ಪಿಂಚಣಿ, ಬಡ್ಡಿ ಹಣಕ್ಕಾಗಿ ನಿವೃತ್ತ ಪ್ರಾಂಶುಪಾಲರ ಅಲೆದಾಟ; ಶಿಕ್ಷಣ ಇಲಾಖೆ ನಿರ್ಲಕ್ಷ್ಯ

ಕೋರ್ಟ್‌ ತೀರ್ಪು ನೀಡಿ 9 ತಿಂಗಳು ಕಳೆದರು ಆದೇಶ ಪಾಲನೆಯಾಗಲೇ ಇಲ್ಲ.

Team Udayavani, Feb 14, 2023, 10:06 AM IST

ಪಿಂಚಣಿ, ಬಡ್ಡಿ ಹಣಕ್ಕಾಗಿ ನಿವೃತ್ತ ಪ್ರಾಂಶುಪಾಲರ ಅಲೆದಾಟ; ಶಿಕ್ಷಣ ಇಲಾಖೆ ನಿರ್ಲಕ್ಷ್ಯ

ಉಡುಪಿ: ನಿವೃತ್ತರಾಗಿ 21 ವರ್ಷ ಕಳೆದರೂ ಅಲೆವೂರಿನ ರಘುಪತಿ ಭಟ್‌ ಅವರಿಗೆ ನಿವೃತ್ತಿ ಅನಂತರದ ಸೌಲಭ ಸಿಕ್ಕಿಲ್ಲ. ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೀಗಾಗಿದ್ದು, ಸವಲತ್ತು ಪಡೆಯಲು ನಿತ್ಯ ಅಲೆದಾಡುವಂತಾಗಿದೆ ಎಂದು ಮಾನವ ಹಕ್ಕುಗಳ ರಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ರವೀಂದ್ರನಾಥ್‌ ಶಾನುಭಾಗ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಅವಗಣಿಸಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪು ಅಫಿದವಿತ್‌ ನೀಡುವ ಮೂಲಕ ನ್ಯಾಯಾಲಯದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕಾರ್ಕಳ ವೆಂಕಟರಮಣ ಪ.ಪೂ.ಕಾಲೇಜಿನಲ್ಲಿ 33 ವರ್ಷ ಸೇವೆ ಸಲ್ಲಿಸಿ ಪ್ರಾಂಶುಪಾಲರಾಗಿ 2002ರಲ್ಲಿ ರಘುಪತಿ ಭಟ್‌ ನಿವೃತ್ತರಾಗಿದ್ದರು. ಅವಶ್ಯ ದಾಖಲೆಗಳನ್ನು ಪಿಂಚಣಿ ಇಲಾಖೆಗೆ ಕಳುಹಿಸುವಂತೆ ನಿವೃತ್ತಿಗೆ 3 ತಿಂಗಳ ಮೊದಲೇ ಕಾಲೇಜು ಆಡಳಿತ ಮಂಡಳಿಗೆ ವಿನಂತಿಸಿದ್ದರು. ಆದರೆ ಇಲಾಖೆಯ ನಿರ್ಲಕ್ಷದಿಂದ 15 ವರ್ಷ ಗಳ ಪಿಂಚಣಿ ಹಣ ಮಂಜೂರು ಆಗಲೇ ಇಲ್ಲ. ಸಾಕಷ್ಟು ಬಾರಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸಿ ಸತಾಯಿಸಿದ್ದಾರೆ. ಅನಂತರ ಜಿಲ್ಲಾ ನ್ಯಾಯಾಲಯ ಹೈಕೋರ್ಟ್‌ ವರೆಗೂ ಸುದೀರ್ಘ‌ ನ್ಯಾಯಾಂಗ ಹೋರಾಟ ನಡೆಸಿ 2017ರಲ್ಲಿ 177 ತಿಂಗಳ ಪಿಂಚಣಿಯನ್ನು ಒಂದೆ ಗಂಟಿನಲ್ಲಿ ಸಂದಾಯ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಬಡ್ಡಿಹಣ ಕೊಡಲೇ ಇಲ್ಲ
ಪಿಂಚಣಿ ಮೊತ್ತವನ್ನು ತಡವಾಗಿ ಪಾವತಿಸಿರುವುದಕ್ಕೆ ನಿಯಮಾನುಸಾರ ಇಲಾಖೆ 15 ವರ್ಷಗಳ ಬಡ್ಡಿ ಸೇರಿಸಬೇಕಿತ್ತು. ಇದನ್ನು ಕೇಳಿದಾಗ ಪಿಂಚಣಿ ಇಲಾಖೆ ಅವರಲ್ಲಿ ವಿಚಾರಿಸಿ ದಾಗ ಪಿಂಚಣಿ ಬಾಕಿ ನೀಡಿದ್ದೇವೆ. ಇದರ ಬಡ್ಡಿಗಾಗಿ ನೀವು ಶಿಕ್ಷಣ ಇಲಾಖೆಯನ್ನೇ ಸಂಪರ್ಕಿಸಬೇಕು ಎಂದು ಹೇಳಿದ್ದರು.

