಮನೆ ಮತ್ತು ಸಂಘ ಸಂಸ್ತೆಗಳಲ್ಲಿ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರ, ಸುರ್ಯ ಸದಾಶಿವ ರುದ್ರ ದೇವಸ್ಥಾನ, ಉಜಿರೆ ಜನಾರ್ದನ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಸಜಿಪ ಮಿತ್ತಮಜಲು ನಾಲ್ಕೈತ್ತಾಯ ದೈವಸ್ಥಾನ ಸೇರಿದಂತೆ ವಿವಿಧೆಡೆ ವಿಷುಕಣಿ ಪೂಜೆ, ವಿಶೇಷ ಪೂಜೆ ಸಹಿತ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.
ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಮಹತೋಭಾರ ಶ್ರೀ ಮಂಗಳಾದೇವಿ ಕ್ಷೇತ್ರ, ಕದ್ರಿ ಶ್ರೀ ಮಂಜುನಾಥ ಕ್ಷೇತ್ರ, ಕೊಡಿಯಾಲ್ಬೈಲ್ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ
ದಲ್ಲಿಯೂ ಬಿಸು ಹಬ್ಬದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.
ಉಡುಪಿಯಲ್ಲಿ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಆನೆಗುಡ್ಡೆ ಸಿದ್ಧಿ ವಿನಾಯಕ ದೇವಸ್ಥಾನ, ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನ, ನೀಲಾವರ ಮಹಿಷ ಮರ್ದಿನೀ, ಕಾರ್ಕಳದ ಅನಂತಶಯನ ದೇವಸ್ಥಾನಗಳಲ್ಲಿ ಯುಗಾದಿಯನ್ನು ಆಚರಿಸಲಾ ಯಿತು. ದೇವಸ್ಥಾನಗಳಲ್ಲಿ ಭಕ್ತರ ಸಂದಣಿ ಇತ್ತು.
ಇದನ್ನೂ ಓದಿ:ಮಳೆ ಅವಾಂತರಕ್ಕೆ 10ಕ್ಕೂ ಮನೆಗಳಿಗೆ ಹಾನಿ, ಸಿಡಿಲಿಗೆ ತೆಂಗಿನ ಮರ ಭಸ್ಮ
ಬಿಸು: ತುಳುವಿನಲ್ಲೇ ಶುಭಕೋರಿದ ಸಿಎಂ
ಮಂಗಳೂರು: ತುಳುನಾಡಿನಲ್ಲಿ ಶುಕ್ರವಾರ ಬಿಸು ಹಬ್ಬ ಆಚರಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಳು ಭಾಷೆಯಲ್ಲೇ ಹಬ್ಬದ ಶುಭಾಶಯ ಕೋರಿದ್ದಾರೆ. “ಪೊಸ ವರ್ಸೊದ ಪೊಸ ಗಲಿಗೆಗ್ ಪೊಸ ಬುಲೆಕ್ಲೆನ ಕಣಿ ದೀದ್ ಪೊಲ್ಸುದ ತುಡರ್ ಪೊತ್ತಾದ್ ಬಿಸು-ಕಣಿಕ್ ಎಡ್ಡೆಪ್ಪು ಬಾಮ್ಯೊಂದುಲ್ಲೆ… ಮಹಾ ಜನತೆಗ್ ಬಿಸು-ವಿಷು ಪಬೊìದ ಎಡ್ಡೆಪ್ಪುಲು’ ಎಂದು ತುಳು ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.