ವಿಟ್ಲ ಪಟ್ಟಣ ಪಂಚಾಯತ್‌ : 50 ದಿನ ಕಳೆದರೂ ಆಡಳಿತ ವ್ಯವಸ್ಥೆಗೆ ಚಾಲನೆ ಸಿಕ್ಕಿಲ್ಲ!


Team Udayavani, Feb 22, 2022, 1:00 PM IST

ವಿಟ್ಲ ಪಟ್ಟಣ ಪಂಚಾಯತ್‌ : 50 ದಿನ ಕಳೆದರೂ ಆಡಳಿತ ವ್ಯವಸ್ಥೆಗೆ ಚಾಲನೆ ಸಿಕ್ಕಿಲ್ಲ!

ವಿಟ್ಲ : ಪಟ್ಟಣ ಪಂಚಾಯತ್‌ ಎರಡನೇ ಅವಧಿಯ ಚುನಾವಣೆ ಡಿ. 27ಕ್ಕೆ ನಡೆದು, ಡಿ. 30ಕ್ಕೆ ಮತ ಎಣಿಕೆಯಾಗಿ ವಿಜಯಿ ಅಭ್ಯರ್ಥಿಗಳ ಅಧಿಕೃತ ಘೋಷಣೆ ಯಾಗಿದೆ. 50 ದಿನಗಳ ಬಳಿಕವೂ ಮೀಸಲಾತಿ ಪ್ರಕ್ರಿಯೆ ಘೋಷಣೆಯಾಗಿಲ್ಲ. ಪರಿಣಾಮವಾಗಿ ನೂತನ ಆಡಳಿತ ವ್ಯವಸ್ಥೆಗೆ ಚಾಲನೆ ಸಿಕ್ಕಿಲ್ಲ. ಚುನಾವಣೆ ಬಳಿಕ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಸರಕಾರ ಈ ರೀತಿ ಕಡೆಗಣಿಸುತ್ತಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಚುನಾವಣೆಯಲ್ಲಿ 12 ಬಿಜೆಪಿ, 5 ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ 1 ಸ್ಥಾನ ಗಳಲ್ಲಿ ಜಯ ಗಳಿಸಿದ್ದು, ಬಿಜೆಪಿಗೆ ಅಧಿಕಾರ ನಡೆಸುವ ಯೋಗ ಸತತ ಎರಡನೇ ಬಾರಿ ಲಭಿಸಿದೆ. ಕಾಂಗ್ರೆಸ್‌ ಕಳೆದ ಅವಧಿಯಲ್ಲಿದ್ದ ಒಂದು ಸ್ಥಾನ ಕಳೆದುಕೊಂಡು 5 ಸ್ಥಾನಕ್ಕೆ ಕುಸಿದರೆ, ಎಸ್‌ ಡಿಪಿಐ ಖಾತೆ ತೆರೆದಿದೆ. 8ನೇ ವಾರ್ಡ್‌ನಲ್ಲಿ ತ್ರಿಕೋನ ಸ್ಪರ್ಧೆಯಿದ್ದರೂ ಕೊನೆಗೆ ಬಿಜೆಪಿ ಮತ್ತು ಎಸ್‌ಡಿಪಿಐ ನಡುವೆ ಪೈಪೋಟಿ ನಡೆದಿತ್ತು. ಕಾಂಗ್ರೆಸ್‌ ಮೂರನೇ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. 18ನೇ ವಾರ್ಡ್‌ ನಲ್ಲಿ ತ್ರಿಕೋನ ಸ್ಪರ್ಧೆಯಿದ್ದರೆ ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ನಡುವೆ ಪೈಪೋಟಿ ನಡೆದಿತ್ತು. ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. 11ನೇ ವಾರ್ಡ್‌ನ ಅಭ್ಯರ್ಥಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜಾನ್‌ ಡಿ’ಸೋಜಾ ಕೇವಲ 15 ಮತಗಳನ್ನು ಪಡೆದುಕೊಂಡಿದ್ದು 18 ವಾರ್ಡ್‌ಗಳಲ್ಲಿ ಓರ್ವ ಅಭ್ಯರ್ಥಿ ಕನಿಷ್ಠ ಮತ ಪಡೆದವರೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ : ಚರಂಡಿಗೆ ಉರುಳಿ ಬಿದ್ದ ಕಾರು: ಮಲ್ಯಾಡಿ ಮೂಲದ ಉದ್ಯಮಿ ಸಾವು

ಸೂಕ್ತ ಕ್ರಮ
ರಾಜ್ಯದ ಎಲ್ಲ ಪ. ಪಂ.ಚುನಾವಣೆ ನಡೆದಿದ್ದು, ಮೀಸಲಾತಿ ಪಟ್ಟಿ ಮಾಡಬೇಕಾಗಿದೆ. ಇದರಿಂದ ತಡವಾಗಿರಬಹುದು. ಈ ತಿಂಗಳ ಕೊನೆಯೊಳಗೆ ಮೀಸಲಾತಿ ಪಟ್ಟಿ ಬಿಡುಗಡೆಯಾಗಬಹುದು ಎಂದು ಅಧಿಕೃತವಾಗಿ ತಿಳಿದು ಬಂದಿದೆ.

– ಅರುಣ್‌ ಎಂ.ವಿಟ್ಲ, ಸದಸ್ಯರು, ವಿಟ್ಲ ಪ.ಪಂ.

ಮೀಸಲಾತಿ ಪಟ್ಟಿ ಬಂದಿಲ್ಲ
ಪ. ಪಂ.ಗೆ ಆಯ್ಕೆಯಾಗಿ 2ತಿಂಗಳು ಆಗುತ್ತಿದೆ. ಇನ್ನೂ ಮೀಸಲಾತಿ ಪಟ್ಟಿ ಬಂದಿಲ್ಲ. ನಮ್ಮನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕಚೇರಿಗೆ ನಾವು ಹೋಗುತ್ತೇವೆ. ಆದರೆ ಆಡಳಿತ ವ್ಯವಸ್ಥೆ ಸುಸೂತ್ರವಾಗಿರದೇ ಇದ್ದಾಗ ನಾವೆಣಿಸಿದಂತೆ ಕಾರ್ಯಗಳನ್ನು ವೇಗವಾಗಿ ಪರಿಹರಿಸಲಾಗುತ್ತಿಲ್ಲ. ಮುಖ್ಯಾಧಿಕಾರಿ ಬಿಟ್ಟರೆ ಸಿಬಂದಿಗಳೂ ಇಲ್ಲ. ಕಂದಾಯ ಅಧಿಕಾರಿ, ಎಂಜಿನಿಯರ್‌ ಇತ್ಯಾದಿ ಹುದ್ದೆಗಳನ್ನು ಭರ್ತಿ ಮಾಡದೇ ಇದ್ದಲ್ಲಿ ಈ ಸಮಸ್ಯೆ ಪರಿಹರಿಸಲು ಕಷ್ಟವಾಗುತ್ತದೆ.

– ಅಬ್ದುಲ್‌ ರಹಿಮಾನ್‌, ಸದಸ್ಯರು, ವಿಟ್ಲ ಪ.ಪಂ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.