ಅಸಹಾಯಕರಾದ ಭಟ್‌ 2 ವರ್ಷಗಳ ಕಾಲ ಪಿಯುಸಿ ಬೋರ್ಡ್‌ನ ನಿರ್ದೇಶಕರಿಂದ ಹಿಡಿದು ಶಿಕ್ಷಣ ಇಲಾಖೆ ಕಾರ್ಯದರ್ಶಿ ವರೆಗೆ ಹತ್ತಾರು ಪತ್ರ ಬರೆದರೂ ಯಾರೂ ಉತ್ತರಿಸಿಲ್ಲ. 2019ರಲ್ಲಿ ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದರು. 18 ತಿಂಗಳ ವಿಚಾರಣೆ ನಡೆಸಿದ ಕೋರ್ಟ್‌ 2021ರ ಜನವರಿಯಲ್ಲಿ ತೀರ್ಪು ನೀಡಿ ಪಿಂಚಣಿ ಬಾಕಿ ಅವಧಿಗೆ ಶೇ. 8ರಂತೆ ಬಡ್ಡಿ ನೀಡುವಂತೆ ಆದೇಶಿಸಿತು. ಬಡ್ಡಿ ಪಾವತಿಗೆ 4 ವಾರಗಳ ಗಡುವು ವಿಧಿಸಿತು. ಮಾತ್ರವಲ್ಲ ಸರಕಾರವು ಮೊತ್ತವನ್ನು ವಿಳಂಬಕ್ಕೆ ಕಾರಣರಾದವರಿಂದಲೇ ವಸೂಲು ಮಾಡುವಂತೆ ನಿರ್ದೇಶನ ನೀಡಿತು.

ಬಂಧನ ಭೀತಿಯಿಂದ ಎಚ್ಚೆತ್ತ ಅಧಿಕಾರಿಗಳು
ಕೋರ್ಟ್‌ ತೀರ್ಪು ನೀಡಿ 9 ತಿಂಗಳು ಕಳೆದರು ಆದೇಶ ಪಾಲನೆಯಾಗಲೇ ಇಲ್ಲ. ಈ ಬಗ್ಗೆ ನ್ಯಾಯಾಂಗ ನಿಂದನೆಯ ದಾವೆ ಹೂಡಲಾಯಿತು. ನ್ಯಾಯಾಲಯಕ್ಕೆ ಹಾಜರಾದ ಸರಕಾರಿ ವಕೀಲರು ಹಣಕಾಸು ಸಚಿವಾಲಯದಿಂದ ಒಪ್ಪಿಗೆ ಪಡೆಯಲು 3 ವಾರಗಳ ಅವಧಿ ಕೇಳಿದರು. ಗಡುವು ಮುಗಿದು 10 ತಿಂಗಳಾದರೂ ಬಡ್ಡಿ ಪಾವತಿಸಿರಲಿಲ್ಲ. 2022ರಲ್ಲಿ ಈ ಬಗ್ಗೆ ಕೋರ್ಟ್ ಗೆ ಮೆಮೊ ಸಲ್ಲಿಸಲಾಯಿತು. ಇಲಾಖೆಯ ಅಧಿಕಾರಿಗಳು ಬಂಧನ ಆದೇಶದ ಭೀತಿಯಿಂದ ತಮ್ಮದೇ ರೀತಿಯಲ್ಲಿ ಲೆಕ್ಕಹಾಕಿ ನ್ಯಾಯವಾಗಿ ನೀಡಬೇಕಾದ ಬಡ್ಡಿಮೊತ್ತದ ಅರ್ಧಕ್ಕಿಂತಲೂ ಕಡಿಮೆ ಹಣವನ್ನು ಅವರ ಖಾತೆಗೆ ಜಮಾ ಮಾಡಿದ್ದಾರೆ. ಅವರಿಗೆ ಪೂರ್ಣ ಮೊತ್ತ ಸಿಗುವವರೆಗೆ ಪ್ರತಿಷ್ಠಾನ ಈ ಹೋರಾಟದಲ್ಲಿ ಸಂಪೂರ್ಣ ಸಹಕಾರ ಮುಂದುವರಿಸಲಿದೆ ಎಂದು ಶ್ಯಾನುಭಾಗ್‌ ಹೇಳಿದರು.

80 ವರ್ಷದ ನಾನು 21 ವರ್ಷಗಳ ಹೋರಾಟ ನಡೆಸಿದ್ದೇನೆ. ಸಾಯುವವರೆಗೂ ನ್ಯಾಯಾಲಯಕ್ಕೆ ದಾವೆ ದಾಖಲಿಸುತ್ತಲೇ ಇರಬೇಕೇ ಎಂದು ರಘುಪತಿ ಭಟ್‌ ಪತ್ರಿಕಾಗೋಷ್ಠಿಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದರು.

ತಪ್ಪಿತಸ್ಥರಿಂದ ಹಣ ವಸೂಲಾಗಲಿ
ನ್ಯಾಯಾಲಯದ ಆದೇಶ ಪಾಲನೆ ಕಾರ್ಯಾಂಗದ ಕರ್ತವ್ಯ. ಆದೇಶ ಪಡೆದ ಮೇಲೂ ಪಾಲನೆಯಾಗುತ್ತಿಲ್ಲ. ಬಡ್ಡಿಯ ಮೊತ್ತ ಹಾಗೂ ದಾವೆಗೆ ತಗಲಿದ ಖರ್ಚನ್ನು ಈ ಅನ್ಯಾಯಕ್ಕೆ ಕಾರಣರಾದವರಿಂದ ವಸೂಲಿ ಮಾಡಬೇಕು ಎಂದು ಕೋರ್ಟ್‌ ಸೂಚಿಸಿದೆ. ಪ್ರತಿಷ್ಠಾನ ಈಗಾಗಲೇ ಈ ಸಮಸ್ಯೆಗೆ ಇಲಾಖೆಯ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಎಷ್ಟು ಕಾರಣ ಎಂಬ ತನಿಖೆ ನಡೆಸುತ್ತಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲೂ ಅರ್ಜಿ ಸಲ್ಲಿಸಿದ್ದೇವೆ. ಅಧಿಕಾರಿಗಳು, ಮಾಡಿರುವ ಅನ್ಯಾಯಕ್ಕೆ ಜನರ ತೆರಿಗೆ ಹಣ ಏಕೆ ಪೋಲಾಗಬೇಕು? ಅನ್ಯಾಯ ಮಾಡಿದವರು ತಕ್ಕ ಬೆಲೆ ತೆರಲೇಬೇಕು ಎಂದು ರವೀಂದ್ರನಾಥ್‌ ಆಗ್ರಹಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.